7:15 AM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ತುಂಬೆಯಿಂದ ನೀರು ಸರಬರಾಜು ಮಾಡುವ ಪ್ರಮುಖ ಪೈಪ್ ಲೈನಿನಲ್ಲಿ ತೊಂದರೆ: 4 ದಿನಗಳಿಂದ ಮಂಗಳೂರಿಗೆ ನೀರಿಲ್ಲ!; ಖಾಸಗಿ ಟ್ಯಾಂಕರ್ ಗಳಿಗೆ ಭಾರೀ ಡಿಮಾಂಡ್

09/02/2024, 18:43

ಮಂಗಳೂರು(reporterkarnataka.com): ತುಂಬೆ ಅಣೆಕಟ್ಟಿನಿಂದ ಬೆಂದೂರುವೆಲ್
ಪಂಪ್‌ಹೌಸ್‌ಗೆ ನೀರು ಸರಬರಾಜು ಮಾಡುವ ಪ್ರಮುಖ ಪೈಪ್ ಲೈನ್ ನಲ್ಲಿ ಸಮಸ್ಯೆ ಉಂಟಾಗಿರುವುದರಿಂದ ಕಳೆದ 4 ದಿನಗಳಿಂದ ನಗರಕ್ಕೆ ನೀರು ಸರಬರಾಜು ತೊಂದರೆ ಉಂಟಾಗಿದೆ.
ನಗರಕ್ಕೆ ನೀರು ಸರಬರಾಜು ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಕಡಲನಗರಿಯಲ್ಲಿ ಸತತ 4 ದಿನಗಳಿಂದ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ವಿವಿಧೆಡೆ ನಾಗರಿಕರು ನೀರಿಲ್ಲದೆ ತೊಂದರೆಗೀಡಾಗಿದ್ದಾರೆ. ನಗರದ ಕೊಡಿಯಾಲಬೈಲು, ಕದ್ರಿ, ಪಿವಿಎಸ್, ಬಂದರು, ಲೇಡಿಹಿಲ್, ಕೋಡಿಕಲ್, ಮೇರಿಹಿಲ್, ಪಚ್ಚನಾಡಿ, ಅಶೋಕನಗರ, ದೇರೆಬೈಲ್, ನಾಗುರಿ, ಜಲ್ಲಿಗುಡ್ಡೆ, ಕೂಳೂರು, ಪಣಂಬೂರು, ಸುರತ್ಕಲ್, ಕಾಟಿಪಳ್ಳ, ಕಾನ, ಕುಳಾಯಿ, ಮುಕ್ಕ ಸೇರಿದಂತೆ ಹಲವು ಪ್ರದೇಶಗಳ ನಿವಾಸಿಗಳು ನೀರಿಲ್ಲದೆ ತೊಂದರೆಗೀಡಾಗಿದ್ದಾರೆ. ಖಾಸಗಿ ನೀರಿನ ಟ್ಯಾಂಕರ್ ಗಳ ಓಡಾಟ ಜೋರಾಗಿ ನಡೆಯುತ್ತಿದೆ.
ತುಂಬೆಯಲ್ಲಿ ನೇತ್ರಾವತಿ ನದಿಗೆ ಕಟ್ಟಿದ ಅಣೆಕಟ್ಟಿನಿಂದ ಬೆಂದೂರ್‌ವೆಲ್ ಪಂಪ್‌ಹೌಸ್‌ಗೆ ನೀರನ್ನು ಸಾಗಿಸುವ1 ಮೀಟರ್ ವ್ಯಾಸದ ಪೈಪ್‌ಲೈನ್‌ನಲ್ಲಿ ಸಮಸ್ಯೆ ಉಂಟಾಗಿದೆ. ನಗರದ ನಗರೋಡಿ ಬಳಿ ಪೈಪ್‌ಲೈನ್‌ಗೆ ಹಾನಿಗೀಡಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು