3:37 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಭದ್ರಾ ಮೇಲ್ದಂಡೆ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸಿ ಚಳ್ಳಕೆರೆ ಬಂದ್ : ಮುಚ್ಚಿದ ಅಂಗಡಿ- ಮುಂಗಟ್ಟು; ರಸ್ತೆಗಿಳಿಯದ ವಾಹನ

09/02/2024, 21:18

ಮುರುಡೇಗೌಡ ಚಳ್ಳಕರೆ ಚಿತ್ರದುರ್ಗ

info.reporterkarnataka@gmail.com

ಭದ್ರಾ ಮೇಲ್ದಂಡೆ ಯೋಜನೆಯ ತ್ವರಿತ ಅನುಷ್ಠಾನಕ್ಕೆ ಒತ್ತಾಯಿಸಿ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಶುಕ್ರವಾರ ಕರೆ ನೀಡಿದ ಬಂದ್ ಗೆ ಚಳ್ಳಕೆರೆಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಂಗಡಿಗಳು- ಮುಂಗಟ್ಟು ಬಾಗಿಲು ಮುಚ್ಚಿದ್ದು, ಜನಸಂಚಾರ ವಿರಳವಾಗಿತ್ತು. ನಗರದಲ್ಲಿ ಹೂವು, ಹಣ್ಣು, ಸೊಪ್ಪು, ತರಕಾರಿ ಮಾರಾಟ ಹೊರತುಪಡಿಸಿ ಎಲ್ಲ ಅಂಗಡಿಗಳು ಬಾಗಿಲು ಮುಚ್ಚಿತ್ತು. ಬಸ್, ಆಟೊ ಸಂಚಾರ ಸ್ಥಗಿತಗೊಂಡಿತ್ತು. ಬೈಕ್, ಕಾರು ಹಾಗೂ ಸರಕು ಸಾಗಣೆ ವಾಹನ ಸಂಚಾರಕ್ಕೂ ಪ್ರತಿಭಟನಕಾರರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.
*ನೆಹರೂ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು;*
ನಗರದ ನೆಹರೂ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ವಿಳಂಬಕ್ಕೆ ಕಿಡಿಕಾರಿದರು. ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ₹ 5,300 ಕೋಟಿ ಅನುದಾನ ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ, ಕನ್ನಡಪರ ಸಂಘಟನೆ, ಕಾರ್ಮಿಕ, ಹೋಟೆಲ್ ಮಾಲೀಕರು, ಆಟೊ, ಖಾಸಗಿ ಬಸ್, ಲಾರಿ ಮಾಲಿಕರ, ಹಾಗೂ ಚಾಲಕರ ಸಂಘಟನೆಗಳು ಬಂದ್‌ಗೆ ಸಾಥ್ ನೀಡಿವೆ.

ಇತ್ತೀಚಿನ ಸುದ್ದಿ

ಜಾಹೀರಾತು