1:19 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಇತ್ತೀಚಿಗಿನ ಘಟನೆ ಸಂಬಂಧಿಸಿದಂತೆ ಶಿಕ್ಷಕಿಯ ತಕ್ಷಣದಿಂದ ವಜಾಗೊಳಿಸಲಾಗಿದೆ: ಸಂತ ಜೆರೋಸ ಶಾಲೆಯ ಮುಖ್ಯ ಶಿಕ್ಷಕಿ ಪ್ರಕಟಣೆ

12/02/2024, 19:48

ಮಂಗಳೂರು(reporterkarnataka.com): ಸಂತ ಜೆರೋಸ ಶಾಲೆಯು 60 ವರ್ಷಗಳ ಇತಿಹಾಸ ಹೊಂದಿದ್ದು, ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಾ ಬಂದಿದೆ. ಆದರೆ ಇತ್ತೀಚಿಗೆ ನಡೆದ ಘಟನೆಯ ಹಿನ್ನೆಲೆಯಲ್ಲಿ ಸಿಸ್ಟರ್ ಪ್ರಭಾ ಅವರನ್ನು ಈ ಕ್ಷಣದಿಂದ ನಮ್ಮ ಸಂಸ್ಥೆಯಿಂದ ವಜಾಗೊಳಿಸಲಾಗಿದ್ದು, ಅವರ ಸ್ಥಾನಕ್ಕೆ ಮತ್ತೊಬ್ಬ ಶಿಕ್ಷಕರನ್ನು ನೇಮಿಸಲಾಗುವುದು ಎಂದು ಸೈಂಟ್ ಜೆರೋಸ ಹೈಯರ್ ಪ್ರೈಮರಿ ಶಾಲೆಯ ಮುಖ್ಯ ಶಿಕ್ಷಕಿ ತಿಳಿಸಿದ್ದಾರೆ.
ಘಟನೆಯ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳಿಂದ ನಡೆಯುತ್ತಿರುವ ತನಿಖೆಯು ಪಾರದರ್ಶಕತೆಯಿಂದ ಕೂಡಿರಲು ನಮ್ಮ ಸಹಕಾರ ನೀಡಲಾಗುವುದು. ಈ ತನಿಖೆಯ ಅಂತಿಮ ಆದೇಶಕ್ಕೆ ನಾವು ಬದ್ಧರಾಗಿದ್ದೇವೆ ಮತ್ತು ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಪೋಷಕರಿಂದ ಇದೇ ರೀತಿಯ ಸಹಕಾರವನ್ನು ನಿರೀಕ್ಷಿಸುತ್ತೇವೆ.
ಜೆರೋಸ ಶಾಲೆಯ ಇತಿಹಾಸದಲ್ಲಿ ಯಾವುದೇ ಇಂತಹ ಘಟನೆ ನಡೆದಿಲ್ಲ. ನಾವು ಸಾಂವಿಧಾನಿಕ ಸಿದ್ದಾಂತಗಳಿಗೆ ಬೆಲೆ ಕೊಟ್ಟು ಅವುಗಳಿಗೆ ಬದ್ದರಾಗಿ ಇರುತ್ತೇವೆ. ಮುಂದೆಯೂ ನಾವು ಎಲ್ಲ ಧರ್ಮಗಳು, ನಂಬಿಕೆಗಳು ಮತ್ತು ಆಚರಣೆಗಳನ್ನು ಸಮಾನವಾಗಿ ಸ್ವೀಕರಿಸುತ್ತೇವೆ. ಈ ದುರಾದೃಷ್ಟಕರ ಘಟನೆಯು ನಮ್ಮ ಮಧ್ಯೆ ತಾತ್ಕಾಲಿಕ ಅಪನಂಬಿಕೆಯನ್ನು ಸೃಷ್ಟಿಸಿದ್ದು, ನಮ್ಮ ಈ ನಡೆಯು ನಿಮ್ಮ ಸಹಕಾರದಿಂದ ಈ ನಂಬಿಕೆಯನ್ನು ಪುನಃ ನಿರ್ಮಿಸುವುದಕ್ಕೆ ಸಹಕಾರಿಯಾಗಲಿದೆ ಮತ್ತು ನಾವೆಲ್ಲ ನಮ್ಮ ವಿದ್ಯಾರ್ಥಿ ಗಳ ಉತ್ತಮ ಭವಿಷ್ಯಕ್ಕೆ ಒಟ್ಟಾಗಿ ಶ್ರಮಿಸೋಣ ಎಂದು ಮುಖ್ಯ ಶಿಕ್ಷಕಿಯವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು