1:58 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಹಿಂದೂ ಭಾವನೆಗಳಿಗೆ ಧಕ್ಕೆ; ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ತೀವ್ರ ಹೋರಾಟ: ಶಾಸಕ ಡಾ. ಭರತ್ ಶೆಟ್ಟಿ ಎಚ್ಚರಿಕೆ

11/02/2024, 20:26

ಮಂಗಳೂರು(reporterkarnataka.com): ಕ್ರಿಶ್ಚಿಯನ್ ಮಿಷಿನರಿ ಶಾಲೆಗಳಲ್ಲಿ ಹಿಂದೂ ವಿರೋಧಿ ಭಾವನೆ ವ್ಯಕ್ತವಾಗುತ್ತಿರುವುದು ಇದೇ ಮೊದಲೇನಲ್ಲ.
ಹಿಂದೂ ಸಾಂಪ್ರದಾಯಿಕ ಹೂ ಮುಡಿಯಲು, ಬಳೆ ಹಾಕಲು, ತಿಲಕ ಹಾಕಲು ಹೀಗೆ ಹಲವು ಆಚಾರಗಳನ್ನು ನಮ್ಮ ಹೆಣ್ಮಕಳ್ಳಿಂದ ದೂರ ಮಾಡಿದ ಕ್ರಿಶ್ಚಿಯನ್ ಮಿಷನರಿಗಳು ಇದೀಗ ರಾಮ ಮಂದಿರದ ವಿರುದ್ದದ ದ್ವೇಷ ಭಾವನೆ ಪಸರಿಸಲು ಹೂಡುತ್ತಿರುವ ಷಡ್ಯಂತ್ರ ಸಹಿಸಲು ಅಸಾಧ್ಯ.
ಸಂಬಂಧಪಟ್ಟ ಶಾಲೆಯ ಶಿಕ್ಷಕಿ ವಿರುದ್ದ ಆಡಳಿತ ಮಂಡಳಿ ಕ್ರಮ ಜರುಗಿಸ ಇಲ್ಲದಿದ್ದಲ್ಲಿ ತೀವ್ರ ಹೋರಾಟ ಅನಿವಾರ್ಯ ಎಂದು ಡಾ.ಭರತ್ ಶೆಟ್ಟಿ ವೈ.ಎಚ್ಚರಿಸಿದ್ದಾರೆ.
ನಗರದ ಖಾಸಗಿ ಶಾಲೆಯ ಶಿಕ್ಷಕಿ ಶ್ರೀರಾಮ ಹಾಗೂ ಮಂದಿರದ ವಿರುದ್ದ ವಿದ್ಯಾರ್ಥಿಗಳ ಮುಂದೆ ಆಡಿದರು ಎನ್ನಲಾದ ಹಿಂದೂ ಭಾವನೆಗೆ ಧಕ್ಕೆ ತರುವ ಮಾತುಗಳನ್ನು ಶಾಸಕರು‌ ಖಂಡಿಸಿದ್ದಾರೆ.
ಇಂತಹ ಹಿಂದೂ ವಿರೋಧಿ ಶಾಲೆಗಳನ್ನು ತ್ಯಜಿಸಿ ,ನಮ್ಮ ಸಂಪ್ರದಾಯಕ್ಕೆ ಮನ್ನಣೆ ನೀಡುವ ಶಾಲಾ, ಕಾಲೇಜುಗಳಿಗೆ ಸೇರಿ ವಿದ್ಯಾಭ್ಯಾಸ ಮಾಡುವ ಬಗ್ಗೆ ಒಮ್ಮತದ ಅಭಿಪ್ರಾಯ ಮೂಡಬೇಕಿದೆ.ಈ ಬಗ್ಗೆ ಪೋಷಕರು ಚಿಂತಿಸಲು ಇದು ಸಕಾಲ ಎಂದು ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ.
ಕೃಷ್ಣಾಪುರ ಶಾಲೆಯಲ್ಲಿ ರಕ್ಷಾ ಬಂಧನ ಕಿತ್ತು ಎಸೆಯಲಾಯಿತು.ಇದೀಗ ರಾಮನ ಕುರಿತಂತೆ ನಿಂದನೆ ಸಹಿಸಲು ಅಸಾಧ್ಯ.ಇದೇ ಬಗ್ಗೆ ಜೀಸಸ್ ಹಾಗೂ ಅವರ ಮೂರ್ತಿ ಪೂಜೆಯ ಬಗ್ಗೆ ಮಾತನಾಡಿದರೆ ಇಷ್ಟರವರೆಗೆ ಡೋಂಗಿ ಜಾತ್ಯತೀತ ಹೋರಾಟಗಾರರು ಬೀದಿಗೆ ಬರುತ್ತಿದ್ದರು. ಕಾಂಗ್ರೆಸ್ ಪಕ್ಷದ ನಾಯಕರೂ ಕೂಡ ಮೌನ ವಹಿಸಿದ್ದು, ಹಿಂದೂ ವಿರೋಧಿ ಭಾವನೆಯನ್ನು ತೋರಿಸಿದ್ದಾರೆ ಎಂದು ಟೀಕಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು