1:59 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಡಿವೈಎಫ್ ಐ ರಾಜ್ಯ ಸಮ್ಮೇಳನ: ‘ಸಾಂಗತ್ಯ 2024’ ಕ್ರೀಡಾಕೂಟ ಸಮಾರೋಪ

05/02/2024, 21:32

ಮಂಗಳೂರು(reporterkarnataka.com): ಡಿವೈಎಫ್ ಐ ರಾಜ್ಯ ಸಮ್ಮೇಳನದ ಭಾಗವಾಗಿ ಡಿವೈಎಫ್ ಐ ಉಳ್ಳಾಲ ತಾಲೂಕು ಸಮಿತಿಯಿಂದ ಆಯೋಜಿಸಲ್ಪಟ್ಟ ಸಾಂಗತ್ಯ 2024 ಕ್ರೀಡಾಕೂಟ ಸಮಾರೋಪಗೊಂಡಿತು.


ಕ್ರೀಡಾಕೂಟದ ಉದ್ಘಾಟನೆಯನ್ನು ರಾಷ್ಟ್ರೀಯ ವೈಟ್ಲಿಫ್ಟರ್ ನಿಶೆಲ್ ಡೆಲ್ಫಿನ್ ಡಿಸೋಜ ಅವರು ಉದ್ಘಾಟಿಸಿದರು. ವೇದಿಕೆಯಲ್ಲಿ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್, ತಾಲೂಕು ಅಧ್ಯಕ್ಷ ರಝಾಕ್ ಮೊಂಟೆಪದವು, ಟ್ವೈಕೊಂಡೊ ಪಟು ಆಸಿಫ್ ಕಿನ್ಯ,ರಾಷ್ಟ್ರೀಯ ಕಬಡ್ಡಿ ಆಟಗಾರ ಗೋಪಿನಾಥ್ ಕಾಪಿಕಾಡ್, ಉಳ್ಳಾಲ ತಾಲೂಕು ಮಟ್ಟದ ಸ್ವಾಗತ ಸಮಿತಿ ಗೌರವಾಧ್ಯಕ್ಷರಾದ ರಾಮಚಂದ್ರ ಬಬ್ಬುಕಟ್ಟೆ, ಹರೇಕಳ ಗ್ರಾಮ ಪಂಚಾಯತ್ ಸದಸ್ಯರಾದ ಅಶ್ರಫ್ ಹರೇಕಳ ಉಪಸ್ಥಿತರಿದ್ದರು. ಕ್ರೀಡೆಯಲ್ಲಿ ಸಾಧನೆಗೈದವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು. ಉಳ್ಳಾಲ ತಾಲೂಕಿನ ಸುಮಾರು 15 ಘಟಕಗಳು ಕ್ರೀಡೆಯಲ್ಲಿ ಭಾಗವಹಿಸಿದ್ದವು. ಕ್ರೀಡಾಕೂಟದಲ್ಲಿ ಯುವಕರಿಗೆ ಕ್ರಿಕೆಟ್, ವಾಲಿಬಾಲ್, ಹಗ್ಗಜಗ್ಗಾಟ, ರಿಲೇ, 200 ಮೀ ಓಟ,ಗೋಣಿಚೀಲ ಓಟ, ಗುಂಡೆಸೆತ ಮತ್ತು ಯುವತಿಯರಿಗೆ ತ್ರೋಬಾಲ್, ಹಗ್ಗಜಗ್ಗಾಟ, ರಿಲೇ, 200 ಮೀ ಓಟ, ಮಡಕೆ ಹೊಡೆಯುವುದು, ಸೂಪರ್ ಮಿನಿಟ್ ಹಾಗೂ ಶಾಲಾ ಮಟ್ಟದಲ್ಲಿ 3 ವಿಧದ ಪಂದ್ಯಗಳಿದ್ದವು. ಕುತ್ತಾರು ಬಟ್ಟೆದಡಿ ಘಟಕವು ಬರೋಬ್ಬರಿ 97 ಅಂಕ ಪಡೆದು ಚಾಂಪಿಯನ್ ಪಟ್ಟಕ್ಕೇರಿತು. ಅಭಿನಂದನೆಗಳು. ಕೊನೆಯಲ್ಲಿ ಸಮಾರೋಪ ಸಮಾರಂಭ ವಿಜೃಂಭಣೆಯಿಂದ ನಡೆಯಿತು. ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ರಾಷ್ಟ್ರೀಯ ವಾಲಿಬಾಲ್ ಆಟಗಾರ ಪ್ರವೀಣ್ ಕುಮಾರ್, ಡಿವೈಎಫ್ಐ ಮಾಜಿ ರಾಜ್ಯಾಧ್ಯಕ್ಷ ಸುನೀಲ್ ಕುಮಾರ್ ಬಜಾಲ್, ಮುನ್ನೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮಹಾಬಲ ದೆಪ್ಪಲಿಮಾರ್, ಸುಕುಮಾರ್ ತೊಕ್ಕೊಟ್ಟು, ರಮೇಶ್ ಉಳ್ಳಾಲ್ , ರಾಮಚಂದ್ರ ಬಬ್ಬುಕಟ್ಟೆ,ಜನಾರ್ದನ ಕುತ್ತಾರ್ ಉಪಸ್ಥಿತರಿದ್ದರು. ಕ್ರೀಡೆಯಲ್ಲಿ ಭಾಗವಹಿಸಿದ ಎಲ್ಲಾ ಘಟಕಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು