3:37 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಜಯಶ್ರಿ ಕೊರಳಿಗೆ ಎಸ್ಸೆಸ್ಸೆಲ್ಸಿ ವಿಜಯ ಮಾಲೆ: 44ನೇ ವಯಸ್ಸಿನಲ್ಲಿ ಮಂಗಳೂರು ವಿವಿ ಕಾಲೇಜು ಅಟೆಂಡರ್ ಪಾಸ್ !

09/08/2021, 21:16

ಅನುಷ್ ಪಂಡಿತ್ ಮಂಗಳೂರು
info.reporterkarnata@gmail.com

ಕಲಿಯಬೇಕು ಎನ್ನುವ ಛಲ ಇದ್ದರೆ ವಯಸ್ಸು ಅಡ್ಡಿ ಬರೋದಿಲ್ಲ ಎನ್ನುವುದಕ್ಕೆ ತಾಜ ನಿದರ್ಶನ ಮಂಗಳೂರು ಯುನಿವರ್ಸಿಟಿ ಕಾಲೇಜಿನ ಸಸ್ಯ ಶಾಸ್ತ್ರ ವಿಭಾಗದ ಟೆಂಪರರಿ ಅಟೆಂಡರ್ ಜಯಶ್ರೀ ಅವರು.

ಹೌದು, ಕಲಿಯಬೇಕು ಎನ್ನುವ ಮನಸ್ಸಿದ್ದರೆ ವಯಸ್ಸಿನ ಮಾತಿಲ್ಲ ಎನ್ನುವಂತೆ ತನ್ನ 44 ವಯಸ್ಸಿನ ಕೆಲಸದ ಜತೆಗೆ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಿರ್ಣರಾಗಿದ್ದಾರೆ. ಮೂಲತ ವೆಲೆನ್ಸಿಯ ಸೂಟರ್ ಪೇಟೆಯಲ್ಲಿ ತನ್ನ ಪತಿ ಪ್ರದೀಪ್ ಅವರೊಂದಿಗೆ  ವಾಸಿಸುತ್ತಿದ್ದಾರೆ. ಪತಿ ಬ್ಯಾಂಕ್ ನಲ್ಲಿ ವಾಚ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಜಯಶ್ರೀ ಅವರು 5ನೇ ತರಗತಿ ವರೆಗೆ ಕಲಿತಿದ್ದಾರೆ.10ನೇ ತರಗತಿಗೆ ನೇರವಾಗಿ ಪರೀಕ್ಷೆ ಬರೆದಿದ್ದಾರೆ. ಖಾಸಗಿ ಟ್ಯೂಶನ್ ಕ್ಲಾಸ್ ನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ ನಡೆಸಿದ್ದಾರೆ.

ಬಾಲ್ಯದಲ್ಲಿ ಕಿತ್ತು ತಿನ್ನುವ ಬಡತನದಲ್ಲೇ ಬೆಳೆದ ಇವರು ಮಂಗಳೂರಿನ ಪದಂಗಡಿಯ ಗಂಧಕಾಡ್ ಪರಿಸರದಲ್ಲಿ ದಿವಂಗತ ಸೀತಾರಾಮ ಹಾಗೂ ಜಾನಕಿ (75) ಅವರಿಗೆ 4 ಹೆಣ್ಣು ಹಾಗೂ1 ಗಂಡು ಮಕ್ಕಳು. ಮೂವರು ಅಕ್ಕಂದಿರ ನಂತರದವರೇ ಜಯಶ್ರೀ.

ಜಯಶ್ರೀ ಅವರೆ ಹೇಳುವ ಪ್ರಕಾರ ಯೂನಿವರ್ಸಿಟಿ ಕಾಲೇಜಿನ ಸಸ್ಯ ಶಾಸ್ತ್ರ ವಿಭಾಗದ ಉಪನ್ಯಾಸಕರಾದ ಶೋಭಾ ಮೇಡಂ ಹಾಗೂ ಉದಯ ಕುಮಾರ್ ಇರ್ವತ್ತೂರು ಅವರೆ ಕಲಿಯಲು ದಾರಿ ತೋರಿಸಿದವರು. ಕಲಿಯುವ ವಯಸ್ಸಲ್ಲಿ ಕಲಿಯಲು ಮನಸಿದ್ದರೂ ಪ್ರೇರೇಪಣೆ ನೀಡುವರಾರಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸುತ್ತಾರೆ.

ನನಗೆ ಪರ್ಮನೆಂಟ್ ಆದರೆ ಸಂತೋಷ ಜೀವನಕ್ಕೆ ದಾರಿಯಾಗುತ್ತದೆ ಎನ್ನುವ ಆಶಯ. ಈಗಿನ ಮಕ್ಕಳಿಗೆ ನಾನು ಹೇಳುವುದೊಂದೇ ಅವಕಾಶ ಸಿಕ್ಕಾಗ ಕಲಿಯಿರಿ ಮತ್ತೆ ಪರಿತಪಿಸ ಬೇಡಿ. ಕಳೆದು ಹೋದ ಸಮಯ ಮತ್ತೆ ಬಾರದು

ಜಯಶ್ರೀ, ಅಟೆಂಡರ್, ಮಂಗಳೂರು ವಿವಿ ಕಾಲೇಜು

ಇತ್ತೀಚಿನ ಸುದ್ದಿ

ಜಾಹೀರಾತು