5:13 PM Tuesday14 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಹಿಂದೂ ಭಾವನೆಗಳಿಗೆ ಧಕ್ಕೆ; ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ತೀವ್ರ ಹೋರಾಟ: ಶಾಸಕ ಡಾ. ಭರತ್ ಶೆಟ್ಟಿ ಎಚ್ಚರಿಕೆ

11/02/2024, 20:26

ಮಂಗಳೂರು(reporterkarnataka.com): ಕ್ರಿಶ್ಚಿಯನ್ ಮಿಷಿನರಿ ಶಾಲೆಗಳಲ್ಲಿ ಹಿಂದೂ ವಿರೋಧಿ ಭಾವನೆ ವ್ಯಕ್ತವಾಗುತ್ತಿರುವುದು ಇದೇ ಮೊದಲೇನಲ್ಲ.
ಹಿಂದೂ ಸಾಂಪ್ರದಾಯಿಕ ಹೂ ಮುಡಿಯಲು, ಬಳೆ ಹಾಕಲು, ತಿಲಕ ಹಾಕಲು ಹೀಗೆ ಹಲವು ಆಚಾರಗಳನ್ನು ನಮ್ಮ ಹೆಣ್ಮಕಳ್ಳಿಂದ ದೂರ ಮಾಡಿದ ಕ್ರಿಶ್ಚಿಯನ್ ಮಿಷನರಿಗಳು ಇದೀಗ ರಾಮ ಮಂದಿರದ ವಿರುದ್ದದ ದ್ವೇಷ ಭಾವನೆ ಪಸರಿಸಲು ಹೂಡುತ್ತಿರುವ ಷಡ್ಯಂತ್ರ ಸಹಿಸಲು ಅಸಾಧ್ಯ.
ಸಂಬಂಧಪಟ್ಟ ಶಾಲೆಯ ಶಿಕ್ಷಕಿ ವಿರುದ್ದ ಆಡಳಿತ ಮಂಡಳಿ ಕ್ರಮ ಜರುಗಿಸ ಇಲ್ಲದಿದ್ದಲ್ಲಿ ತೀವ್ರ ಹೋರಾಟ ಅನಿವಾರ್ಯ ಎಂದು ಡಾ.ಭರತ್ ಶೆಟ್ಟಿ ವೈ.ಎಚ್ಚರಿಸಿದ್ದಾರೆ.
ನಗರದ ಖಾಸಗಿ ಶಾಲೆಯ ಶಿಕ್ಷಕಿ ಶ್ರೀರಾಮ ಹಾಗೂ ಮಂದಿರದ ವಿರುದ್ದ ವಿದ್ಯಾರ್ಥಿಗಳ ಮುಂದೆ ಆಡಿದರು ಎನ್ನಲಾದ ಹಿಂದೂ ಭಾವನೆಗೆ ಧಕ್ಕೆ ತರುವ ಮಾತುಗಳನ್ನು ಶಾಸಕರು‌ ಖಂಡಿಸಿದ್ದಾರೆ.
ಇಂತಹ ಹಿಂದೂ ವಿರೋಧಿ ಶಾಲೆಗಳನ್ನು ತ್ಯಜಿಸಿ ,ನಮ್ಮ ಸಂಪ್ರದಾಯಕ್ಕೆ ಮನ್ನಣೆ ನೀಡುವ ಶಾಲಾ, ಕಾಲೇಜುಗಳಿಗೆ ಸೇರಿ ವಿದ್ಯಾಭ್ಯಾಸ ಮಾಡುವ ಬಗ್ಗೆ ಒಮ್ಮತದ ಅಭಿಪ್ರಾಯ ಮೂಡಬೇಕಿದೆ.ಈ ಬಗ್ಗೆ ಪೋಷಕರು ಚಿಂತಿಸಲು ಇದು ಸಕಾಲ ಎಂದು ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ.
ಕೃಷ್ಣಾಪುರ ಶಾಲೆಯಲ್ಲಿ ರಕ್ಷಾ ಬಂಧನ ಕಿತ್ತು ಎಸೆಯಲಾಯಿತು.ಇದೀಗ ರಾಮನ ಕುರಿತಂತೆ ನಿಂದನೆ ಸಹಿಸಲು ಅಸಾಧ್ಯ.ಇದೇ ಬಗ್ಗೆ ಜೀಸಸ್ ಹಾಗೂ ಅವರ ಮೂರ್ತಿ ಪೂಜೆಯ ಬಗ್ಗೆ ಮಾತನಾಡಿದರೆ ಇಷ್ಟರವರೆಗೆ ಡೋಂಗಿ ಜಾತ್ಯತೀತ ಹೋರಾಟಗಾರರು ಬೀದಿಗೆ ಬರುತ್ತಿದ್ದರು. ಕಾಂಗ್ರೆಸ್ ಪಕ್ಷದ ನಾಯಕರೂ ಕೂಡ ಮೌನ ವಹಿಸಿದ್ದು, ಹಿಂದೂ ವಿರೋಧಿ ಭಾವನೆಯನ್ನು ತೋರಿಸಿದ್ದಾರೆ ಎಂದು ಟೀಕಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು