12:51 PM Wednesday16 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ನಂಜನಗೂಡು: ನಾಳೆ ಹಿಂದೂ- ಮುಸ್ಲಿಂ ಭಾವೈಕ್ಯತೆಯ ಹುಲ್ಲಹಳ್ಳಿಯಲ್ಲಿ ಹಜ್ರತ್ ಸೈದಾನಿ ಬೀ ಮಾ ದರ್ಗಾ ಉರೂಸ್

09/02/2024, 19:30

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯ ಬೆಳಲೆ ಗೇಟ್ ಬಳಿ ಇರುವ ಹಿಂದೂ ಮತ್ತು ಮುಸ್ಲಿಂ ಸಾಮರಸ್ಯ ಹಾಗೂ ಭಾವೈಕ್ಯತೆಯನ್ನು ಸಾರುವ ಹಜ್ರತ್ ಸೈದಾನಿ ಬೀ ಮಾ ದರ್ಗಾ ಶರೀಫ್ ಊರೂಸ್ ಹಾಗೂ ಗಂಧದ ಮಹೋತ್ಸವವನ್ನು ಫೆಬ್ರವರಿ 10ರಂದು ಸಂಜೆ ಸಡಗರ ಮತ್ತು ಸಂಭ್ರಮದಿಂದ ಸಾವಿರಾರು ಭಕ್ತರ ಸಮೂಹದಲ್ಲಿ ನಡೆಯಲಿದೆ ಎಂದು ದರ್ಗದ ಗುರುಗಳಾದ ಶಮ್ಸುದ್ದೀನ್ ಜೂರಿ ಖಾಜೂರು ತಿಳಿಸಿದ್ದಾರೆ.


ಮಾಧ್ಯಮದೊಂದಿಗೆ ಮಾತನಾಡಿದ ಅವರು ಫೆಬ್ರವರಿ 10 ಶನಿವಾರ ಸಂಜೆ 6 ಗಂಟೆಗೆ ಹುಲ್ಲಹಳ್ಳಿ ಜಾಮಿಯ ಮಸೀದಿ ಯಿಂದ ಹೂಗಳಿಂದ ಅಲಂಕರಿಸಲಾದ ಪಲ್ಲಕ್ಕಿ ವಾಹನದಲ್ಲಿ ಸಂದಲ್ ಮೆರವಣಿಗೆಯೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ ಬಂದ ಗಂಧವನ್ನು ಮದ್ದೂರು ತಾಲೂಕಿನ ವಿಠಲಪುರದ ಹಜರತ್ ಶಾ ಮಹಮ್ಮದ್ ಉಸ್ಮಾನ್ ಖಾದ್ರಿ ತಂಡ ದ ವತಿಯಿಂದ ಗಂಧವನ್ನು ದರ್ಗಾ ಕೆ ಸಮರ್ಪಿಸಲಾಗುತ್ತದೆ ಎಂದು ತಿಳಿಸಿದರು
ಇದೇ ಸಂದರ್ಭ ದರ್ಗಾದಲ್ಲಿ ವಿವಿಧ ಧರ್ಮ ಗುರುಗಳ ಧಾರ್ಮಿಕ ಸಭೆ, ಸೇರಿದಂತೆ ಗುಂಡ್ಲುಪೇಟೆ ವಿದ್ಯಾರ್ಥಿಗಳಿಂದ ಧಫ್, ಕೇರಳ ತಂಡದವರಿಂದ ಸುಪ್ರಸಿದ್ಧ ಬುರ್ದಾ ಮಜ್ಲಿಸ್ ಹಾಗೂ ಪ್ರಸಿದ್ಧ ಕವ್ವಾಲಿ ತಂಡದವರಿಂದ ಬೆಳಗಿನ ಜಾವದವರಿಗೂ ಕವಾಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಇದಕ್ಕಾಗಿ ಹುಲ್ಲಹಳ್ಳಿ ಪೊಲೀಸರು ಹಾಗೂ ಧರ್ಮ ಗುರುಗಳು ಸೇರಿದಂತೆ ಗ್ರಾಮದ ಮುಖಂಡರು ದರ್ಗಾದ ಬಳಿ ತೆರಳಿ ಉರುಸ್ ನಡೆಸಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.
ನಾಳೆ ನಡೆಯುವ ಉರುಸ್ ಕಾರ್ಯಕ್ರಮಕ್ಕೆ ಸರ್ವಧರ್ಮೀಯರು ಭಾಗವಹಿಸಿ ಸಹಕರಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು