12:17 PM Tuesday22 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ…

ಇತ್ತೀಚಿನ ಸುದ್ದಿ

ಸಂಬಳ ಕೇಳಿದಕ್ಕೆ ಯುವಕನ ಮರಕ್ಕೆ ಕಟ್ಟಿಹಾಕಿ ಅಮಾನುಷ ಹಲ್ಲೆ, ಚಿತ್ರಹಿಂಸೆ: ವೀಡಿಯೊ ವೈರಲ್; 5 ಮಂದಿ ಆರೋಪಿಗಳ ಬಂಧನ

08/02/2024, 21:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಸೋಮ್ಲಾಪುರ ರಸ್ತೆಯ ಪ್ಲಾಂಟೇಶನ್ ನಲ್ಲಿ ಯುವಕನ ಕಟ್ಟಿ ಹಾಕಿ ಅಮಾನುಷವಾಗಿ ಹಲ್ಲೆ ನಡೆಸಿ ಚಿತ್ರಹಿಂಸೆ ನೀಡಿದ ಪ್ರಕರಣ ಸಂಬಂಧಿಸಿದಂತೆ 5 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಾಫಿನಾಡಲ್ಲಿ ಹೋಟೆಲ್ ಕೆಲಸದ ಸಂಬಳ ಕೇಳಿದ್ದಕ್ಕೆ ಕೊಪ್ಪ ಸಮೀಪದ ಕರ್ಕೇಶ್ವರ ಗ್ರಾಮದ ಸತೀಶ್ ಎಂಬವರನ್ನು
ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಲಾಗಿತ್ತು. ಮರಕ್ಕೆ ಯುವಕನ ಕೈ ಕಾಲು ಕಟ್ಟಿ ಹಾಕಿ 5 ಜನರು ಹಲ್ಲೆ ನಡೆಸಿದ್ದರು. ಹಗ್ಗದಿಂದ ಕೈ ಕಾಲು ಕಟ್ಟಿ ಯುವಕನಿಗೆ ಚಿತ್ರಹಿಂಸೆ ನೀಡಲಾಗಿತ್ತು.
ಯುವಕನ ಮೇಲೆ ಹಲ್ಲೆ ನಡೆಸಿ ವಿಡಿಯೋ ರೆಕಾರ್ಡ್ ಕೂಡ ಮಾಡಲಾಗಿತ್ತು. ಮದ್ಯಪಾನ ಮಾಡುತ್ತ ಯುವಕರ ತಂಡ ಹಲ್ಲೆ ನಡೆಸಿತ್ತು. ಈ ವೀಡಿಯೊ ವೈರಲ್ ಆಗಿತ್ತು. ಆರೋಪಿಗಳ ಬಂಧನಕ್ಕೆ 5 ತಂಡಗಳನ್ನು ರಚಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆ ಮರೆಸಿಕೊಂಡಿದ್ದ ಆರೋಪಿಗಳಾದ ಮಹೇಶ್, ವಿಠಲ್, ಸಿರಿಲ್, ಸುನೀಲ್ ಹಾಗೂ ಮಂಜು ಎಂಬವರನ್ನು ಬಂಧಿಸಲಾಗಿದೆ.


ಗಂಭೀರ ಗಾಯಗೊಂಡ ಸತೀಶ್ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಸಂಬಂಧ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು