8:40 PM Friday25 - July 2025
ಬ್ರೇಕಿಂಗ್ ನ್ಯೂಸ್
Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ… ಬಿಜೆಪಿ ನಡೆಸಿರುವ ಅಕ್ರಮವೇ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎನ್ನುವ ಸತ್ಯ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್ ಐಟಿಯಿಂದ ಹಿರಿಯ ಐಪಿಎಸ್ ಅಧಿಕಾರಿ ಸೌಮ್ಯಲತಾ… ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ: ಕೊಲೆ ಶಂಕೆ; ಕುಟುಂಬಸ್ಥರಿಂದ ದೂರು ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗ ಅಭಿವೃದ್ಧಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ನಂಜನಗೂಡು ಹಲ್ಲರೆ ಗ್ರಾಮದಲ್ಲಿ ಆರದ ಎರಡು ಕೋಮುಗಳ ಸಂಘರ್ಷ: ನಾಯಕ ಸಮುದಾಯದಿಂದ ಬೃಹತ್ ಪ್ರತಿಭಟನೆ

06/02/2024, 18:42

*ಹಲ್ಲರೆ ಗ್ರಾಮದ ಎರಡು ಕೋಮುಗಳ ಸಂಘರ್ಷಕ್ಕೆ ಜಿಲ್ಲಾ ಮತ್ತು ತಾಲೂಕು ಆಡಳಿತದ ವೈಫಲ್ಯವೇ ಕಾರಣ ಪ್ರತಿಭಟನೆಯಲ್ಲಿ ಗಂಭೀರ ಆರೋಪ*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ಎರಡು ಕೋಮುಗಳ ಘರ್ಷಣೆ ಪ್ರಕರಣ ಖಂಡಿಸಿ ತಾಲ್ಲೂಕು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು.


ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಜಿಲ್ಲಾ ಮತ್ತು ತಾಲ್ಲೂಕು ಆಡಳಿತದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು.
ಹಲ್ಲರೆ ಗ್ರಾಮದಲ್ಲಿ ನಡೆದ ಘಟನೆ ಖಂಡಿಸುತ್ತೇವೆ ಹಾಗೂ ನಾಯಕ ಜನಾಂಗದವರಿಗೆ ಸೂಕ್ತ ರಕ್ಷಣೆಯನ್ನು ನೀಡಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ನಿರಪರಾಧಿಗಳನ್ನು ಪೊಲೀಸರು ಕೂಡಲೇ ಬಿಡುಗಡೆ ಮಾಡಬೇಕು. ಗಲಾಟೆಗೆ ಪ್ರೇರೇಪಣೆ ನೀಡಿದವರನ್ನು ಕೂಡಲೇ ಬಂಧಿಸಬೇಕು. ಈ ಘಟನೆಯನ್ನು ನಿವೃತ್ತ ನ್ಯಾಯಮೂರ್ತಿಗಳಿಂದ ಉನ್ನತ ಮಟ್ಟದ ತನಿಖೆಗೆ ಒಳಪಡಿಸಬೇಕು ಹಾಗೂ ಗ್ರಾಮದಲ್ಲಿ ಶಾಂತಿ ಸಭೆಯನ್ನು ನಡೆಸಬೇಕು ಎಂದು ಮುಖಂಡರು ಒತ್ತಾಯಿಸಿದರು. ನಂತರ ನಂಜನಗೂಡಿನ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್ ಅವರ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು. ನಂಜನಗೂಡಿನ ಡಿವೈಎಸ್ಪಿ ರಘು ರವರಿಂದ ಬಿಗಿ ಪೊಲೀಸ್ ಬಂದೋಬಸ್ತು ನೀಯೋಜನೆ ಮಾಡಲಾಗಿತ್ತು.
ಪ್ರತಿಭಟನೆಯಲ್ಲಿ ನಾಯಕ ಜನಾಂಗದ ಗೌರವಾಧ್ಯಕ್ಷ ಚಿಕ್ಕ ರಂಗನಾಯಕ,ತಾಲೂಕು ಅಧ್ಯಕ್ಷರಾದ ಬಂಗಾರಸ್ವಾಮಿ ಪ್ರಧಾನ ಕಾರ್ಯದರ್ಶಿ ನಾಗೇಂದ್ರ, ಖಜಾಂಚಿ ರಂಗಸ್ವಾಮಿ ಮುಖಂಡರಾದ ಹೆಡತಲೆ ನಾಗರಾಜು, ದೊರೆಸ್ವಾಮಿನಾಯಕ,ಕೆ ಡಿ ಮಂಜು, ಮೈಸೂರು ಮತ್ತು ಚಾಮರಾಜನಗರ ಜಿಲ್ಲಾಧ್ಯಕ್ಷ ರಾಮಚಂದ್ರು, ನಾಯಕರ ಯುವ ಸೇನೆ ರಾಜ್ಯಾಧ್ಯಕ್ಷ ರಾಜ್ಯಾಧ್ಯಕ್ಷ ಕಾಟೂರು ದೇವರಾಜ್ ಶಿವನಂಜನಾಯ್ಕ, ಶಿವಣ್ಣ, ಮಹಾದೇವ ನಾಯಕ ಹಾಗೂ ಮಹಿಳೆಯರು ಸೇರಿದಂತೆ ಸಾವಿರಾರು ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು