7:55 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ನಂಜನಗೂಡು: ನಾಳೆ ಹಿಂದೂ- ಮುಸ್ಲಿಂ ಭಾವೈಕ್ಯತೆಯ ಹುಲ್ಲಹಳ್ಳಿಯಲ್ಲಿ ಹಜ್ರತ್ ಸೈದಾನಿ ಬೀ ಮಾ ದರ್ಗಾ ಉರೂಸ್

09/02/2024, 19:30

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯ ಬೆಳಲೆ ಗೇಟ್ ಬಳಿ ಇರುವ ಹಿಂದೂ ಮತ್ತು ಮುಸ್ಲಿಂ ಸಾಮರಸ್ಯ ಹಾಗೂ ಭಾವೈಕ್ಯತೆಯನ್ನು ಸಾರುವ ಹಜ್ರತ್ ಸೈದಾನಿ ಬೀ ಮಾ ದರ್ಗಾ ಶರೀಫ್ ಊರೂಸ್ ಹಾಗೂ ಗಂಧದ ಮಹೋತ್ಸವವನ್ನು ಫೆಬ್ರವರಿ 10ರಂದು ಸಂಜೆ ಸಡಗರ ಮತ್ತು ಸಂಭ್ರಮದಿಂದ ಸಾವಿರಾರು ಭಕ್ತರ ಸಮೂಹದಲ್ಲಿ ನಡೆಯಲಿದೆ ಎಂದು ದರ್ಗದ ಗುರುಗಳಾದ ಶಮ್ಸುದ್ದೀನ್ ಜೂರಿ ಖಾಜೂರು ತಿಳಿಸಿದ್ದಾರೆ.


ಮಾಧ್ಯಮದೊಂದಿಗೆ ಮಾತನಾಡಿದ ಅವರು ಫೆಬ್ರವರಿ 10 ಶನಿವಾರ ಸಂಜೆ 6 ಗಂಟೆಗೆ ಹುಲ್ಲಹಳ್ಳಿ ಜಾಮಿಯ ಮಸೀದಿ ಯಿಂದ ಹೂಗಳಿಂದ ಅಲಂಕರಿಸಲಾದ ಪಲ್ಲಕ್ಕಿ ವಾಹನದಲ್ಲಿ ಸಂದಲ್ ಮೆರವಣಿಗೆಯೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿ ಬಂದ ಗಂಧವನ್ನು ಮದ್ದೂರು ತಾಲೂಕಿನ ವಿಠಲಪುರದ ಹಜರತ್ ಶಾ ಮಹಮ್ಮದ್ ಉಸ್ಮಾನ್ ಖಾದ್ರಿ ತಂಡ ದ ವತಿಯಿಂದ ಗಂಧವನ್ನು ದರ್ಗಾ ಕೆ ಸಮರ್ಪಿಸಲಾಗುತ್ತದೆ ಎಂದು ತಿಳಿಸಿದರು
ಇದೇ ಸಂದರ್ಭ ದರ್ಗಾದಲ್ಲಿ ವಿವಿಧ ಧರ್ಮ ಗುರುಗಳ ಧಾರ್ಮಿಕ ಸಭೆ, ಸೇರಿದಂತೆ ಗುಂಡ್ಲುಪೇಟೆ ವಿದ್ಯಾರ್ಥಿಗಳಿಂದ ಧಫ್, ಕೇರಳ ತಂಡದವರಿಂದ ಸುಪ್ರಸಿದ್ಧ ಬುರ್ದಾ ಮಜ್ಲಿಸ್ ಹಾಗೂ ಪ್ರಸಿದ್ಧ ಕವ್ವಾಲಿ ತಂಡದವರಿಂದ ಬೆಳಗಿನ ಜಾವದವರಿಗೂ ಕವಾಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಇದಕ್ಕಾಗಿ ಹುಲ್ಲಹಳ್ಳಿ ಪೊಲೀಸರು ಹಾಗೂ ಧರ್ಮ ಗುರುಗಳು ಸೇರಿದಂತೆ ಗ್ರಾಮದ ಮುಖಂಡರು ದರ್ಗಾದ ಬಳಿ ತೆರಳಿ ಉರುಸ್ ನಡೆಸಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.
ನಾಳೆ ನಡೆಯುವ ಉರುಸ್ ಕಾರ್ಯಕ್ರಮಕ್ಕೆ ಸರ್ವಧರ್ಮೀಯರು ಭಾಗವಹಿಸಿ ಸಹಕರಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು