6:31 AM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ನಂಜನಗೂಡು: ನಾಳೆ ಹಿಂದೂ- ಮುಸ್ಲಿಂ ಭಾವೈಕ್ಯತೆಯ ಹುಲ್ಲಹಳ್ಳಿಯಲ್ಲಿ ಹಜ್ರತ್ ಸೈದಾನಿ ಬೀ ಮಾ ದರ್ಗಾ ಉರೂಸ್

09/02/2024, 19:30

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯ ಬೆಳಲೆ ಗೇಟ್ ಬಳಿ ಇರುವ ಹಿಂದೂ ಮತ್ತು ಮುಸ್ಲಿಂ ಸಾಮರಸ್ಯ ಹಾಗೂ ಭಾವೈಕ್ಯತೆಯನ್ನು ಸಾರುವ ಹಜ್ರತ್ ಸೈದಾನಿ ಬೀ ಮಾ ದರ್ಗಾ ಶರೀಫ್ ಊರೂಸ್ ಹಾಗೂ ಗಂಧದ ಮಹೋತ್ಸವವನ್ನು ಫೆಬ್ರವರಿ 10ರಂದು ಸಂಜೆ ಸಡಗರ ಮತ್ತು ಸಂಭ್ರಮದಿಂದ ಸಾವಿರಾರು ಭಕ್ತರ ಸಮೂಹದಲ್ಲಿ ನಡೆಯಲಿದೆ ಎಂದು ದರ್ಗದ ಗುರುಗಳಾದ ಶಮ್ಸುದ್ದೀನ್ ಜೂರಿ ಖಾಜೂರು ತಿಳಿಸಿದ್ದಾರೆ.


ಮಾಧ್ಯಮದೊಂದಿಗೆ ಮಾತನಾಡಿದ ಅವರು ಫೆಬ್ರವರಿ 10 ಶನಿವಾರ ಸಂಜೆ 6 ಗಂಟೆಗೆ ಹುಲ್ಲಹಳ್ಳಿ ಜಾಮಿಯ ಮಸೀದಿ ಯಿಂದ ಹೂಗಳಿಂದ ಅಲಂಕರಿಸಲಾದ ಪಲ್ಲಕ್ಕಿ ವಾಹನದಲ್ಲಿ ಸಂದಲ್ ಮೆರವಣಿಗೆಯೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ ಬಂದ ಗಂಧವನ್ನು ಮದ್ದೂರು ತಾಲೂಕಿನ ವಿಠಲಪುರದ ಹಜರತ್ ಶಾ ಮಹಮ್ಮದ್ ಉಸ್ಮಾನ್ ಖಾದ್ರಿ ತಂಡ ದ ವತಿಯಿಂದ ಗಂಧವನ್ನು ದರ್ಗಾ ಕೆ ಸಮರ್ಪಿಸಲಾಗುತ್ತದೆ ಎಂದು ತಿಳಿಸಿದರು
ಇದೇ ಸಂದರ್ಭ ದರ್ಗಾದಲ್ಲಿ ವಿವಿಧ ಧರ್ಮ ಗುರುಗಳ ಧಾರ್ಮಿಕ ಸಭೆ, ಸೇರಿದಂತೆ ಗುಂಡ್ಲುಪೇಟೆ ವಿದ್ಯಾರ್ಥಿಗಳಿಂದ ಧಫ್, ಕೇರಳ ತಂಡದವರಿಂದ ಸುಪ್ರಸಿದ್ಧ ಬುರ್ದಾ ಮಜ್ಲಿಸ್ ಹಾಗೂ ಪ್ರಸಿದ್ಧ ಕವ್ವಾಲಿ ತಂಡದವರಿಂದ ಬೆಳಗಿನ ಜಾವದವರಿಗೂ ಕವಾಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಇದಕ್ಕಾಗಿ ಹುಲ್ಲಹಳ್ಳಿ ಪೊಲೀಸರು ಹಾಗೂ ಧರ್ಮ ಗುರುಗಳು ಸೇರಿದಂತೆ ಗ್ರಾಮದ ಮುಖಂಡರು ದರ್ಗಾದ ಬಳಿ ತೆರಳಿ ಉರುಸ್ ನಡೆಸಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.
ನಾಳೆ ನಡೆಯುವ ಉರುಸ್ ಕಾರ್ಯಕ್ರಮಕ್ಕೆ ಸರ್ವಧರ್ಮೀಯರು ಭಾಗವಹಿಸಿ ಸಹಕರಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು