8:34 PM Monday22 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ನಂಜನಗೂಡು: ಡೇಂಜರ್ ಕೆರೆಯ ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಕುರಿಗಳ ದಾರುಣ ಸಾವು

15/02/2024, 18:49

*ಮಧ್ಯಾಹ್ನದ ವೇಳೆಯಲ್ಲಿ ಕೆರೆಯ ನೀರು ಕುಡಿದ ಹಿಂಡು ಕುರಿಗಳು..ಸಂಜೆ ಕಳೆಯುವುದರ ಒಳಗಾಗಿ ಸರಣಿ ಸಾವು*

*ಕುರಿಗಾಹಿಗಳ ಕಣ್ಣೀರಿಗೆ ನೆರವಾಗದ ಜಿಲ್ಲಾ ಮತ್ತು ತಾಲೂಕು ಆಡಳಿತ*


*ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಆಹಾರ ಸೇವಿಸಿ ದಾಹ ನೀಗಿಸಿಕೊಳ್ಳುವ ಸಲುವಾಗಿ ಹತ್ತಿರದ ಕೆರೆಯ ನೀರು ಕುಡಿದ ಹಿಂಡು ಕುರಿಗಳು*

ಕೆರೆಯ ಕಲುಷಿತ ನೀರು ಕುಡಿದು ಸುಮಾರು 50ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಕೂಗಲೂರು ಗ್ರಾಮದ ಬಳಿ ನಡೆದಿದೆ.
ಕೆರೆಯ ಕಲುಷಿತ ನೀರು ಸೇವಿಸಿರುವುದರಿಂದಲೇ ಕುರಿಗಳ ದಾರಣ ಸಾವಿಗೆ ಕಾರಣ ಎನ್ನುತ್ತಾರೆ ಕುರಿಗಾಹಿಗಳು.
ಶಿರಾ ತಾಲ್ಲೂಕಿನ ಬಾಣಗೆರೆ ಗ್ರಾಮದ ರಂಗಸ್ವಾಮಿ ಎಂಬುವರು ನಾಲ್ಕು ನೂರಕ್ಕೂ ಹೆಚ್ಚು ಕುರಿಗಳನ್ನು ಕೂಗಲೂರು ಗ್ರಾಮದ ಸುತ್ತಮುತ್ತ ಮೇಯಿಸುತ್ತಿದ್ದರು.


ಇಂದು ಬೆಳಿಗ್ಗೆ ಕೂಗಲೂರು ಗ್ರಾಮದ ಕೆರೆಯಲ್ಲಿ ನೀರು ಕುಡಿಸಿಕೊಂಡು ಮೇಯಿಸಲು ಹೋದ ಸಂದರ್ಭದಲ್ಲಿ ಐವತ್ತಕ್ಕೂ ಹೆಚ್ಚು ಕುರಿಗಳು ಅಸ್ವಸ್ಥಗೊಂಡು ಸಾವನ್ನಪ್ಪಿವೆ.
ಕೆರೆಯ ನೀರಿನಲ್ಲಿ ಕ್ರಿಮಿನಾಶಕ ಮಿಶ್ರಣ ವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಕುರಿಗಳನ್ನೆ ನಂಬಿಕೊಂಡು ಜೀವನ ಸಾಗಿಸುತ್ತೇವೆ ಇಷ್ಟೊಂದು ಕುರಿಗಳು ಸಾವನ್ನಪ್ಪಿರುವುದರಿಂದ ನಮಗೆ ತುಂಬಲಾರದ ನಷ್ಟ ಉಂಟಾಗಿದೆ ನಾವು ಮುಂದೆ ಜೀವನ ಸಾಗಿಸುವುದು ಹೇಗೆ ಎಂಬುದು ಚಿಂತೆಯಾಗಿದೆ ಎಂದು ಕುರಿಗಳು ಸಂದರ್ಭದಲ್ಲಿ ಕಣ್ಣೀರು ಸುರಿಸಿದರು.
ಅಧಿಕಾರಿಗಳು ಯಾರು ಕೂಡ ಬಂದು ನಮ್ಮ ಸಮಸ್ಯೆಯನ್ನು ಕೇಳಿಲ್ಲ. ಸರ್ಕಾರ ಕೂಡಲೇ ಪರಿಹಾರವನ್ನು ನೀಡಬೇಕು ಎಂದು ಕುರಿಗಾಹಿ ರಂಗಸ್ವಾಮಿ ಒತ್ತಾಯಿಸಿದ್ದಾರೆ.
ಕೂಗಲೂರು ಗ್ರಾಮಸ್ಥರು ಎಚ್ಚೆತ್ತು ನಮ್ಮ ಸಾಲು ಸಾಲು ಕುರಿಗಳ ಸರಣಿ ಸಾವಿಗೆ ಕಾರಣವಾಗಿರುವ ಕೆರೆಯ ನೀರನ್ನು ಪರೀಕ್ಷಿಸಿ ಎಚ್ಚೆತ್ತುಕೊಳ್ಳಿ ಎಂದು ಕುರಿಗಾಹಿಗಳು ಸಂದರ್ಭದಲ್ಲಿ ಮನವಿ ಮಾಡಿದ್ದಾರೆ.
ಕೂಡಲೇ ನಂಜನಗೂಡು ತಾಲೂಕು ಆಡಳಿತ ಕೂಗಲೂರು ಕೆರೆಯ ನೀರನ್ನು ಪರೀಕ್ಷಿಸಿದ ಬಳಿಕ ಜನ, ಜಾನುವಾರುಗಳಿಗೆ ಉಪಯೋಗಿಸಲಿ ಎಂಬ ಕರೆಯನ್ನು ನೀಡಿ ಜಾಗೃತಗೊಳಿಸಿ
ಮುಂಬರುವ ಅನಾಹುತಗಳನ್ನು ತಾಲೂಕು ಆಡಳಿತ ತಪ್ಪಿಸಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು