5:32 AM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಜಯಶ್ರಿ ಕೊರಳಿಗೆ ಎಸ್ಸೆಸ್ಸೆಲ್ಸಿ ವಿಜಯ ಮಾಲೆ: 44ನೇ ವಯಸ್ಸಿನಲ್ಲಿ ಮಂಗಳೂರು ವಿವಿ ಕಾಲೇಜು ಅಟೆಂಡರ್ ಪಾಸ್ !

09/08/2021, 21:16

ಅನುಷ್ ಪಂಡಿತ್ ಮಂಗಳೂರು
info.reporterkarnata@gmail.com

ಕಲಿಯಬೇಕು ಎನ್ನುವ ಛಲ ಇದ್ದರೆ ವಯಸ್ಸು ಅಡ್ಡಿ ಬರೋದಿಲ್ಲ ಎನ್ನುವುದಕ್ಕೆ ತಾಜ ನಿದರ್ಶನ ಮಂಗಳೂರು ಯುನಿವರ್ಸಿಟಿ ಕಾಲೇಜಿನ ಸಸ್ಯ ಶಾಸ್ತ್ರ ವಿಭಾಗದ ಟೆಂಪರರಿ ಅಟೆಂಡರ್ ಜಯಶ್ರೀ ಅವರು.

ಹೌದು, ಕಲಿಯಬೇಕು ಎನ್ನುವ ಮನಸ್ಸಿದ್ದರೆ ವಯಸ್ಸಿನ ಮಾತಿಲ್ಲ ಎನ್ನುವಂತೆ ತನ್ನ 44 ವಯಸ್ಸಿನ ಕೆಲಸದ ಜತೆಗೆ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಿರ್ಣರಾಗಿದ್ದಾರೆ. ಮೂಲತ ವೆಲೆನ್ಸಿಯ ಸೂಟರ್ ಪೇಟೆಯಲ್ಲಿ ತನ್ನ ಪತಿ ಪ್ರದೀಪ್ ಅವರೊಂದಿಗೆ  ವಾಸಿಸುತ್ತಿದ್ದಾರೆ. ಪತಿ ಬ್ಯಾಂಕ್ ನಲ್ಲಿ ವಾಚ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಜಯಶ್ರೀ ಅವರು 5ನೇ ತರಗತಿ ವರೆಗೆ ಕಲಿತಿದ್ದಾರೆ.10ನೇ ತರಗತಿಗೆ ನೇರವಾಗಿ ಪರೀಕ್ಷೆ ಬರೆದಿದ್ದಾರೆ. ಖಾಸಗಿ ಟ್ಯೂಶನ್ ಕ್ಲಾಸ್ ನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ ನಡೆಸಿದ್ದಾರೆ.

ಬಾಲ್ಯದಲ್ಲಿ ಕಿತ್ತು ತಿನ್ನುವ ಬಡತನದಲ್ಲೇ ಬೆಳೆದ ಇವರು ಮಂಗಳೂರಿನ ಪದಂಗಡಿಯ ಗಂಧಕಾಡ್ ಪರಿಸರದಲ್ಲಿ ದಿವಂಗತ ಸೀತಾರಾಮ ಹಾಗೂ ಜಾನಕಿ (75) ಅವರಿಗೆ 4 ಹೆಣ್ಣು ಹಾಗೂ1 ಗಂಡು ಮಕ್ಕಳು. ಮೂವರು ಅಕ್ಕಂದಿರ ನಂತರದವರೇ ಜಯಶ್ರೀ.

ಜಯಶ್ರೀ ಅವರೆ ಹೇಳುವ ಪ್ರಕಾರ ಯೂನಿವರ್ಸಿಟಿ ಕಾಲೇಜಿನ ಸಸ್ಯ ಶಾಸ್ತ್ರ ವಿಭಾಗದ ಉಪನ್ಯಾಸಕರಾದ ಶೋಭಾ ಮೇಡಂ ಹಾಗೂ ಉದಯ ಕುಮಾರ್ ಇರ್ವತ್ತೂರು ಅವರೆ ಕಲಿಯಲು ದಾರಿ ತೋರಿಸಿದವರು. ಕಲಿಯುವ ವಯಸ್ಸಲ್ಲಿ ಕಲಿಯಲು ಮನಸಿದ್ದರೂ ಪ್ರೇರೇಪಣೆ ನೀಡುವರಾರಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸುತ್ತಾರೆ.

ನನಗೆ ಪರ್ಮನೆಂಟ್ ಆದರೆ ಸಂತೋಷ ಜೀವನಕ್ಕೆ ದಾರಿಯಾಗುತ್ತದೆ ಎನ್ನುವ ಆಶಯ. ಈಗಿನ ಮಕ್ಕಳಿಗೆ ನಾನು ಹೇಳುವುದೊಂದೇ ಅವಕಾಶ ಸಿಕ್ಕಾಗ ಕಲಿಯಿರಿ ಮತ್ತೆ ಪರಿತಪಿಸ ಬೇಡಿ. ಕಳೆದು ಹೋದ ಸಮಯ ಮತ್ತೆ ಬಾರದು

ಜಯಶ್ರೀ, ಅಟೆಂಡರ್, ಮಂಗಳೂರು ವಿವಿ ಕಾಲೇಜು

ಇತ್ತೀಚಿನ ಸುದ್ದಿ

ಜಾಹೀರಾತು