4:42 PM Monday6 - May 2024
ಬ್ರೇಕಿಂಗ್ ನ್ಯೂಸ್
ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ…

ಇತ್ತೀಚಿನ ಸುದ್ದಿ

ಡಿವೈಎಫ್ ಐ ರಾಜ್ಯ ಸಮ್ಮೇಳನ: ‘ಸಾಂಗತ್ಯ 2024’ ಕ್ರೀಡಾಕೂಟ ಸಮಾರೋಪ

05/02/2024, 21:32

ಮಂಗಳೂರು(reporterkarnataka.com): ಡಿವೈಎಫ್ ಐ ರಾಜ್ಯ ಸಮ್ಮೇಳನದ ಭಾಗವಾಗಿ ಡಿವೈಎಫ್ ಐ ಉಳ್ಳಾಲ ತಾಲೂಕು ಸಮಿತಿಯಿಂದ ಆಯೋಜಿಸಲ್ಪಟ್ಟ ಸಾಂಗತ್ಯ 2024 ಕ್ರೀಡಾಕೂಟ ಸಮಾರೋಪಗೊಂಡಿತು.


ಕ್ರೀಡಾಕೂಟದ ಉದ್ಘಾಟನೆಯನ್ನು ರಾಷ್ಟ್ರೀಯ ವೈಟ್ಲಿಫ್ಟರ್ ನಿಶೆಲ್ ಡೆಲ್ಫಿನ್ ಡಿಸೋಜ ಅವರು ಉದ್ಘಾಟಿಸಿದರು. ವೇದಿಕೆಯಲ್ಲಿ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್, ತಾಲೂಕು ಅಧ್ಯಕ್ಷ ರಝಾಕ್ ಮೊಂಟೆಪದವು, ಟ್ವೈಕೊಂಡೊ ಪಟು ಆಸಿಫ್ ಕಿನ್ಯ,ರಾಷ್ಟ್ರೀಯ ಕಬಡ್ಡಿ ಆಟಗಾರ ಗೋಪಿನಾಥ್ ಕಾಪಿಕಾಡ್, ಉಳ್ಳಾಲ ತಾಲೂಕು ಮಟ್ಟದ ಸ್ವಾಗತ ಸಮಿತಿ ಗೌರವಾಧ್ಯಕ್ಷರಾದ ರಾಮಚಂದ್ರ ಬಬ್ಬುಕಟ್ಟೆ, ಹರೇಕಳ ಗ್ರಾಮ ಪಂಚಾಯತ್ ಸದಸ್ಯರಾದ ಅಶ್ರಫ್ ಹರೇಕಳ ಉಪಸ್ಥಿತರಿದ್ದರು. ಕ್ರೀಡೆಯಲ್ಲಿ ಸಾಧನೆಗೈದವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಉಳ್ಳಾಲ ತಾಲೂಕಿನ ಸುಮಾರು 15 ಘಟಕಗಳು ಕ್ರೀಡೆಯಲ್ಲಿ ಭಾಗವಹಿಸಿದ್ದವು. ಕ್ರೀಡಾಕೂಟದಲ್ಲಿ ಯುವಕರಿಗೆ ಕ್ರಿಕೆಟ್, ವಾಲಿಬಾಲ್, ಹಗ್ಗಜಗ್ಗಾಟ, ರಿಲೇ, 200 ಮೀ ಓಟ,ಗೋಣಿಚೀಲ ಓಟ, ಗುಂಡೆಸೆತ ಮತ್ತು ಯುವತಿಯರಿಗೆ ತ್ರೋಬಾಲ್, ಹಗ್ಗಜಗ್ಗಾಟ, ರಿಲೇ, 200 ಮೀ ಓಟ, ಮಡಕೆ ಹೊಡೆಯುವುದು, ಸೂಪರ್ ಮಿನಿಟ್ ಹಾಗೂ ಶಾಲಾ ಮಟ್ಟದಲ್ಲಿ 3 ವಿಧದ ಪಂದ್ಯಗಳಿದ್ದವು. ಕುತ್ತಾರು ಬಟ್ಟೆದಡಿ ಘಟಕವು ಬರೋಬ್ಬರಿ 97 ಅಂಕ ಪಡೆದು ಚಾಂಪಿಯನ್ ಪಟ್ಟಕ್ಕೇರಿತು. ಅಭಿನಂದನೆಗಳು. ಕೊನೆಯಲ್ಲಿ ಸಮಾರೋಪ ಸಮಾರಂಭ ವಿಜೃಂಭಣೆಯಿಂದ ನಡೆಯಿತು. ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ರಾಷ್ಟ್ರೀಯ ವಾಲಿಬಾಲ್ ಆಟಗಾರ ಪ್ರವೀಣ್ ಕುಮಾರ್, ಡಿವೈಎಫ್ಐ ಮಾಜಿ ರಾಜ್ಯಾಧ್ಯಕ್ಷ ಸುನೀಲ್ ಕುಮಾರ್ ಬಜಾಲ್, ಮುನ್ನೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಹಾಬಲ ದೆಪ್ಪಲಿಮಾರ್, ಸುಕುಮಾರ್ ತೊಕ್ಕೊಟ್ಟು, ರಮೇಶ್ ಉಳ್ಳಾಲ್ , ರಾಮಚಂದ್ರ ಬಬ್ಬುಕಟ್ಟೆ,ಜನಾರ್ದನ ಕುತ್ತಾರ್ ಉಪಸ್ಥಿತರಿದ್ದರು. ಕ್ರೀಡೆಯಲ್ಲಿ ಭಾಗವಹಿಸಿದ ಎಲ್ಲಾ ಘಟಕಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು