12:51 PM Tuesday14 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಮಂಗಳೂರು: ಫೆ.10ರಂದು 20ನೇ ವರ್ಷದ ಶ್ರೀ ಕೃಷ್ಣ-ಬಲರಾಮ ರಥಯಾತ್ರೆ; ಎಲ್ಲರಿಗೂ ರಥ ಎಳೆಯಲು‌‌ ಅವಕಾಶ

07/02/2024, 15:55

ಮಂಗಳೂರು(reporterkarnataka.com): ಅಂತಾರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಸ್ಥೆ ಮಂಗಳೂರು ಶಾಖೆಯ ಆಶ್ರಯದಲ್ಲಿ ನಡೆಯಲಿರುವ 20ನೇ ವಾರ್ಷಿಕ ಕೃಷ್ಣ ಬಲರಾಮ ರಥಯಾತ್ರೆ ಉತ್ಸವ ಫೆ.10 ರಂದು ನಗರದ ಪಿವಿಎಸ್ ಮಂದಿರದಲ್ಲಿ ಸಂಜೆ 4.30ಕ್ಕೆ ನಡೆಯಲಿದೆ ಎಂದು ಇಸ್ಕಾನ್‌ನ ಅಧ್ಯಕ್ಷ ಗುಣಾಕರ ರಾಮ ದಾಸ ಹೇಳಿದರು.

ನಗರದ ಇಸ್ಕಾನ್ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಈ ರಥಯಾತ್ರೆಗೆ ರಥವು ಬೆಂಗಳೂರಿನಿಂದ ಬರಲಿದ್ದು, ನಗರದಲ್ಲಿ 5 ಕಿ.ಮೀ. ದೂರ ಸಾಗಲಿದೆ. ರಥವು ಪಿವಿಎಸ್ ಮಂದಿರದಿಂದ, ಶಾರದಾ ವಿದ್ಯಾಲಯ ರಸ್ತೆ, ಟಿ.ವಿ. ರಮಣ ಪೈ ಸಭಾಂಗಣ ವೃತ್ತ, ಮಹಾಮಯಿ ದೇವಸ್ಥಾನ ರಸ್ತೆ, ವೆಂಕಟರಮಣ ದೇವಸ್ಥಾನ ವೃತ್ತ ರಥಬೀದಿ, ಬಿಇಎಂ ಶಾಲೆ ರಸ್ತೆ, ಕುದ್ರೋಳಿ ದೇವಸ್ಥಾನ ರಸ್ತೆ, ಮಣ್ಣಗುಡ್ಡ ರಸ್ತೆ, ಬಲ್ಲಾಳ್ ಭಾಗ್ ರಸ್ತೆ, ಮಹಾತ್ಮ ಗಾಂಧಿ ರಸ್ತೆ ಮೂಲಕ ಇಸ್ಕಾನ್ ಪಿ.ವಿ.ಎಸ್ ರಸ್ತೆಯ ಮೂಲಕ ಸಂಜೆ 7.30_ಕ್ಕೆ ಬಂದು ಸೇರಲಿದೆ ಎಂದರು.
ಈ ರಥಯಾತ್ರೆಗೆ 5 ಸಾವಿರಕ್ಕೂ ಹೆಚ್ಚು ಜನ ಸೇರಲಿದ್ದು, ಎಲ್ಲಾ ಭಕ್ತರಿಗೂ ರಥ ಎಳೆಯುವ ಅವಕಾಶ ಕಲ್ಪಿಸಲಾಗಿದೆ. ರಥಯಾತ್ರೆಯ ನಂತರ ಮಹಾಮಂಗಳಾರತಿ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ಎಂದರು.
ಕಾರ್ಯಕ್ರಮಕ್ಕೆ ಶಾಸಕ ವೇದವ್ಯಾಸ ಕಾಮತ್, ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ. ಮೋಹನ್ ಆಳ್ವ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್, ಮಂಗಳೂರು ನಗರಪಾಲಿಕೆ ಸದಸ್ಯೆ ಜಯಶ್ರೀ ಕುಡ್ವ, ಅಭಿನವ್ ಬನ್ಸಲ್‌ನ ನಿದೇರ್ಶಕ ಎ.ಕೆ. ಬನ್ಸಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಜೊತೆ ಕಾರ್ಯದರ್ಶಿಗಳಾದ ರಾಧ ವಲ್ಲಭ ದಾಸ, ಸುಂದರ ಗೌರ ದಾಸ ಮಾಧ್ಯಮ ಸಲಹೆಗಾರ ಎಂ.ವಿ. ಮಲ್ಯ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು