1:45 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ತುಂಬೆಯಿಂದ ನೀರು ಸರಬರಾಜು ಮಾಡುವ ಪ್ರಮುಖ ಪೈಪ್ ಲೈನಿನಲ್ಲಿ ತೊಂದರೆ: 4 ದಿನಗಳಿಂದ ಮಂಗಳೂರಿಗೆ ನೀರಿಲ್ಲ!; ಖಾಸಗಿ ಟ್ಯಾಂಕರ್ ಗಳಿಗೆ ಭಾರೀ ಡಿಮಾಂಡ್

09/02/2024, 18:43

ಮಂಗಳೂರು(reporterkarnataka.com): ತುಂಬೆ ಅಣೆಕಟ್ಟಿನಿಂದ ಬೆಂದೂರುವೆಲ್
ಪಂಪ್‌ಹೌಸ್‌ಗೆ ನೀರು ಸರಬರಾಜು ಮಾಡುವ ಪ್ರಮುಖ ಪೈಪ್ ಲೈನ್ ನಲ್ಲಿ ಸಮಸ್ಯೆ ಉಂಟಾಗಿರುವುದರಿಂದ ಕಳೆದ 4 ದಿನಗಳಿಂದ ನಗರಕ್ಕೆ ನೀರು ಸರಬರಾಜು ತೊಂದರೆ ಉಂಟಾಗಿದೆ.
ನಗರಕ್ಕೆ ನೀರು ಸರಬರಾಜು ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಕಡಲನಗರಿಯಲ್ಲಿ ಸತತ 4 ದಿನಗಳಿಂದ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ವಿವಿಧೆಡೆ ನಾಗರಿಕರು ನೀರಿಲ್ಲದೆ ತೊಂದರೆಗೀಡಾಗಿದ್ದಾರೆ. ನಗರದ ಕೊಡಿಯಾಲಬೈಲು, ಕದ್ರಿ, ಪಿವಿಎಸ್, ಬಂದರು, ಲೇಡಿಹಿಲ್, ಕೋಡಿಕಲ್, ಮೇರಿಹಿಲ್, ಪಚ್ಚನಾಡಿ, ಅಶೋಕನಗರ, ದೇರೆಬೈಲ್, ನಾಗುರಿ, ಜಲ್ಲಿಗುಡ್ಡೆ, ಕೂಳೂರು, ಪಣಂಬೂರು, ಸುರತ್ಕಲ್, ಕಾಟಿಪಳ್ಳ, ಕಾನ, ಕುಳಾಯಿ, ಮುಕ್ಕ ಸೇರಿದಂತೆ ಹಲವು ಪ್ರದೇಶಗಳ ನಿವಾಸಿಗಳು ನೀರಿಲ್ಲದೆ ತೊಂದರೆಗೀಡಾಗಿದ್ದಾರೆ. ಖಾಸಗಿ ನೀರಿನ ಟ್ಯಾಂಕರ್ ಗಳ ಓಡಾಟ ಜೋರಾಗಿ ನಡೆಯುತ್ತಿದೆ.
ತುಂಬೆಯಲ್ಲಿ ನೇತ್ರಾವತಿ ನದಿಗೆ ಕಟ್ಟಿದ ಅಣೆಕಟ್ಟಿನಿಂದ ಬೆಂದೂರ್‌ವೆಲ್ ಪಂಪ್‌ಹೌಸ್‌ಗೆ ನೀರನ್ನು ಸಾಗಿಸುವ1 ಮೀಟರ್ ವ್ಯಾಸದ ಪೈಪ್‌ಲೈನ್‌ನಲ್ಲಿ ಸಮಸ್ಯೆ ಉಂಟಾಗಿದೆ. ನಗರದ ನಗರೋಡಿ ಬಳಿ ಪೈಪ್‌ಲೈನ್‌ಗೆ ಹಾನಿಗೀಡಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು