12:23 PM Friday17 - May 2024
ಬ್ರೇಕಿಂಗ್ ನ್ಯೂಸ್
ವಿದ್ಯುತ್ ವೈರ್ ಗೆ ತಗಲಿದ ಅಲ್ಯುಮಿನಿಯಂ ಏಣಿ: ಕರೆಂಟ್ ಶಾಕ್ ನಿಂದ ಹಲಸಿನಹಣ್ಣು… ಸಿಸಿಬಿ ಪೊಲೀಸರ ಕಾರ್ಯಾಚರಣೆ: ಎಂಡಿಎಂಎ ಸಾಗಾಟ ಮಾಡುತ್ತಿದ್ದ 4 ಮಂದಿಯ ಬಂಧನ; 14.85… ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ. ಎಸ್.ಆರ್. ಹರೀಶ್ ಆಚಾರ್ಯ ನಾಮಪತ್ರ ಸಲ್ಲಿಕೆ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ: ಜೂನ್ 1ರಂದು ಮತದಾನ ಲೋಕಸಭೆ ಚುನಾವಣೆಯ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿಎಂ ಸಿದ್ದರಾಮಯ್ಯ ಭವಿಷ್ಯ ಜಾಗತಿಕ ತಾಪಮಾನ: ಕೆಟ್ಟರೂ ಬಾರದ ಬುದ್ದಿ; ಕಾರ್ಕಳ ಹೆದ್ದಾರಿ ಕಾಮಗಾರಿಗೆ ಸಾವಿರಾರು ಮರ ಬಲಿ;… ಏರ್ ಇಂಡಿಯಾ ಎಕ್ಸ್‌ಪ್ರೆಸ್ ನೌಕರರ ಮಿಂಚಿನ ಮುಷ್ಕರ: ದೇಶದಲ್ಲಿ ಹಲವು ವಿಮಾನಗಳ ಹಾರಾಟ… ಲೈಂಗಿಕ ದೌರ್ಜನ್ಯ, ಮಹಿಳೆಯ ಅಪಹರಣ ಪ್ರಕರಣ: ಮಾಜಿ ಸಚಿವ ಎಚ್.ಡಿ. ರೇವಣ್ಣಗೆ ಮೇ… ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,…

ಇತ್ತೀಚಿನ ಸುದ್ದಿ

ಚಿಂತೆಯ ಬದಲು ಚಿಂತನೆ ಮಾಡೋಣ: ಮೇಲ್ಕಾರಿನಲ್ಪಿ ಕೊಂಡೆವೂರು ಶ್ರೀಗಳು

12/02/2024, 13:49

ಬಂಟ್ವಾಳ(reporterkarnataka.com): ಹಿರಿಯರ ಅನುಭವವು ನಂಬಿಕೆಯ ಜೊತೆಗೆ ಮಿಳಿತವಾದಾಗ ಜೀವನವು ಅರ್ಥಪೂರ್ಣವಾಗುತ್ತದೆ. ಚಿಂತೆಯ ಬದಲು ಎಲ್ಲರೂ ಚಿಂತನೆಯನ್ನು ಮಾಡಬೇಕು. ಹಿರಿಯರ ಸೇವಾ ಪ್ರತಿಷ್ಠಾನ ನಡೆಸುವ ಕಾರ್ಯಗಳು ಸಮಾಜದ ಒಳಿತಿಗೆ ದೊಡ್ಡ ಕೊಡುಗೆಯಾಗಿದೆ. ಸಂಸ್ಕೃತಿಯ ರಕ್ಷಣೆಗೆ ಹಿರಿಯರ ಮಾರ್ಗದರ್ಶನವು ಅಗತ್ಯವಾಗಿದೆ ಎಂದು ಕೊಂಡೆವೂರು ನಿತ್ಯಾನಂದ ಯೋಗಾಶ್ರಮದ ಪರಮಪೂಜ್ಯ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.
ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ( ರಿ) ಮೆಲ್ಕಾರ್ ಬಂಟ್ವಾಳ ಇದರ ಕೇಂದ್ರ ಸಮಿತಿಯ ಸಭೆಯನ್ನು ಆಶ್ರಮದಲ್ಲಿ ದೀಪ ಪ್ರಜ್ವಲಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಆಶ್ರಮದ ಮೂಲಕ ಪರಿಸರದಲ್ಲಿ ಅನ್ನ ,ಅಕ್ಷರ, ಆಧಾರ ,ಆಶ್ರಯ ಮತ್ತು ಆರೋಗ್ಯ ಯೋಜನೆಯ ಸೇವಾ ಕಾರ್ಯಗಳು ನಿರಂತರವಾಗಿ ನಡೆಯುತ್ತಿದ್ದು ಈ ಪರಿಸರದಲ್ಲಿ ಹಿರಿಯರ ಸೇವಾ ಪ್ರತಿಷ್ಠಾದ ಘಟಕವನ್ನು ಆರಂಭಿಸಲು ಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ ಕಯ್ಯೂರು ನಾರಾಯಣ ಭಟ್ ಮಾತನಾಡಿ ತಾಲೂಕು ಘಟಕಗಳನ್ನು ಸಕ್ರಿಯಗೊಳಿಸುವುದರೊಂದಿಗೆ ಸಹಕಾರಿ ಸಂಘದ ಸ್ಥಾಪನೆಯ ಬಗ್ಗೆ ಮಾಹಿತಿ ನೀಡಿ ಪ್ರತಿಷ್ಠಾನದ ಸದಸ್ಯರು ಪ್ರವರ್ತಕರಾಗಿ ಸಹಕರಿಸಬೇಕೆಂದು ತಿಳಿಸಿದರು.
ಡಾ.ಬಿ ಎನ್. ಮಹಾಲಿಂಗ ಭಟ್ ಕುಮಾರವ್ಯಾಸ ನಮನ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ರಾಮಾಯಣದಲ್ಲಿ ಶ್ರೀರಾಮನ ಆದರ್ಶ ಗುಣಗಳ ಬಗ್ಗೆ ಮಾತನಾಡಿದರು.
ಪ್ರೊ. ವೇದವ್ಯಾಸ ರಾಮಕುಂಜ ಮಿರಾಕಲ್ ಹಣ್ಣಿನ ಮಹತ್ವದ ಬಗ್ಗೆ ತಿಳಿಸಿ ಪ್ರಾತ್ಯಕ್ಷಿಕೆ ನೀಡಿದರು.
ಬಂಟ್ವಾಳ ಘಟಕದ ಅಧ್ಯಕ್ಷ ಸೀತಾರಾಮ ಶೆಟ್ಟಿ ಕಾಂತಾಡಿ , ಸಮಿತಿಯ ಸದಸ್ಯರಾದ ಭವಾನಿ ಶಂಕರ ಶೆಟ್ಟಿ ಪುತ್ತೂರು, ಉದಯಶಂಕರ ಪುಣಚ ಮತ್ತು ಸ್ಥಳೀಯ ಹಿರಿಯರು ಭಾಗವಹಿಸಿದ್ದರು.
ಸಮಿತಿಯ ಸದಸ್ಯ ಅನಾರು ಕೃಷ್ಣಶರ್ಮ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಚಂದ್ರಶೇಖರ್ ಆಳ್ವ ಪಡುಮಲೆ ವಂದಿಸಿದರು.
ಬಳಿಕ ಆಶ್ರಮದ ಗೋಶಾಲೆ ಮತ್ತು ನಕ್ಷತ್ರವನವನ್ನು ಹಿರಿಯರು ವೀಕ್ಷಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು