4:58 AM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಬಂಟ್ವಾಳ: ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ತುಮಕೂರು ಮೂಲದ ಯುವತಿ ಆತ್ಮಹತ್ಯೆ?

15/02/2024, 09:37

ಬಂಟ್ವಾಳ(reporterkarnataka.com): ಬಿ.ಸಿ. ರೋಡು ಸಮೀಪದ ಕೈಕುಂಜೆ ಎಂಬಲ್ಲಿ ಗುರುವಾರ ಮುಂಜಾನೆ ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ.


ಗುರುವಾರ ಮುಂಜಾನೆ ಸುಮಾರು 6.25 ರ ವೇಳೆಗೆ ಈ ದುರ್ಘಟನೆ ನಡೆದಿದೆ. ಚಲಿಸುತ್ತಿದ್ದ ರೈಲಿನಿಂದ ಯುವತಿ ನದಿ ನೀರಿಗೆ ಜಿಗಿದಿದ್ದಾಳೆ ಎನ್ನಲಾಗಿದೆ. ರೈಲಿನ ಇತರ ಪ್ರಯಾಣಿಕರು ನೀಡಿದ ಮಾಹಿತಿಯಂತೆ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ. ಮೃತ ಯುವತಿಯನ್ನು ತುಮಕೂರು ಮೂಲದ ನಯನಾ (25) ಎಂದು ಗುರುತಿಸಲಾಗಿದೆ.
ಯುವತಿ ನದಿಗೆ ಹಾರಿದ ಸುದ್ದಿ ತಿಳಿದ ತಕ್ಷಣ ಗೂಡಿನಬಳಿಯ
ಜೀವ ರಕ್ಷಕ ತಂಡದ ಯುವಕರು ರಕ್ಷಣಾ ಕಾರ್ಯದಲ್ಲಿ ತೊಡಗಿದರು. ಆದರೆ ಯುವತಿ ಯನ್ನು ಮೇಲಕ್ಕೆತ್ತುವಷ್ಟರಲ್ಲಿ ಸಾವು ಸಂಭವಿಸಿತ್ತು. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ಹಾಗೂ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಯುವತಿ ರೈಲಿನಿಂದ ಬಿದ್ದಿದ್ದಾರೋ ಅಥವಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಎಂಬ ಬಗ್ಗೆ ಸಂಶಯಿಸಲಾಗಿದ್ದು, ರೈಲ್ವೆ ಪ್ರಯಾಣಿಕರು ಪೊಲೀಸರಿಗೆ ನೀಡಿದ ಮಾಹಿತಿಯಂತೆ ನದಿಗೆ ಹಾರಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು