2:10 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ದ.ಕ.ಜಿಲ್ಲಾ ಪತ್ರಕರ್ತರ ಗ್ರಾಮ ವಾಸ್ತವ್ಯದ ಆಮಂತ್ರಣ ಪತ್ರಿಕೆ ಸಚಿವ ಈಶ್ವರ ಖಂಡ್ರೆ ಬಿಡುಗಡೆ

05/02/2024, 23:44

ಮಂಗಳೂರು(reporterkarnataka.com): ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯತ್ ಸುಳ್ಯ ತಾಲೂಕು ಪಂಚಾಯತ್, ದ.ಕ. ಜಿಲ್ಲಾ ಪೊಲೀಸ್ ಇಲಾಖೆ, ಹರಿಹರ, ಕೊಲ್ಲಮೊಗರು ಗ್ರಾಮ ಪಂಚಾಯತ್ ಮತ್ತು ಸ್ಥಳೀಯಾಡಳಿತ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಕೊಲ್ಲಮೊಗ್ರ ಬಂಗ್ಲೆಗುಡ್ಡೆ ಸರಕಾರಿ ಶಾಲಾ ವಠಾರದಲ್ಲಿ ಫೆ.10ರಂದು ನಡೆಯಲಿರುವ ಪತ್ರಕರ್ತರ 5ನೇ ಗ್ರಾಮ ವಾಸ್ತವ್ಯದ ಆಮಂತ್ರಣ ಪತ್ರವನ್ನು ಅರಣ್ಯ ಹಾಗೂ ಪರಿಸರ ಸಚಿವ ಈಶ್ವರ ಖಂಡ್ರೆ ಹಾಗೂ ರಾಜ್ಯ ಸಭಾ ಸದಸ್ಯರು ಹಾಗೂ ಶ್ರೀ ಧರ್ಮಸ್ಥಳ ಕ್ಷೇತ್ರಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಧರ್ಮಸ್ಥಳದಲ್ಲಿ ಏಕಬಳಕೆ ಪ್ಲಾಸ್ಟಿಕ್ ನಿಷೇಧ ಘೋಷಣೆ ಕಾರ್ಯಕ್ರಮದಲ್ಲಿಂದು ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಡಾ. ವೀರೇಂದ್ರ ಹೆಗ್ಗಡೆ ಅವರು ಮಾತನಾಡಿ, ಮಹಾತ್ಮಗಾಂಧಿಯವರು ಸಮಸ್ಯೆ ತಿಳಿಯಲು ದೇಶಾದ್ಯಂತ ಜನ ಸಾಮಾನ್ಯರು ಸಂಚರಿಸುತ್ತಿದ್ದ ತೃತೀಯ ದರ್ಜೆಯ ರೈಲು ಬೋಗಿಯಲ್ಲಿ ಜನರ ಬಳಿ ತೆರಳು ತ್ತಿದ್ದರು. ಅವರು ಜನರೊಂದಿಗೆ ಇದ್ದಾಗ ಜನ ಜೀವನ ಸಮಸ್ಯೆ ಅರ್ಥ ಮಾಡಿಕೊಳ್ಳಲು ಸಾಧ್ಯ. ಪತ್ರಕರ್ತರು ಗ್ರಾಮದ ಜನರ ಸಮಸ್ಯೆ ಬಗ್ಗೆ ಅರಿತು ಕೊಳ್ಳಲು ಗ್ರಾಮಕ್ಕೆ ತೆರಳಲು ಚಿಂತನೆ ಮಾಡಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಶ್ಲಾಘನೀಯ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘದ ಅಧ್ಯಕ್ಷ ರೋನ್ಸ್ ಬಂಟ್ವಾಳ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ,ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ಬೆಳ್ತಂಗಡಿ ತಾಲೂಕು ಕಾರ್ಯ ನಿರತ ಪತ್ರ ಕರ್ತರ ಸಂಘದ ಅಧ್ಯಕ್ಷ ಚೈತ್ರೇಶ್ ಇಳಂತಿಲ , ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಮಲಾ, ಉಪಾಧ್ಯಕ್ಷ ಶ್ರೀನಿವಾಸ ರಾವ್ ಪಂಚಾಯತ್ ಕಾರ್ಯ ದರ್ಶಿ ಡಾ.ರಘು ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು