6:34 AM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಸಿಎಂ ತವರು ಕ್ಷೇತ್ರದ ರೈತರಿಗೆ ಸಿಗದ ನ್ಯಾಯ: ಖಾಯಂ ಉದ್ಯೋಗ ಸೇರಿದಂತೆ ವಿವಿಧ ಬೇಡಿಕೆ ಈಡೇರಿಗೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಪ್ರತಿಭಟನಾ ಧರಣಿ

14/02/2024, 21:18

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರವಾದ ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಬಣ್ಣಾರಿಯಮ್ಮನ್ ಸಕ್ಕರೆ ಕಾರ್ಖಾನೆಗೆ ಭೂಮಿ ನೀಡಿ ವಂಚನೆಗೊಳಗಾದ ಸುಮಾರು 150ಕ್ಕೂ ಹೆಚ್ಚು ರೈತ ಕುಟುಂಬಗಳು ತಮ್ಮ ಹಕ್ಕೊತ್ತಾಯಕ್ಕಾಗಿ ಕಾರ್ಖಾನೆ ಮುಂಭಾಗ ಅನಿರ್ದಿಷ್ಟಾವಧಿ ಪ್ರತಿಭಟನಾ ಧರಣಿ ನಡೆಸುತ್ತಿದ್ದಾರೆ.
ಕೆಐಎಡಿಬಿ ಗೆ ಭೂಮಿ ನೀಡಿದ ರೈತರ ಹಕ್ಕುಗಳ ಹೋರಾಟ ಸಮಿತಿ ಹಾಗೂ ಜನಾಂದೋಲನಗಳ ಮಹಾ ಮೈತ್ರಿ ರಾಜ್ಯ ರೈತ ಸಂಘ, ಮತ್ತು ಅಖಿಲ ಭಾರತ ಕೃಷಿ ಕಾರ್ಮಿಕ ಸಂಘಟನೆ ಸಹಯೋಗದೊಂದಿಗೆ ನಡೆಯುತ್ತಿರುವ ಪ್ರತಿಭಟನಾ ಧರಣಿ ಕಳೆದ ಆರು ದಿನಗಳಿಂದ ಕಾರ್ಖಾನೆ ಮುಂಭಾಗ ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಅನಿರ್ದಿಷ್ಟಾವಧಿ ಪ್ರತಿಭಟನಾ ಧರಣಿ ನಡೆಸುತ್ತಿದ್ದಾರೆ. ಕಾರ್ಖಾನೆ ಮುಂಭಾಗವೇ ತಮ್ಮ ಜಾನುವಾರುಗಳನ್ನು ಕಟ್ಟಿ ಎತ್ತಿನ ಗಾಡಿಗಳನ್ನು ನಿಲ್ಲಿಸಿ, ಅಲ್ಲಿಯೇ ಅಡುಗೆ ಮಾಡಿ ಊಟ, ತಿಂಡಿ ಮಾಡುತ್ತ ಅಹೋರಾತ್ರಿ ಕಷ್ಟದ ಪ್ರತಿಭಟನಾ ಧರಣಿ ಹಾಗೂ ಜೀವನ ರೈತ ಕುಟುಂಬದವರು ನಡೆಸುತ್ತಿದ್ದಾರೆ.
ತಮ್ಮ ಮಕ್ಕಳಿಗೆ ಖಾಯಂ ಉದ್ಯೋಗ ಸೇರಿದಂತೆ ವಿವಿಧ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಕಾರ್ಖಾನೆ ಮತ್ತು ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


ಕಾರ್ಖಾನೆಯ ಮುಖ್ಯ ದ್ವಾರಗಳಲ್ಲೆ ಕುಳಿತ ಪ್ರತಿಭಟನಾಕಾರರು ಕಾರ್ಖಾನೆಗೆ ಯಾವುದೇ ವಾಹನಗಳು, ಸಿಬ್ಬಂದಿಗಳು ನೌಕರರು ಹೋಗದಂತೆ ದಿಗ್ಬಂಧನ ವಿಧಿಸಿ ಕಾರ್ಖಾನೆಯ ಕಾರ್ಯ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದ್ದಾರೆ.
ಬಳಿಕ ರೈತ ಸಂಘಟಕರು ಹಾಗೂ ಸಂತ್ರಸ್ತ ರೈತರು ಮತ್ತು ಮಹಿಳೆಯರು ಮಾತನಾಡಿ, ನಮ್ಮ ಮಕ್ಕಳಿಗೆ ಉದ್ಯೋಗ ಸಿಗುತ್ತದೆ ಎಂಬ ಖುಷಿ ಹಾಗೂ ಭರವಸೆಯಿಂದ ನಮ್ಮ ಕೃಷಿ ಭೂಮಿಯನ್ನು ಸಕ್ಕರೆ ಕಾರ್ಖಾನೆಗೆ ಬಹಳ ಕಡಿಮೆ ಬೆಲೆಯಲ್ಲಿ ಭೂಮಿ ನೀಡಿ ಸುಮಾರು ವರ್ಷಗಳೆ ಕಳೆದರೂ ನಮ್ಮ ಮಕ್ಕಳಿಗೆ ಖಾಯಂ ಉದ್ಯೋಗ ನೀಡದೆ ವಂಚಿಸುತ್ತಾ ಬಂದಿದ್ದಾರೆ ಎಂದು ಆರೋಪಿಸಿದರು.
ಇದು ಸಿಎಂ ಪ್ರತಿನಿಧಿಸುತ್ತಿರುವ ಕ್ಷೇತ್ರ ಆದರೂ ಇಲ್ಲಿ ಅವರಿಗೆ ಮತ ನೀಡಿದ ಮತದಾರರು ಮತ್ತು ಭೂಮಿ ಕಳೆದುಕೊಂಡ ರೈತರು ಕಳೆದ ಆರು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಯಾವೊಬ್ಬ ಅಧಿಕಾರಿಗಳಾಗಲಿ ಕಾರ್ಖಾನೆ ಯವರಾಗಲಿ ಕ್ಯಾರೇ ಎನ್ನದೆ ಒಬ್ಬ ಮುಖ್ಯಮಂತ್ರಿಗೆ ಅವಮಾನವಾಗುವಂತಹ ಘಟನೆಗೆ ಕಾರಣರಾಗಿದ್ದಾರೆ ಎಂದರು.
ಇಲ್ಲಿ ಪ್ರತಿಭಟನೆ ನಡೆಸುತ್ತಿರುವ ಮಹಿಳೆಯರಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆಯಾಗಿ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಹಾಗಾಗಿ ಇದಕ್ಕೆ ಸಿಎಂ ಆದಿಯಾಗಿ ಕೂಡಲೇ ಸಂಬಂಧಪಟ್ಟವರು ಇದರ ಬಗ್ಗೆ ಜಾಗೃತರಾಗಿ ನಮ್ಮ ಹಕ್ಕೊತ್ತಾಯಗಳನ್ನು ಬಗೆಹರಿಸದಿದ್ದರೆ ಕಾರ್ಖಾನೆಗೆ ಮುತ್ತಿಗೆ ಹಾಕಿ ನಾವು ನೀಡಿರುವ ಜಮೀನನ್ನು ವಶಪಡಿಸಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ಬೊಕ್ಕಳ್ಳಿ ನಂಜುಂಡಸ್ವಾಮಿ, ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯ ಜಿಲ್ಲಾಸಂಚಾಲಕ ಬಸವರಾಜು, ಸಂತ್ರಸ್ತ ರೈತರುಗಳಾದ ಪುನೀತ್, ರಾಜು, ಮಹೇಶ್, ಮಹದೇವಮ್ಮ, ಲಕ್ಷ್ಮಮ್ಮ, ಸುಶೀಲ, ಸೇರಿದಂತೆ ನೂರಾರು ಮಂದಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು