7:40 AM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಜಯಶ್ರಿ ಕೊರಳಿಗೆ ಎಸ್ಸೆಸ್ಸೆಲ್ಸಿ ವಿಜಯ ಮಾಲೆ: 44ನೇ ವಯಸ್ಸಿನಲ್ಲಿ ಮಂಗಳೂರು ವಿವಿ ಕಾಲೇಜು ಅಟೆಂಡರ್ ಪಾಸ್ !

09/08/2021, 21:16

ಅನುಷ್ ಪಂಡಿತ್ ಮಂಗಳೂರು
info.reporterkarnata@gmail.com

ಕಲಿಯಬೇಕು ಎನ್ನುವ ಛಲ ಇದ್ದರೆ ವಯಸ್ಸು ಅಡ್ಡಿ ಬರೋದಿಲ್ಲ ಎನ್ನುವುದಕ್ಕೆ ತಾಜ ನಿದರ್ಶನ ಮಂಗಳೂರು ಯುನಿವರ್ಸಿಟಿ ಕಾಲೇಜಿನ ಸಸ್ಯ ಶಾಸ್ತ್ರ ವಿಭಾಗದ ಟೆಂಪರರಿ ಅಟೆಂಡರ್ ಜಯಶ್ರೀ ಅವರು.

ಹೌದು, ಕಲಿಯಬೇಕು ಎನ್ನುವ ಮನಸ್ಸಿದ್ದರೆ ವಯಸ್ಸಿನ ಮಾತಿಲ್ಲ ಎನ್ನುವಂತೆ ತನ್ನ 44 ವಯಸ್ಸಿನ ಕೆಲಸದ ಜತೆಗೆ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಿರ್ಣರಾಗಿದ್ದಾರೆ. ಮೂಲತ ವೆಲೆನ್ಸಿಯ ಸೂಟರ್ ಪೇಟೆಯಲ್ಲಿ ತನ್ನ ಪತಿ ಪ್ರದೀಪ್ ಅವರೊಂದಿಗೆ  ವಾಸಿಸುತ್ತಿದ್ದಾರೆ. ಪತಿ ಬ್ಯಾಂಕ್ ನಲ್ಲಿ ವಾಚ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಜಯಶ್ರೀ ಅವರು 5ನೇ ತರಗತಿ ವರೆಗೆ ಕಲಿತಿದ್ದಾರೆ.10ನೇ ತರಗತಿಗೆ ನೇರವಾಗಿ ಪರೀಕ್ಷೆ ಬರೆದಿದ್ದಾರೆ. ಖಾಸಗಿ ಟ್ಯೂಶನ್ ಕ್ಲಾಸ್ ನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ ನಡೆಸಿದ್ದಾರೆ.

ಬಾಲ್ಯದಲ್ಲಿ ಕಿತ್ತು ತಿನ್ನುವ ಬಡತನದಲ್ಲೇ ಬೆಳೆದ ಇವರು ಮಂಗಳೂರಿನ ಪದಂಗಡಿಯ ಗಂಧಕಾಡ್ ಪರಿಸರದಲ್ಲಿ ದಿವಂಗತ ಸೀತಾರಾಮ ಹಾಗೂ ಜಾನಕಿ (75) ಅವರಿಗೆ 4 ಹೆಣ್ಣು ಹಾಗೂ1 ಗಂಡು ಮಕ್ಕಳು. ಮೂವರು ಅಕ್ಕಂದಿರ ನಂತರದವರೇ ಜಯಶ್ರೀ.

ಜಯಶ್ರೀ ಅವರೆ ಹೇಳುವ ಪ್ರಕಾರ ಯೂನಿವರ್ಸಿಟಿ ಕಾಲೇಜಿನ ಸಸ್ಯ ಶಾಸ್ತ್ರ ವಿಭಾಗದ ಉಪನ್ಯಾಸಕರಾದ ಶೋಭಾ ಮೇಡಂ ಹಾಗೂ ಉದಯ ಕುಮಾರ್ ಇರ್ವತ್ತೂರು ಅವರೆ ಕಲಿಯಲು ದಾರಿ ತೋರಿಸಿದವರು. ಕಲಿಯುವ ವಯಸ್ಸಲ್ಲಿ ಕಲಿಯಲು ಮನಸಿದ್ದರೂ ಪ್ರೇರೇಪಣೆ ನೀಡುವರಾರಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸುತ್ತಾರೆ.

ನನಗೆ ಪರ್ಮನೆಂಟ್ ಆದರೆ ಸಂತೋಷ ಜೀವನಕ್ಕೆ ದಾರಿಯಾಗುತ್ತದೆ ಎನ್ನುವ ಆಶಯ. ಈಗಿನ ಮಕ್ಕಳಿಗೆ ನಾನು ಹೇಳುವುದೊಂದೇ ಅವಕಾಶ ಸಿಕ್ಕಾಗ ಕಲಿಯಿರಿ ಮತ್ತೆ ಪರಿತಪಿಸ ಬೇಡಿ. ಕಳೆದು ಹೋದ ಸಮಯ ಮತ್ತೆ ಬಾರದು

ಜಯಶ್ರೀ, ಅಟೆಂಡರ್, ಮಂಗಳೂರು ವಿವಿ ಕಾಲೇಜು

ಇತ್ತೀಚಿನ ಸುದ್ದಿ

ಜಾಹೀರಾತು