1:24 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮಂಗಳೂರು ಧರ್ಮಪ್ರಾಂತ್ಯದ ಕ್ರೈಸ್ತ ಚರ್ಚ್ ಗಳಲ್ಲಿ ಬೂದಿ ಬುಧವಾರ ಆಚರಣೆ: ಈಸ್ಟರ್ ವರೆಗೆ ವಿಶೇಷ ಪ್ರಾರ್ಥನೆ

14/02/2024, 17:05

ಮಂಗಳೂರು(reporterkarnataka.com): ಯೇಸು ಕ್ರಿಸ್ತರ 40 ದಿನಗಳ ತಪಸ್ಸು ಕಾಲ(ಕಪ್ಪು ದಿನ)ದ ಆರಂಭದ ಅಂಗವಾಗಿ ಬುಧವಾರ ಮಂಗಳೂರು ಧರ್ಮಪ್ರಾಂತ್ಯದ ಕ್ರೈಸ್ತ ಚರ್ಚ್ ಗಳಲ್ಲಿ ಬೂದಿ ಬುಧವಾರ ಆಚರಣೆ ನಡೆಯಿತು.

ಈ 40 ದಿನಗಳಲ್ಲಿ ಕ್ರೈಸ್ತರು ತ್ಯಾಗ, ಪ್ರಾರ್ಥನೆಯನ್ನು ಮಾಡುತ್ತಾರೆ. ನಗರದ ಉರ್ವ ಚರ್ಚ್‍ನಲ್ಲಿ ಧರ್ಮಗುರು ಫಾ.ಬೆಂಜಮಿನ್ ಪಿಂಟೋ ಅವರು ಭಕ್ತರಿಗೆ ಬೂದಿಯ ಶಿಲುಬೆ ಗುರುತು ಹಾಕುವ ಮೂಲಕ ತಪಸ್ಸು ಕಾಲಕ್ಕೆ ಮುನ್ನುಡಿ ಬರೆದರು.
ಮಂಗಳೂರು ಮಾತ್ರವಲ್ಲದೆ ಇಡೀ ವಿಶ್ವದ ಕ್ರೈಸ್ತ ಬಂಧುಗಳು ಬೂದಿ ಬುಧವಾರದ ಮೂಲಕ ಕಪ್ಪು ದಿನ( ಬ್ಲ್ಯಾಕ್ ಡೇಸ್) ಆಚರಣೆ ಆರಂಭಿಸುತ್ತಾರೆ. ಈ ಬೂದಿ ಬುಧವಾರದ ವಿಶೇಷತೆ ಎಂದರೆ ಎಲ್ಲ ಚರ್ಚ್‌ಗಳಲ್ಲಿ ಬುಧವಾರ ಬೆಳಗ್ಗೆ ಹಾಗೂ ಸಂಜೆ ವಿಶೇಷ ಪೂಜೆಯ ಜತೆಗೆ ಬೂದಿಯಲ್ಲಿ ಶಿಲುಬೆಯ ಚಿಹ್ನೆಯನ್ನು ಭಕ್ತರಿಗೆ ಹಾಕಲಾಗುತ್ತದೆ. ಆ ಮೂಲಕ ಕಪ್ಪು ದಿನದ ಆಚರಣೆಗೆ ಚಾಲನೆ ಸಿಗುತ್ತದೆ. ಕ್ರೈಸ್ತರು ಬುಧವಾರ ವಿಶೇಷವಾದ ಪ್ರಾರ್ಥನೆ, ಉಪವಾಸದ ಮೂಲಕ ಈ ದಿನವನ್ನು ವಿಶಿಷ್ಟವಾಗಿ ಆಚರಣೆ ಮಾಡುತ್ತಾರೆ. ಇನ್ನು 40 ದಿನಗಳ ಕಾಲ ಪ್ರಾರ್ಥನೆ, ತ್ಯಾಗದ ಬದುಕಿನ ಹಾದಿಯಲ್ಲಿ ಕ್ರೈಸ್ತರು ಸಾಗುತ್ತಾರೆ. ಈಸ್ಟರ್ ಹಬ್ಬದ ಮೂಲಕ ಈ ಕಪ್ಪು ದಿನಕ್ಕೆ ಪೂರ್ಣ ವಿರಾಮ ಸಿಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು