4:17 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಸಾವಿನಲ್ಲೂ ದುಡ್ಡು ಮಾಡುವ ಅಮಾನವೀಯ ದಂಧೆ: ಕಾಳಸಂತೆಯಲ್ಲಿ ರೆಮಿಡಿಸಿವರ್ ಮಾರಾಟ; 6 ಮಂದಿ ಪೊಲೀಸ್ ವಶಕ್ಕೆ

18/05/2021, 17:48

ಕೋಲಾರ(reporterkarnataka news) : ಸಾವಿನಲ್ಲೂ ದುಡ್ಡು ಮಾಡುವ ಅಮಾನವೀಯ ರೆಮಿಡಿಸಿವರ್ ಇಂಜೆಕ್ಷನ್ ಕಾಳ ಸಂತೆಯಲ್ಲಿ ಮಾರಾಟ ದಂಧೆ ನಗರದಲ್ಲಿಯೂ ನಡೆದಿದ್ದು , ಕಳೆದ ರಾತ್ರಿ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. 

ತಮಗೆ ಬಂದ ಖಚಿತ ಮಾಹಿತಿ ಮೇರೆಗೆ ರೆ ಮಿಸಿವರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಜಾಲದ ಆರು ಜನರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು ಸದ್ಯಕ್ಕೆ ಯಾವುದೇ ಮಾಹಿತಿ ನೀಡುತ್ತಿಲ್ಲ .

ಕಳೆದ ಒಂದು ತಿಂಗಳಿಂದ ಕಾಳಸಂತೆ ಯಲ್ಲಿ ಇಂಜೆಕ್ಷನ್ ಮಾರಾಟವನ್ನು ಇವರು ನಡೆಸುತ್ತಿದ್ದರೆನ್ನಲಾಗಿದ್ದು , ಒಂದು ಇಂಜೆಕ್ಷನ್ ಸುಮಾರು 30 ಸಾವಿರ ರೂಪಾಯಿಗೆ ಮಾರಾಟ ಮಾಡುವ ಮೂಲಕ ಸಾವಿನಲ್ಲೂ ದುಡ್ಡು ಮಾಡುವ ಅಮಾನವೀಯ ದಂಧೆ ನಡೆಸುತ್ತಿದ್ದರೆನ್ನಲಾಗಿದೆ. .ಜಾಲದಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆ ಸಿಬ್ಬಂದಿಗಳು ಹಾಗೂ ವೈದ್ಯರು ಇರುವ ಶಂಕೆ ಇದ್ದು , ವಿಚಾರಣೆಗೆ ಕರೆತಂದವರನ್ನು ಗಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಇಟ್ಟುಕೊಂಡು ಪೊಲೀಸರು ಕೂಲಂಕುಷ ವಿಚಾರಣೆ ನಡೆಸುತ್ತಿದ್ದಾರೆ.

ಆದರೆ , ರಾಜಕೀಯ ಪ್ರಭಾವ ಬಳಸಿಕ ಕೊಂಡು ಬಂಧಿತ ಆರೋಪಿಗಳನ್ನು ರಕ್ಷಿಸಿ ಪ್ರಕರಣವನ್ನು ಮುಚ್ಚಿಹಾಕುವ ಷಡ್ಯಂತ್ರ ನಡೆಯುತ್ತಿದೆಯೆಂಬ ದೂರುಗಳು ಕೇಳಿ ಬರುತ್ತಿವೆ .

ಇತ್ತೀಚಿನ ಸುದ್ದಿ

ಜಾಹೀರಾತು