3:43 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಸಾವಿನಲ್ಲೂ ದುಡ್ಡು ಮಾಡುವ ಅಮಾನವೀಯ ದಂಧೆ: ಕಾಳಸಂತೆಯಲ್ಲಿ ರೆಮಿಡಿಸಿವರ್ ಮಾರಾಟ; 6 ಮಂದಿ ಪೊಲೀಸ್ ವಶಕ್ಕೆ

18/05/2021, 17:48

ಕೋಲಾರ(reporterkarnataka news) : ಸಾವಿನಲ್ಲೂ ದುಡ್ಡು ಮಾಡುವ ಅಮಾನವೀಯ ರೆಮಿಡಿಸಿವರ್ ಇಂಜೆಕ್ಷನ್ ಕಾಳ ಸಂತೆಯಲ್ಲಿ ಮಾರಾಟ ದಂಧೆ ನಗರದಲ್ಲಿಯೂ ನಡೆದಿದ್ದು , ಕಳೆದ ರಾತ್ರಿ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. 

ತಮಗೆ ಬಂದ ಖಚಿತ ಮಾಹಿತಿ ಮೇರೆಗೆ ರೆ ಮಿಸಿವರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಜಾಲದ ಆರು ಜನರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು ಸದ್ಯಕ್ಕೆ ಯಾವುದೇ ಮಾಹಿತಿ ನೀಡುತ್ತಿಲ್ಲ .

ಕಳೆದ ಒಂದು ತಿಂಗಳಿಂದ ಕಾಳಸಂತೆ ಯಲ್ಲಿ ಇಂಜೆಕ್ಷನ್ ಮಾರಾಟವನ್ನು ಇವರು ನಡೆಸುತ್ತಿದ್ದರೆನ್ನಲಾಗಿದ್ದು , ಒಂದು ಇಂಜೆಕ್ಷನ್ ಸುಮಾರು 30 ಸಾವಿರ ರೂಪಾಯಿಗೆ ಮಾರಾಟ ಮಾಡುವ ಮೂಲಕ ಸಾವಿನಲ್ಲೂ ದುಡ್ಡು ಮಾಡುವ ಅಮಾನವೀಯ ದಂಧೆ ನಡೆಸುತ್ತಿದ್ದರೆನ್ನಲಾಗಿದೆ. .ಜಾಲದಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆ ಸಿಬ್ಬಂದಿಗಳು ಹಾಗೂ ವೈದ್ಯರು ಇರುವ ಶಂಕೆ ಇದ್ದು , ವಿಚಾರಣೆಗೆ ಕರೆತಂದವರನ್ನು ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಇಟ್ಟುಕೊಂಡು ಪೊಲೀಸರು ಕೂಲಂಕುಷ ವಿಚಾರಣೆ ನಡೆಸುತ್ತಿದ್ದಾರೆ.

ಆದರೆ , ರಾಜಕೀಯ ಪ್ರಭಾವ ಬಳಸಿಕ ಕೊಂಡು ಬಂಧಿತ ಆರೋಪಿಗಳನ್ನು ರಕ್ಷಿಸಿ ಪ್ರಕರಣವನ್ನು ಮುಚ್ಚಿಹಾಕುವ ಷಡ್ಯಂತ್ರ ನಡೆಯುತ್ತಿದೆಯೆಂಬ ದೂರುಗಳು ಕೇಳಿ ಬರುತ್ತಿವೆ .

ಇತ್ತೀಚಿನ ಸುದ್ದಿ

ಜಾಹೀರಾತು