4:23 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಚಿಂತೆಯ ಬದಲು ಚಿಂತನೆ ಮಾಡೋಣ: ಮೇಲ್ಕಾರಿನಲ್ಪಿ ಕೊಂಡೆವೂರು ಶ್ರೀಗಳು

12/02/2024, 13:49

ಬಂಟ್ವಾಳ(reporterkarnataka.com): ಹಿರಿಯರ ಅನುಭವವು ನಂಬಿಕೆಯ ಜೊತೆಗೆ ಮಿಳಿತವಾದಾಗ ಜೀವನವು ಅರ್ಥಪೂರ್ಣವಾಗುತ್ತದೆ. ಚಿಂತೆಯ ಬದಲು ಎಲ್ಲರೂ ಚಿಂತನೆಯನ್ನು ಮಾಡಬೇಕು. ಹಿರಿಯರ ಸೇವಾ ಪ್ರತಿಷ್ಠಾನ ನಡೆಸುವ ಕಾರ್ಯಗಳು ಸಮಾಜದ ಒಳಿತಿಗೆ ದೊಡ್ಡ ಕೊಡುಗೆಯಾಗಿದೆ. ಸಂಸ್ಕೃತಿಯ ರಕ್ಷಣೆಗೆ ಹಿರಿಯರ ಮಾರ್ಗದರ್ಶನವು ಅಗತ್ಯವಾಗಿದೆ ಎಂದು ಕೊಂಡೆವೂರು ನಿತ್ಯಾನಂದ ಯೋಗಾಶ್ರಮದ ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.
ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ( ರಿ) ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆಯನ್ನು ಆಶ್ರಮದಲ್ಲಿ ದೀಪ ಪ್ರಜ್ವಲಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಆಶ್ರಮದ ಮೂಲಕ ಪರಿಸರದಲ್ಲಿ ಅನ್ನ ,ಅಕ್ಷರ, ಆಧಾರ ,ಆಶ್ರಯ ಮತ್ತು ಆರೋಗ್ಯ ಯೋಜನೆಯ ಸೇವಾ ಕಾರ್ಯಗಳು ನಿರಂತರವಾಗಿ ನಡೆಯುತ್ತಿದ್ದು ಈ ಪರಿಸರದಲ್ಲಿ ಹಿರಿಯರ ಸೇವಾ ಪ್ರತಿಷ್ಠಾದ ಘಟಕವನ್ನು ಆರಂಭಿಸಲು ಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ ಕಯ್ಯೂರು ನಾರಾಯಣ ಭಟ್ ಮಾತನಾಡಿ ತಾಲೂಕು ಘಟಕಗಳನ್ನು ಸಕ್ರಿಯಗೊಳಿಸುವುದರೊಂದಿಗೆ ಸಹಕಾರಿ ಸಂಘದ ಸ್ಥಾಪನೆಯ ಬಗ್ಗೆ ಮಾಹಿತಿ ನೀಡಿ ಪ್ರತಿಷ್ಠಾನದ ಸದಸ್ಯರು ಪ್ರವರ್ತಕರಾಗಿ ಸಹಕರಿಸಬೇಕೆಂದು ತಿಳಿಸಿದರು.
ಡಾ.ಬಿ ಎನ್. ಮಹಾಲಿಂಗ ಭಟ್ ಕುಮಾರವ್ಯಾಸ ನಮನ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ರಾಮಾಯಣದಲ್ಲಿ ಶ್ರೀರಾಮನ ಆದರ್ಶ ಗುಣಗಳ ಬಗ್ಗೆ ಮಾತನಾಡಿದರು.
ಪ್ರೊ. ವೇದವ್ಯಾಸ ರಾಮಕುಂಜ ಮಿರಾಕಲ್ ಹಣ್ಣಿನ ಮಹತ್ವದ ಬಗ್ಗೆ ತಿಳಿಸಿ ಪ್ರಾತ್ಯಕ್ಷಿಕೆ ನೀಡಿದರು.
ಬಂಟ್ವಾಳ ಘಟಕದ ಅಧ್ಯಕ್ಷ ಸೀತಾರಾಮ ಶೆಟ್ಟಿ ಕಾಂತಾಡಿ , ಸಮಿತಿಯ ಸದಸ್ಯರಾದ ಭವಾನಿ ಶಂಕರ ಶೆಟ್ಟಿ ಪುತ್ತೂರು, ಉದಯಶಂಕರ ಪುಣಚ ಮತ್ತು ಸ್ಥಳೀಯ ಹಿರಿಯರು ಭಾಗವಹಿಸಿದ್ದರು.
ಸಮಿತಿಯ ಸದಸ್ಯ ಅನಾರು ಕೃಷ್ಣಶರ್ಮ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಚಂದ್ರಶೇಖರ್ ಆಳ್ವ ಪಡುಮಲೆ ವಂದಿಸಿದರು.
ಬಳಿಕ ಆಶ್ರಮದ ಗೋಶಾಲೆ ಮತ್ತು ನಕ್ಷತ್ರವನವನ್ನು ಹಿರಿಯರು ವೀಕ್ಷಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು