3:14 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಜಯಶ್ರಿ ಕೊರಳಿಗೆ ಎಸ್ಸೆಸ್ಸೆಲ್ಸಿ ವಿಜಯ ಮಾಲೆ: 44ನೇ ವಯಸ್ಸಿನಲ್ಲಿ ಮಂಗಳೂರು ವಿವಿ ಕಾಲೇಜು ಅಟೆಂಡರ್ ಪಾಸ್ !

09/08/2021, 21:16

ಅನುಷ್ ಪಂಡಿತ್ ಮಂಗಳೂರು
info.reporterkarnata@gmail.com

ಕಲಿಯಬೇಕು ಎನ್ನುವ ಛಲ ಇದ್ದರೆ ವಯಸ್ಸು ಅಡ್ಡಿ ಬರೋದಿಲ್ಲ ಎನ್ನುವುದಕ್ಕೆ ತಾಜ ನಿದರ್ಶನ ಮಂಗಳೂರು ಯುನಿವರ್ಸಿಟಿ ಕಾಲೇಜಿನ ಸಸ್ಯ ಶಾಸ್ತ್ರ ವಿಭಾಗದ ಟೆಂಪರರಿ ಅಟೆಂಡರ್ ಜಯಶ್ರೀ ಅವರು.

ಹೌದು, ಕಲಿಯಬೇಕು ಎನ್ನುವ ಮನಸ್ಸಿದ್ದರೆ ವಯಸ್ಸಿನ ಮಾತಿಲ್ಲ ಎನ್ನುವಂತೆ ತನ್ನ 44 ವಯಸ್ಸಿನ ಕೆಲಸದ ಜತೆಗೆ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಿರ್ಣರಾಗಿದ್ದಾರೆ. ಮೂಲತ ವೆಲೆನ್ಸಿಯ ಸೂಟರ್ ಪೇಟೆಯಲ್ಲಿ ತನ್ನ ಪತಿ ಪ್ರದೀಪ್ ಅವರೊಂದಿಗೆ  ವಾಸಿಸುತ್ತಿದ್ದಾರೆ. ಪತಿ ಬ್ಯಾಂಕ್ ನಲ್ಲಿ ವಾಚ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಜಯಶ್ರೀ ಅವರು 5ನೇ ತರಗತಿ ವರೆಗೆ ಕಲಿತಿದ್ದಾರೆ.10ನೇ ತರಗತಿಗೆ ನೇರವಾಗಿ ಪರೀಕ್ಷೆ ಬರೆದಿದ್ದಾರೆ. ಖಾಸಗಿ ಟ್ಯೂಶನ್ ಕ್ಲಾಸ್ ನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ ನಡೆಸಿದ್ದಾರೆ.

ಬಾಲ್ಯದಲ್ಲಿ ಕಿತ್ತು ತಿನ್ನುವ ಬಡತನದಲ್ಲೇ ಬೆಳೆದ ಇವರು ಮಂಗಳೂರಿನ ಪದಂಗಡಿಯ ಗಂಧಕಾಡ್ ಪರಿಸರದಲ್ಲಿ ದಿವಂಗತ ಸೀತಾರಾಮ ಹಾಗೂ ಜಾನಕಿ (75) ಅವರಿಗೆ 4 ಹೆಣ್ಣು ಹಾಗೂ1 ಗಂಡು ಮಕ್ಕಳು. ಮೂವರು ಅಕ್ಕಂದಿರ ನಂತರದವರೇ ಜಯಶ್ರೀ.

ಜಯಶ್ರೀ ಅವರೆ ಹೇಳುವ ಪ್ರಕಾರ ಯೂನಿವರ್ಸಿಟಿ ಕಾಲೇಜಿನ ಸಸ್ಯ ಶಾಸ್ತ್ರ ವಿಭಾಗದ ಉಪನ್ಯಾಸಕರಾದ ಶೋಭಾ ಮೇಡಂ ಹಾಗೂ ಉದಯ ಕುಮಾರ್ ಇರ್ವತ್ತೂರು ಅವರೆ ಕಲಿಯಲು ದಾರಿ ತೋರಿಸಿದವರು. ಕಲಿಯುವ ವಯಸ್ಸಲ್ಲಿ ಕಲಿಯಲು ಮನಸಿದ್ದರೂ ಪ್ರೇರೇಪಣೆ ನೀಡುವರಾರಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸುತ್ತಾರೆ.

ನನಗೆ ಪರ್ಮನೆಂಟ್ ಆದರೆ ಸಂತೋಷ ಜೀವನಕ್ಕೆ ದಾರಿಯಾಗುತ್ತದೆ ಎನ್ನುವ ಆಶಯ. ಈಗಿನ ಮಕ್ಕಳಿಗೆ ನಾನು ಹೇಳುವುದೊಂದೇ ಅವಕಾಶ ಸಿಕ್ಕಾಗ ಕಲಿಯಿರಿ ಮತ್ತೆ ಪರಿತಪಿಸ ಬೇಡಿ. ಕಳೆದು ಹೋದ ಸಮಯ ಮತ್ತೆ ಬಾರದು

ಜಯಶ್ರೀ, ಅಟೆಂಡರ್, ಮಂಗಳೂರು ವಿವಿ ಕಾಲೇಜು

ಇತ್ತೀಚಿನ ಸುದ್ದಿ

ಜಾಹೀರಾತು