7:40 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಅಯೋಧ್ಯೆ ಬಾಲರಾಮನಿಗೆ 70 ಲಕ್ಷ ರೂ. ಮೌಲ್ಯದ ಸ್ವರ್ಣ ಪೀಠ ಪ್ರಭಾವಳಿ ಸಮರ್ಪಣೆ: ಕಾಶಿಮಠ ಸಂಸ್ಥಾನದಿಂದ ಕೊಡುಗೆ

12/02/2024, 21:51

ಮಂಗಳೂರು(reporterkarnataka.com): ಕಾಶಿಮಠ ಸಂಸ್ಥಾನದ ವತಿಯಿಂದ ಅಯೋಧ್ಯೆಯ ಬಾಲರಾಮನಿಗೆ 70 ಲಕ್ಷ ರೂಪಾಯಿ ಮೌಲ್ಯದ ಸ್ವರ್ಣ ಪೀಠ ಪ್ರಭಾವಳಿಯನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ನಡೆಯುತ್ತಿರುವ ಮಂಡಲೋತ್ಸವದಲ್ಲಿ ಬಾಲರಾಮನ ಉತ್ಸವ ಮೂರ್ತಿಗೆ ಸಮರ್ಪಿಸಲಾಯಿತು.

ಈ ಸ್ವರ್ಣ ಪೀಠ ಪ್ರಭಾವಳಿಗೆ ಕೋಟದ ಕಾಶಿಮಠದಲ್ಲಿ ಅದ್ದೂರಿ ಮೆರವಣಿಗೆ ಹಾಗೂ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಿ ಕಾಶೀಮಠಾಧೀಶರಾದ ಪರಮಪೂಜ್ಯ ಶ್ರೀಮದ್ಸ ಯಮೀಂದ್ರತೀರ್ಥ ಸ್ವಾಮೀಜಿಯವರು ತಮ್ಮ ಅಮೃತ ಹಸ್ತದಿಂದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರಿಗೆ ಹಸ್ತಾಂತರಿಸುವ ಮೂಲಕ ಅಯೋಧ್ಯೆಗೆ ಕಳುಹಿಸಲಾಗಿತ್ತು. ಮೊನ್ನೆಯಷ್ಟೇ ಕಾಶಿಮಠ ಸಂಸ್ಥಾನದ ವತಿಯಿಂದ ಅಯೋಧ್ಯೆಯ ಬಾಲರಾಮನಿಗೆ ಬೆಳ್ಳಿಯ ಪಲ್ಲಕ್ಕಿಯೂ ಸಮರ್ಪಣೆಯಾಗಿದ್ದು ಇಲ್ಲಿ ಗಮನಾರ್ಹ.
ಇದು ನನ್ನ ಜೀವನದ ಪರಮ ಪವಿತ್ರ ಭಾಗ್ಯವಾಗಿದ್ದು ಪರಮಪೂಜ್ಯ ಗುರುಗಳ ಹಾಗೂ ಪ್ರಭು ಶ್ರೀರಾಮನ ಸೇವಾ ಕಾರ್ಯಕ್ಕಿಂತ ಮಿಗಿಲಾದುದು ಬೇರಾವುದೂ ಇಲ್ಲವೆಂದು ಶಾಸಕರು ಇದೇ ವೇಳೆ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು