3:00 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಬಂಟ್ವಾಳ: ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ತುಮಕೂರು ಮೂಲದ ಯುವತಿ ಆತ್ಮಹತ್ಯೆ?

15/02/2024, 09:37

ಬಂಟ್ವಾಳ(reporterkarnataka.com): ಬಿ.ಸಿ. ರೋಡು ಸಮೀಪದ ಕೈಕುಂಜೆ ಎಂಬಲ್ಲಿ ಗುರುವಾರ ಮುಂಜಾನೆ ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.


ಗುರುವಾರ ಮುಂಜಾನೆ ಸುಮಾರು 6.25 ರ ವೇಳೆಗೆ ಈ ದುರ್ಘಟನೆ ನಡೆದಿದೆ. ಚಲಿಸುತ್ತಿದ್ದ ರೈಲಿನಿಂದ ಯುವತಿ ನದಿ ನೀರಿಗೆ ಜಿಗಿದಿದ್ದಾಳೆ ಎನ್ನಲಾಗಿದೆ. ರೈಲಿನ ಇತರ ಪ್ರಯಾಣಿಕರು ನೀಡಿದ ಮಾಹಿತಿಯಂತೆ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ. ಮೃತ ಯುವತಿಯನ್ನು ತುಮಕೂರು ಮೂಲದ ನಯನಾ (25) ಎಂದು ಗುರುತಿಸಲಾಗಿದೆ.
ಯುವತಿ ನದಿಗೆ ಹಾರಿದ ಸುದ್ದಿ ತಿಳಿದ ತಕ್ಷಣ ಗೂಡಿನಬಳಿಯ
ಜೀವ ರಕ್ಷಕ ತಂಡದ ಯುವಕರು ರಕ್ಷಣಾ ಕಾರ್ಯದಲ್ಲಿ ತೊಡಗಿದರು. ಆದರೆ ಯುವತಿ ಯನ್ನು ಮೇಲಕ್ಕೆತ್ತುವಷ್ಟರಲ್ಲಿ ಸಾವು ಸಂಭವಿಸಿತ್ತು. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ಹಾಗೂ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯುವತಿ ರೈಲಿನಿಂದ ಬಿದ್ದಿದ್ದಾರೋ ಅಥವಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಎಂಬ ಬಗ್ಗೆ ಸಂಶಯಿಸಲಾಗಿದ್ದು, ರೈಲ್ವೆ ಪ್ರಯಾಣಿಕರು ಪೊಲೀಸರಿಗೆ ನೀಡಿದ ಮಾಹಿತಿಯಂತೆ ನದಿಗೆ ಹಾರಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು