5:18 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಮಂಗಳೂರು: ಫೆ.10ರಂದು 20ನೇ ವರ್ಷದ ಶ್ರೀ ಕೃಷ್ಣ-ಬಲರಾಮ ರಥಯಾತ್ರೆ; ಎಲ್ಲರಿಗೂ ರಥ ಎಳೆಯಲು‌‌ ಅವಕಾಶ

07/02/2024, 15:55

ಮಂಗಳೂರು(reporterkarnataka.com): ಅಂತಾರಾಷ್ಟ್ರೀಯ ಕೃಷ್ಣ ಪ್ರಜ್ಞಾ ಸಂಸ್ಥೆ ಮಂಗಳೂರು ಶಾಖೆಯ ಆಶ್ರಯದಲ್ಲಿ ನಡೆಯಲಿರುವ 20ನೇ ವಾರ್ಷಿಕ ಕೃಷ್ಣ ಬಲರಾಮ ರಥಯಾತ್ರೆ ಉತ್ಸವ ಫೆ.10 ರಂದು ನಗರದ ಪಿವಿಎಸ್ ಮಂದಿರದಲ್ಲಿ ಸಂಜೆ 4.30ಕ್ಕೆ ನಡೆಯಲಿದೆ ಎಂದು ಇಸ್ಕಾನ್‌ನ ಅಧ್ಯಕ್ಷ ಗುಣಾಕರ ರಾಮ ದಾಸ ಹೇಳಿದರು.

ನಗರದ ಇಸ್ಕಾನ್ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಈ ರಥಯಾತ್ರೆಗೆ ರಥವು ಬೆಂಗಳೂರಿನಿಂದ ಬರಲಿದ್ದು, ನಗರದಲ್ಲಿ 5 ಕಿ.ಮೀ. ದೂರ ಸಾಗಲಿದೆ. ರಥವು ಪಿವಿಎಸ್ ಮಂದಿರದಿಂದ, ಶಾರದಾ ವಿದ್ಯಾಲಯ ರಸ್ತೆ, ಟಿ.ವಿ. ರಮಣ ಪೈ ಸಭಾಂಗಣ ವೃತ್ತ, ಮಹಾಮಯಿ ದೇವಸ್ಥಾನ ರಸ್ತೆ, ವೆಂಕಟರಮಣ ದೇವಸ್ಥಾನ ವೃತ್ತ ರಥಬೀದಿ, ಬಿಇಎಂ ಶಾಲೆ ರಸ್ತೆ, ಕುದ್ರೋಳಿ ದೇವಸ್ಥಾನ ರಸ್ತೆ, ಮಣ್ಣಗುಡ್ಡ ರಸ್ತೆ, ಬಲ್ಲಾಳ್ ಭಾಗ್ ರಸ್ತೆ, ಮಹಾತ್ಮ ಗಾಂಧಿ ರಸ್ತೆ ಮೂಲಕ ಇಸ್ಕಾನ್ ಪಿ.ವಿ.ಎಸ್ ರಸ್ತೆಯ ಮೂಲಕ ಸಂಜೆ 7.30_ಕ್ಕೆ ಬಂದು ಸೇರಲಿದೆ ಎಂದರು.
ಈ ರಥಯಾತ್ರೆಗೆ 5 ಸಾವಿರಕ್ಕೂ ಹೆಚ್ಚು ಜನ ಸೇರಲಿದ್ದು, ಎಲ್ಲಾ ಭಕ್ತರಿಗೂ ರಥ ಎಳೆಯುವ ಅವಕಾಶ ಕಲ್ಪಿಸಲಾಗಿದೆ. ರಥಯಾತ್ರೆಯ ನಂತರ ಮಹಾಮಂಗಳಾರತಿ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ಎಂದರು.
ಕಾರ್ಯಕ್ರಮಕ್ಕೆ ಶಾಸಕ ವೇದವ್ಯಾಸ ಕಾಮತ್, ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ. ಮೋಹನ್ ಆಳ್ವ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್, ಮಂಗಳೂರು ನಗರಪಾಲಿಕೆ ಸದಸ್ಯೆ ಜಯಶ್ರೀ ಕುಡ್ವ, ಅಭಿನವ್ ಬನ್ಸಲ್‌ನ ನಿದೇರ್ಶಕ ಎ.ಕೆ. ಬನ್ಸಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಜೊತೆ ಕಾರ್ಯದರ್ಶಿಗಳಾದ ರಾಧ ವಲ್ಲಭ ದಾಸ, ಸುಂದರ ಗೌರ ದಾಸ ಮಾಧ್ಯಮ ಸಲಹೆಗಾರ ಎಂ.ವಿ. ಮಲ್ಯ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು