6:35 AM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಮಂಗಳೂರು ಧರ್ಮಪ್ರಾಂತ್ಯದ ಕ್ರೈಸ್ತ ಚರ್ಚ್ ಗಳಲ್ಲಿ ಬೂದಿ ಬುಧವಾರ ಆಚರಣೆ: ಈಸ್ಟರ್ ವರೆಗೆ ವಿಶೇಷ ಪ್ರಾರ್ಥನೆ

14/02/2024, 17:05

ಮಂಗಳೂರು(reporterkarnataka.com): ಯೇಸು ಕ್ರಿಸ್ತರ 40 ದಿನಗಳ ತಪಸ್ಸು ಕಾಲ(ಕಪ್ಪು ದಿನ)ದ ಆರಂಭದ ಅಂಗವಾಗಿ ಬುಧವಾರ ಮಂಗಳೂರು ಧರ್ಮಪ್ರಾಂತ್ಯದ ಕ್ರೈಸ್ತ ಚರ್ಚ್ ಗಳಲ್ಲಿ ಬೂದಿ ಬುಧವಾರ ಆಚರಣೆ ನಡೆಯಿತು.

ಈ 40 ದಿನಗಳಲ್ಲಿ ಕ್ರೈಸ್ತರು ತ್ಯಾಗ, ಪ್ರಾರ್ಥನೆಯನ್ನು ಮಾಡುತ್ತಾರೆ. ನಗರದ ಉರ್ವ ಚರ್ಚ್‍ನಲ್ಲಿ ಧರ್ಮಗುರು ಫಾ.ಬೆಂಜಮಿನ್ ಪಿಂಟೋ ಅವರು ಭಕ್ತರಿಗೆ ಬೂದಿಯ ಶಿಲುಬೆ ಗುರುತು ಹಾಕುವ ಮೂಲಕ ತಪಸ್ಸು ಕಾಲಕ್ಕೆ ಮುನ್ನುಡಿ ಬರೆದರು.
ಮಂಗಳೂರು ಮಾತ್ರವಲ್ಲದೆ ಇಡೀ ವಿಶ್ವದ ಕ್ರೈಸ್ತ ಬಂಧುಗಳು ಬೂದಿ ಬುಧವಾರದ ಮೂಲಕ ಕಪ್ಪು ದಿನ( ಬ್ಲ್ಯಾಕ್ ಡೇಸ್) ಆಚರಣೆ ಆರಂಭಿಸುತ್ತಾರೆ. ಈ ಬೂದಿ ಬುಧವಾರದ ವಿಶೇಷತೆ ಎಂದರೆ ಎಲ್ಲ ಚರ್ಚ್‌ಗಳಲ್ಲಿ ಬುಧವಾರ ಬೆಳಗ್ಗೆ ಹಾಗೂ ಸಂಜೆ ವಿಶೇಷ ಪೂಜೆಯ ಜತೆಗೆ ಬೂದಿಯಲ್ಲಿ ಶಿಲುಬೆಯ ಚಿಹ್ನೆಯನ್ನು ಭಕ್ತರಿಗೆ ಹಾಕಲಾಗುತ್ತದೆ. ಆ ಮೂಲಕ ಕಪ್ಪು ದಿನದ ಆಚರಣೆಗೆ ಚಾಲನೆ ಸಿಗುತ್ತದೆ. ಕ್ರೈಸ್ತರು ಬುಧವಾರ ವಿಶೇಷವಾದ ಪ್ರಾರ್ಥನೆ, ಉಪವಾಸದ ಮೂಲಕ ಈ ದಿನವನ್ನು ವಿಶಿಷ್ಟವಾಗಿ ಆಚರಣೆ ಮಾಡುತ್ತಾರೆ. ಇನ್ನು 40 ದಿನಗಳ ಕಾಲ ಪ್ರಾರ್ಥನೆ, ತ್ಯಾಗದ ಬದುಕಿನ ಹಾದಿಯಲ್ಲಿ ಕ್ರೈಸ್ತರು ಸಾಗುತ್ತಾರೆ. ಈಸ್ಟರ್ ಹಬ್ಬದ ಮೂಲಕ ಈ ಕಪ್ಪು ದಿನಕ್ಕೆ ಪೂರ್ಣ ವಿರಾಮ ಸಿಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು