1:01 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ವಂಚನೆ ಆರೋಪ: ಬಾಲಿವುಡ್ ನಟಿ, ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ, ತಾಯಿ ಸುನಂದಾ ಶೆಟ್ಟಿಗೆ ಬಂಧನ ಭೀತಿ?

10/08/2021, 08:48

ಮುಂಬೈ(reporterkarnataka.com): ಬಾಲಿವುಡ್ ಖ್ಯಾತ ನಟಿ, ಕರಾವಳಿ ಮೂಲದ ಬೆಡಗಿ ಶಿಲ್ಪಾ ಶೆಟ್ಟಿ ಹಾಗೂ ಅವರ ತಾಯಿ ಸುನಂದಾ ಶೆಟ್ಟಿ ಅವರಿಗೆ ಬಂಧನ ಭೀತಿ ಎದುರಾಗಿದೆ. ಕೋಟ್ಯಂತರ ರೂಪಾಯಿ ವಂಚನೆ ಮಾಡಿರುವ ಆರೋಪದಲ್ಲಿ ತಾಯಿ- ಮಗಳನ್ನು ಬಂಧಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಶಿಲ್ಪಾ ಶೆಟ್ಟಿ ಅವರು ನಡೆಸುತ್ತಿರುವ ಇವೋಸಿಸ್​ ವೆಲ್​ನೆಸ್​ ಫಿಟ್ನೆಸ್​ ಕೇಂದ್ರವೇ ಅವರಿಗೆ ಉರುಳಾಗಿ ಪರಿಣಮಿಸಿದೆ. ಫಿಟ್ನೆಸ್ ಕೇಂದ್ರಕ್ಕೆ ಶಿಲ್ಪಾ ಶೆಟ್ಟಿ ಮುಖ್ಯಸ್ಥೆ. ತಾಯಿ ಸುನಂದಾ ಅವರು ನಿರ್ದೇಶಕಿ ಆಗಿದ್ದಾರೆ. ಅದರ ಶಾಖೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ತೆರೆಯುವುದಾಗಿ ಹೇಳಿ ಇಬ್ಬರು ವ್ಯಕ್ತಿಗಳಿಂದ ಕೋಟ್ಯಂತರ ರೂಪಾಯಿ ಪಡೆದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಕುರಿತು ಜೋಸ್ನಾ ಚೌಹಾಣ್​ ಮತ್ತು ರೋಹಿತ್​ ವೀರ್​ ಸಿಂಗ್​ ಎಂಬುವವರು ಲಖನೌನ ಹಜರತ್​ಗಂಜ್​ ಮತ್ತು ವಿಭೂತಿ ಖಂಡ್​​ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಪ್ರಕರಣದ ವಿಚಾರಣೆ ನಡೆಸಲು ಲಖನೌ ಪೊಲೀಸರು ಮುಂಬೈಗೆ ಆಗಮಿಸಿದ್ದಾರೆ ಎಂಬ ಮಾಹಿತಿ ಇದೆ. ಆರೋಪಕ್ಕೆ ಸಂಬಂಧಿಸಿದ್ದಂತೆ ಮೇಲ್ನೋಟಕ್ಕೆ ಸಾಕ್ಷ್ಯ ಗಳು ದೊರೆತರೆ ಅವರನ್ನು ಪೊಲೀಸರು ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ನೀಲಿ ಚಿತ್ರ ತಯಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಶಿಲ್ಪಾ ಶೆಟ್ಟಿ ಅವರ ಪತಿ ರಾಜ್ ಕುಂದ್ರಾ ಅವರು ಈಗಾಗಲೇ ಜೈಲಿನಲ್ಲಿದ್ದಾರೆ. 

ಜುಲೈ 19 ರಂದು ಮುಂಬೈ ಪೊಲೀಸರು ಅವರನ್ನು ಬಂಧಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು