1:24 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ನಂಜನಗೂಡು: ಡೇಂಜರ್ ಕೆರೆಯ ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಕುರಿಗಳ ದಾರುಣ ಸಾವು

15/02/2024, 18:49

*ಮಧ್ಯಾಹ್ನದ ವೇಳೆಯಲ್ಲಿ ಕೆರೆಯ ನೀರು ಕುಡಿದ ಹಿಂಡು ಕುರಿಗಳು..ಸಂಜೆ ಕಳೆಯುವುದರ ಒಳಗಾಗಿ ಸರಣಿ ಸಾವು*

*ಕುರಿಗಾಹಿಗಳ ಕಣ್ಣೀರಿಗೆ ನೆರವಾಗದ ಜಿಲ್ಲಾ ಮತ್ತು ತಾಲೂಕು ಆಡಳಿತ*


*ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಆಹಾರ ಸೇವಿಸಿ ದಾಹ ನೀಗಿಸಿಕೊಳ್ಳುವ ಸಲುವಾಗಿ ಹತ್ತಿರದ ಕೆರೆಯ ನೀರು ಕುಡಿದ ಹಿಂಡು ಕುರಿಗಳು*

ಕೆರೆಯ ಕಲುಷಿತ ನೀರು ಕುಡಿದು ಸುಮಾರು 50ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಕೂಗಲೂರು ಗ್ರಾಮದ ಬಳಿ ನಡೆದಿದೆ.
ಕೆರೆಯ ಕಲುಷಿತ ನೀರು ಸೇವಿಸಿರುವುದರಿಂದಲೇ ಕುರಿಗಳ ದಾರಣ ಸಾವಿಗೆ ಕಾರಣ ಎನ್ನುತ್ತಾರೆ ಕುರಿಗಾಹಿಗಳು.
ಶಿರಾ ತಾಲ್ಲೂಕಿನ ಬಾಣಗೆರೆ ಗ್ರಾಮದ ರಂಗಸ್ವಾಮಿ ಎಂಬುವರು ನಾಲ್ಕು ನೂರಕ್ಕೂ ಹೆಚ್ಚು ಕುರಿಗಳನ್ನು ಕೂಗಲೂರು ಗ್ರಾಮದ ಸುತ್ತಮುತ್ತ ಮೇಯಿಸುತ್ತಿದ್ದರು.


ಇಂದು ಬೆಳಿಗ್ಗೆ ಕೂಗಲೂರು ಗ್ರಾಮದ ಕೆರೆಯಲ್ಲಿ ನೀರು ಕುಡಿಸಿಕೊಂಡು ಮೇಯಿಸಲು ಹೋದ ಸಂದರ್ಭದಲ್ಲಿ ಐವತ್ತಕ್ಕೂ ಹೆಚ್ಚು ಕುರಿಗಳು ಅಸ್ವಸ್ಥಗೊಂಡು ಸಾವನ್ನಪ್ಪಿವೆ.
ಕೆರೆಯ ನೀರಿನಲ್ಲಿ ಕ್ರಿಮಿನಾಶಕ ಮಿಶ್ರಣ ವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಕುರಿಗಳನ್ನೆ ನಂಬಿಕೊಂಡು ಜೀವನ ಸಾಗಿಸುತ್ತೇವೆ ಇಷ್ಟೊಂದು ಕುರಿಗಳು ಸಾವನ್ನಪ್ಪಿರುವುದರಿಂದ ನಮಗೆ ತುಂಬಲಾರದ ನಷ್ಟ ಉಂಟಾಗಿದೆ ನಾವು ಮುಂದೆ ಜೀವನ ಸಾಗಿಸುವುದು ಹೇಗೆ ಎಂಬುದು ಚಿಂತೆಯಾಗಿದೆ ಎಂದು ಕುರಿಗಳು ಸಂದರ್ಭದಲ್ಲಿ ಕಣ್ಣೀರು ಸುರಿಸಿದರು.
ಅಧಿಕಾರಿಗಳು ಯಾರು ಕೂಡ ಬಂದು ನಮ್ಮ ಸಮಸ್ಯೆಯನ್ನು ಕೇಳಿಲ್ಲ. ಸರ್ಕಾರ ಕೂಡಲೇ ಪರಿಹಾರವನ್ನು ನೀಡಬೇಕು ಎಂದು ಕುರಿಗಾಹಿ ರಂಗಸ್ವಾಮಿ ಒತ್ತಾಯಿಸಿದ್ದಾರೆ.
ಕೂಗಲೂರು ಗ್ರಾಮಸ್ಥರು ಎಚ್ಚೆತ್ತು ನಮ್ಮ ಸಾಲು ಸಾಲು ಕುರಿಗಳ ಸರಣಿ ಸಾವಿಗೆ ಕಾರಣವಾಗಿರುವ ಕೆರೆಯ ನೀರನ್ನು ಪರೀಕ್ಷಿಸಿ ಎಚ್ಚೆತ್ತುಕೊಳ್ಳಿ ಎಂದು ಕುರಿಗಾಹಿಗಳು ಸಂದರ್ಭದಲ್ಲಿ ಮನವಿ ಮಾಡಿದ್ದಾರೆ.
ಕೂಡಲೇ ನಂಜನಗೂಡು ತಾಲೂಕು ಆಡಳಿತ ಕೂಗಲೂರು ಕೆರೆಯ ನೀರನ್ನು ಪರೀಕ್ಷಿಸಿದ ಬಳಿಕ ಜನ, ಜಾನುವಾರುಗಳಿಗೆ ಉಪಯೋಗಿಸಲಿ ಎಂಬ ಕರೆಯನ್ನು ನೀಡಿ ಜಾಗೃತಗೊಳಿಸಿ
ಮುಂಬರುವ ಅನಾಹುತಗಳನ್ನು ತಾಲೂಕು ಆಡಳಿತ ತಪ್ಪಿಸಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು