2:02 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಮುಳುಗುತ್ತಿರುವ ಹಡಗು: ಶಾಸಕ ಡಾ.ಭರತ್ ಶೆಟ್ಟಿ ಲೇವಡಿ

08/02/2024, 18:17

ಸುರತ್ಕಲ್(reporterkarnataka.com): ಕಾಂಗ್ರೆಸ್ ಮುಳುಗು ತ್ತಿರುವ ಹಡಗು ಎಂಬುದು ಪಕ್ಷದ ನಾಯಕರಿಗೆ ಅರಿವಾಗಿದ್ದು, ಭವಿಷ್ಯ ಕಂಡುಕೊಳ್ಳಲು ನಮ್ಮ ಜಿಲ್ಲೆಯ ಮಾದರಿ ಸಂಸದರಾಗಿರುವ ನಳಿನ್ ಕುಮಾರ್ ಕಟೀಲ್ ವಿರುದ್ದ ಮುತ್ತಿಗೆಯಂತಹ ಕಾರಣವಿಲ್ಲದ ಹೋರಾಟಕ್ಕೆ ಇಳಿದಿದ್ದಾರೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ವ್ಯಂಗ್ಯವಾಡಿದ್ದಾರೆ.
ಕಾವೂರಿನ ಬಿಜೆಪಿ ಕಚೇರಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು,ಸಂಸದ ನಳಿನ್ ಕುಮಾರ್ ಕಟೀಲ್ ಅವರ ನಿವಾಸಕ್ಕೆ ಪಕ್ಷದ ಯುವ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದು, ಪ್ರಚಾರ ಸ್ಟಂಟ್ ಎಂದು ಬಣ್ಣಿಸಿರುವ ಶಾಸಕರು, ಕಾಂಗ್ರೆಸ್ ಹಣ ,ಹೆಂಡ ಬಳಸಿ ಚುನಾವಣೆ ಗೆಲ್ಲುತ್ತಿದ್ದ ಕಾಲವೊಂದಿತ್ತು. ಬಿಜೆಪಿಯ ಆಡಳಿತದ ಬಳಿಕ ಮತದಾರ ಜಾಗೃತನಾಗಿ ಕಾಂಗ್ರೆಸ್‍ನ ಹೆಂಡ ರಾಜಕೀಯ ಅರಿತು ಬಿಜೆಪಿಯನ್ನು ಸತತವಾಗಿ ಆಯ್ಕೆ ಮಾಡುತ್ತಿದ್ದಾರೆ. ಇದರಿಂದ ದಕ್ಷಿಣ ಕನ್ನಡದಲ್ಲಿ ಕಾಂಗ್ರೆಸ್ ಭ್ರಮ ನಿರಸನಗೊಂಡು ಹೋರಾಟಕ್ಕೆ ಇಳಿದಂತಿದೆ.
ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಸೇರಿದಂತೆ ,ವಿವಿಧ ಇಲಾಖೆಯ ಮೂಲಕ ,ಸಾವಿರಾರು ಕೋ.ರೂ ಅನುದಾನ ತಂದು ಸದ್ಬಳಕೆ ಮಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ರೈಲ್ವೆ,ಹೆದ್ದಾರಿ,ಕೋಸ್ಟ್ ಗಾರ್ಡ್ ಟ್ರೈನಿಂಗ್ ಸೆಂಟರ್,ಪ್ಲಾಸ್ಟಿಕ್ ಪಾರ್ಕ್ ಸಹಿತ ಹತ್ತು ಹಲವು ಅಭಿವೃದ್ಧಿ ಕಾರ್ಯಗಳು ಕಣ್ಣಮುಂದಿವೆ.
ಕಾಂಗ್ರೆಸ್ ಕಾರ್ಯಕರ್ತರು , ನಾಯಕರು ಈ ಎಲ್ಲಾ ಮಾಹಿತಿ ಪಡೆದುಕೊಂಡು ತನ್ನ ಜ್ನಾನ ಹೆಚ್ಚಿಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು