10:12 PM Monday22 - September 2025
ಬ್ರೇಕಿಂಗ್ ನ್ಯೂಸ್
ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:…

ಇತ್ತೀಚಿನ ಸುದ್ದಿ

ಕೋಲಕ್ಕೆ ಹೋದ ನನ್ನ ನಡೆಯನ್ನು ನೂರು ಜನ ಒಪ್ಪಿಕೊಂಡಿದ್ದಾರೆ, ಯಾರೋ ಒಬ್ಬ ಫೇಸ್‌ಬುಕ್‌ ಗೀಚಿದರೆ ಗೀಚಲಿ: ಸ್ಪೀಕರ್ ಖಾದರ್

05/02/2024, 21:53

ಬೆಂಗಳೂರು(reporterkarnataka.com): ಪನೋಲಿಬೈಲಿನ ಕೋಲದಲ್ಲಿ ಭಾಗವಹಿಸಿದ ನನ್ನ ನಡೆಯನ್ನು ನೂರು ಜನ ಒಪ್ಪಿಕೊಂಡಿದ್ದಾರೆ.
ನಮ್ಮ ಬ್ಲಾಕಿನ ಅಧ್ಯಕ್ಷರು ಅವರ ಧಾರ್ಮಿಕ ಭಾವನೆಗಳಿಗೆ ಅನುಗುಣವಾಗಿ ಒಂದು ಹರಕೆ ಇಟ್ಟಿದ್ದರು. ಅವರ ಹರಕೆಗೆ ಗೌರವ ನೀಡುವುದು ನಮ್ಮ ಸಂಸ್ಕೃತಿ. ಯಾರೋ ಒಬ್ಬ ಸಾಮಾಜಿಕ ಜಾಲತಾಣದಲ್ಲಿ ಗೀಚಿದರೆ, ನೂರು ಜನ ನನ್ನ ನಡೆಯನ್ನು ಒಪ್ಪಿದ್ದಾರೆ ಎಂದು ಸ್ಪೀಕ‌ರ್ ಯು.ಟಿ.ಖಾದರ್ ಹೇಳಿದರು.
ಬಂಟ್ವಾಳ ತಾಲೂಕಿನ ಪನೋಲಿ ಬೈಲ್‌ನಲ್ಲಿ ನಡೆದ ಕೋಲದಲ್ಲಿ ಭಾಗವಹಿಸಿದ್ದ ಯು.ಟಿ.ಖಾದರ್ ನಡೆಯನ್ನು ಖಂಡಿಸಿ ಸಾಲೆತ್ತೂರು ಫೈಝಿ ಅಲ್ ಹಮ್ಹಾನಿ ಎಂಬವರು ಫೇಸ್‌ಬುಕ್‌ನಲ್ಲಿ ಹಾಕಿರುವ ಪೋಸ್ಟ್ ಕುರಿತು ಸೋಮವಾರ ವಿಧಾನಸೌಧದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.
ಕೋಲಕ್ಕೆ ಹೋಗುವುದು ನಮ್ಮ ಸಂಸ್ಕತಿ. ಯಾರೋ ಒಬ್ಬ ಸಾಮಾಜಿಕ ಜಾಲತಾಣದಲ್ಲಿ ಗೀಚಿದರೆ, ನೂರು ಜನ ನನ್ನ ನಡೆಯನ್ನು ಒಪ್ಪಿದ್ದಾರೆ ಎಂದು ಖಾದರ್ ನುಡಿದರು.
ಸಾಮಾಜಿಕ ಜಾಲತಾಣದಲ್ಲಿ ಗೀಚುವವರನ್ನು ಇತಿಹಾಸ ನೆನಪಿನಲ್ಲಿಟ್ಟುಕೊಳ್ಳುವುದಿಲ್ಲ. ಪ್ರಶ್ನೆ ಕೇಳುವವರನ್ನು ಇತಿಹಾಸ ನೆನಪಿನಲ್ಲಿಟ್ಟುಕೊಳ್ಳುವುದಿಲ್ಲ. ಯಾರು ಕೆಲಸ ಮಾಡುತ್ತಾರೆ, ಯಾರು ಉತ್ತರ ಕೊಡುತ್ತಾರೋ ಅವರನ್ನು ಮಾತ್ರ ಇತಿಹಾಸ ನೆನಪಿನಲ್ಲಿಟ್ಟುಕೊಳ್ಳುತ್ತದೆ ಎಂದು ಖಾದ‌ರ್ ಹೇಳಿದರು.
ಆ ಒಬ್ಬನಿಗೆ ಯಾಕೆ ಮಹತ್ವ ನೀಡಬೇಕು ಎಂದು ಪ್ರಶ್ನಿಸಿದ ಅವರು, ಅದರ ಅಗತ್ಯವು ಇಲ್ಲ. ಶೇ.99ರಷ್ಟು ಜನರು ಎಲ್ಲ ಧರ್ಮಗಳಿಗೆ ಗೌರವ ನೀಡುತ್ತಾ ನಮ್ಮ ಜವಾಬ್ದಾರಿಗಳನ್ನು ನಿರ್ವಹಿಸಿಕೊಂಡು ಹೋಗುತ್ತಿದ್ದಾರೆ ಎಂದು ಖಾದರ್ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು