8:54 AM Sunday20 - July 2025
ಬ್ರೇಕಿಂಗ್ ನ್ಯೂಸ್
ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ… ಮಂಗಳೂರು – ಬೆಂಗಳೂರು 4 ತಾಸಿನ ಆಂಬುಲೆನ್ಸ್ ಪ್ರಯಾಣ!: ಹೃದಯ ಕಾಯಿಲೆಯ 14… ವಿದ್ಯುತ್ ಶಾಕ್: ಲೈನ್ ಮ್ಯಾನ್ ದಾರುಣ ಸಾವು; ಒಂದೂವರೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ… ರಾಹುಲ್ ಗಾಂಧಿಯ ಗೊತ್ತಿಲ್ಲದ ಸಾಧನೆಗೆ ಗೊತ್ತಿಲ್ಲದ ಪ್ರಶಸ್ತಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ಬಿರುಸುಗೊಂಡ ಕಾಡಾನೆಗಳ ಅರಣ್ಯಕ್ಕೆ ಅಟ್ಟುವ ಕಾರ್ಯ: ನಾಡಿನಿಂದ ಕಾಡಿನತ್ತ ಆನೆಗಳ ಮತ್ತೊಂದು ಹಿಂಡು ಭಾರೀ ಮಳೆ: ಕೊಡಗು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ: ಶಾಲೆ- ಕಾಲೇಜುಗಳಿಗೆ ನಾಳೆಯೂ… ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ…

ಇತ್ತೀಚಿನ ಸುದ್ದಿ

ಇತ್ತೀಚಿಗಿನ ಘಟನೆ ಸಂಬಂಧಿಸಿದಂತೆ ಶಿಕ್ಷಕಿಯ ತಕ್ಷಣದಿಂದ ವಜಾಗೊಳಿಸಲಾಗಿದೆ: ಸಂತ ಜೆರೋಸ ಶಾಲೆಯ ಮುಖ್ಯ ಶಿಕ್ಷಕಿ ಪ್ರಕಟಣೆ

12/02/2024, 19:48

ಮಂಗಳೂರು(reporterkarnataka.com): ಸಂತ ಜೆರೋಸ ಶಾಲೆಯು 60 ವರ್ಷಗಳ ಇತಿಹಾಸ ಹೊಂದಿದ್ದು, ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಾ ಬಂದಿದೆ. ಆದರೆ ಇತ್ತೀಚಿಗೆ ನಡೆದ ಘಟನೆಯ ಹಿನ್ನೆಲೆಯಲ್ಲಿ ಸಿಸ್ಟರ್ ಪ್ರಭಾ ಅವರನ್ನು ಈ ಕ್ಷಣದಿಂದ ನಮ್ಮ ಸಂಸ್ಥೆಯಿಂದ ವಜಾಗೊಳಿಸಲಾಗಿದ್ದು, ಅವರ ಸ್ಥಾನಕ್ಕೆ ಮತ್ತೊಬ್ಬ ಶಿಕ್ಷಕರನ್ನು ನೇಮಿಸಲಾಗುವುದು ಎಂದು ಸೈಂಟ್ ಜೆರೋಸ ಹೈಯರ್ ಪ್ರೈಮರಿ ಶಾಲೆಯ ಮುಖ್ಯ ಶಿಕ್ಷಕಿ ತಿಳಿಸಿದ್ದಾರೆ.
ಘಟನೆಯ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳಿಂದ ನಡೆಯುತ್ತಿರುವ ತನಿಖೆಯು ಪಾರದರ್ಶಕತೆಯಿಂದ ಕೂಡಿರಲು ನಮ್ಮ ಸಹಕಾರ ನೀಡಲಾಗುವುದು. ಈ ತನಿಖೆಯ ಅಂತಿಮ ಆದೇಶಕ್ಕೆ ನಾವು ಬದ್ಧರಾಗಿದ್ದೇವೆ ಮತ್ತು ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಪೋಷಕರಿಂದ ಇದೇ ರೀತಿಯ ಸಹಕಾರವನ್ನು ನಿರೀಕ್ಷಿಸುತ್ತೇವೆ.
ಜೆರೋಸ ಶಾಲೆಯ ಇತಿಹಾಸದಲ್ಲಿ ಯಾವುದೇ ಇಂತಹ ಘಟನೆ ನಡೆದಿಲ್ಲ. ನಾವು ಸಾಂವಿಧಾನಿಕ ಸಿದ್ದಾಂತಗಳಿಗೆ ಬೆಲೆ ಕೊಟ್ಟು ಅವುಗಳಿಗೆ ಬದ್ದರಾಗಿ ಇರುತ್ತೇವೆ. ಮುಂದೆಯೂ ನಾವು ಎಲ್ಲ ಧರ್ಮಗಳು, ನಂಬಿಕೆಗಳು ಮತ್ತು ಆಚರಣೆಗಳನ್ನು ಸಮಾನವಾಗಿ ಸ್ವೀಕರಿಸುತ್ತೇವೆ. ಈ ದುರಾದೃಷ್ಟಕರ ಘಟನೆಯು ನಮ್ಮ ಮಧ್ಯೆ ತಾತ್ಕಾಲಿಕ ಅಪನಂಬಿಕೆಯನ್ನು ಸೃಷ್ಟಿಸಿದ್ದು, ನಮ್ಮ ಈ ನಡೆಯು ನಿಮ್ಮ ಸಹಕಾರದಿಂದ ಈ ನಂಬಿಕೆಯನ್ನು ಪುನಃ ನಿರ್ಮಿಸುವುದಕ್ಕೆ ಸಹಕಾರಿಯಾಗಲಿದೆ ಮತ್ತು ನಾವೆಲ್ಲ ನಮ್ಮ ವಿದ್ಯಾರ್ಥಿ ಗಳ ಉತ್ತಮ ಭವಿಷ್ಯಕ್ಕೆ ಒಟ್ಟಾಗಿ ಶ್ರಮಿಸೋಣ ಎಂದು ಮುಖ್ಯ ಶಿಕ್ಷಕಿಯವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು