6:33 AM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ಬಂಟ್ವಾಳ: ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ತುಮಕೂರು ಮೂಲದ ಯುವತಿ ಆತ್ಮಹತ್ಯೆ?

15/02/2024, 09:37

ಬಂಟ್ವಾಳ(reporterkarnataka.com): ಬಿ.ಸಿ. ರೋಡು ಸಮೀಪದ ಕೈಕುಂಜೆ ಎಂಬಲ್ಲಿ ಗುರುವಾರ ಮುಂಜಾನೆ ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.


ಗುರುವಾರ ಮುಂಜಾನೆ ಸುಮಾರು 6.25 ರ ವೇಳೆಗೆ ಈ ದುರ್ಘಟನೆ ನಡೆದಿದೆ. ಚಲಿಸುತ್ತಿದ್ದ ರೈಲಿನಿಂದ ಯುವತಿ ನದಿ ನೀರಿಗೆ ಜಿಗಿದಿದ್ದಾಳೆ ಎನ್ನಲಾಗಿದೆ. ರೈಲಿನ ಇತರ ಪ್ರಯಾಣಿಕರು ನೀಡಿದ ಮಾಹಿತಿಯಂತೆ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ. ಮೃತ ಯುವತಿಯನ್ನು ತುಮಕೂರು ಮೂಲದ ನಯನಾ (25) ಎಂದು ಗುರುತಿಸಲಾಗಿದೆ.
ಯುವತಿ ನದಿಗೆ ಹಾರಿದ ಸುದ್ದಿ ತಿಳಿದ ತಕ್ಷಣ ಗೂಡಿನಬಳಿಯ
ಜೀವ ರಕ್ಷಕ ತಂಡದ ಯುವಕರು ರಕ್ಷಣಾ ಕಾರ್ಯದಲ್ಲಿ ತೊಡಗಿದರು. ಆದರೆ ಯುವತಿ ಯನ್ನು ಮೇಲಕ್ಕೆತ್ತುವಷ್ಟರಲ್ಲಿ ಸಾವು ಸಂಭವಿಸಿತ್ತು. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ಹಾಗೂ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯುವತಿ ರೈಲಿನಿಂದ ಬಿದ್ದಿದ್ದಾರೋ ಅಥವಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಎಂಬ ಬಗ್ಗೆ ಸಂಶಯಿಸಲಾಗಿದ್ದು, ರೈಲ್ವೆ ಪ್ರಯಾಣಿಕರು ಪೊಲೀಸರಿಗೆ ನೀಡಿದ ಮಾಹಿತಿಯಂತೆ ನದಿಗೆ ಹಾರಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು