5:00 AM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ನಂಜನಗೂಡು: ಡೇಂಜರ್ ಕೆರೆಯ ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಕುರಿಗಳ ದಾರುಣ ಸಾವು

15/02/2024, 18:49

*ಮಧ್ಯಾಹ್ನದ ವೇಳೆಯಲ್ಲಿ ಕೆರೆಯ ನೀರು ಕುಡಿದ ಹಿಂಡು ಕುರಿಗಳು..ಸಂಜೆ ಕಳೆಯುವುದರ ಒಳಗಾಗಿ ಸರಣಿ ಸಾವು*

*ಕುರಿಗಾಹಿಗಳ ಕಣ್ಣೀರಿಗೆ ನೆರವಾಗದ ಜಿಲ್ಲಾ ಮತ್ತು ತಾಲೂಕು ಆಡಳಿತ*


*ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ಆಹಾರ ಸೇವಿಸಿ ದಾಹ ನೀಗಿಸಿಕೊಳ್ಳುವ ಸಲುವಾಗಿ ಹತ್ತಿರದ ಕೆರೆಯ ನೀರು ಕುಡಿದ ಹಿಂಡು ಕುರಿಗಳು*

ಕೆರೆಯ ಕಲುಷಿತ ನೀರು ಕುಡಿದು ಸುಮಾರು 50ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಕೂಗಲೂರು ಗ್ರಾಮದ ಬಳಿ ನಡೆದಿದೆ.
ಕೆರೆಯ ಕಲುಷಿತ ನೀರು ಸೇವಿಸಿರುವುದರಿಂದಲೇ ಕುರಿಗಳ ದಾರಣ ಸಾವಿಗೆ ಕಾರಣ ಎನ್ನುತ್ತಾರೆ ಕುರಿಗಾಹಿಗಳು.
ಶಿರಾ ತಾಲ್ಲೂಕಿನ ಬಾಣಗೆರೆ ಗ್ರಾಮದ ರಂಗಸ್ವಾಮಿ ಎಂಬುವರು ನಾಲ್ಕು ನೂರಕ್ಕೂ ಹೆಚ್ಚು ಕುರಿಗಳನ್ನು ಕೂಗಲೂರು ಗ್ರಾಮದ ಸುತ್ತಮುತ್ತ ಮೇಯಿಸುತ್ತಿದ್ದರು.


ಇಂದು ಬೆಳಿಗ್ಗೆ ಕೂಗಲೂರು ಗ್ರಾಮದ ಕೆರೆಯಲ್ಲಿ ನೀರು ಕುಡಿಸಿಕೊಂಡು ಮೇಯಿಸಲು ಹೋದ ಸಂದರ್ಭದಲ್ಲಿ ಐವತ್ತಕ್ಕೂ ಹೆಚ್ಚು ಕುರಿಗಳು ಅಸ್ವಸ್ಥಗೊಂಡು ಸಾವನ್ನಪ್ಪಿವೆ.
ಕೆರೆಯ ನೀರಿನಲ್ಲಿ ಕ್ರಿಮಿನಾಶಕ ಮಿಶ್ರಣ ವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಕುರಿಗಳನ್ನೆ ನಂಬಿಕೊಂಡು ಜೀವನ ಸಾಗಿಸುತ್ತೇವೆ ಇಷ್ಟೊಂದು ಕುರಿಗಳು ಸಾವನ್ನಪ್ಪಿರುವುದರಿಂದ ನಮಗೆ ತುಂಬಲಾರದ ನಷ್ಟ ಉಂಟಾಗಿದೆ ನಾವು ಮುಂದೆ ಜೀವನ ಸಾಗಿಸುವುದು ಹೇಗೆ ಎಂಬುದು ಚಿಂತೆಯಾಗಿದೆ ಎಂದು ಕುರಿಗಳು ಸಂದರ್ಭದಲ್ಲಿ ಕಣ್ಣೀರು ಸುರಿಸಿದರು.
ಅಧಿಕಾರಿಗಳು ಯಾರು ಕೂಡ ಬಂದು ನಮ್ಮ ಸಮಸ್ಯೆಯನ್ನು ಕೇಳಿಲ್ಲ. ಸರ್ಕಾರ ಕೂಡಲೇ ಪರಿಹಾರವನ್ನು ನೀಡಬೇಕು ಎಂದು ಕುರಿಗಾಹಿ ರಂಗಸ್ವಾಮಿ ಒತ್ತಾಯಿಸಿದ್ದಾರೆ.
ಕೂಗಲೂರು ಗ್ರಾಮಸ್ಥರು ಎಚ್ಚೆತ್ತು ನಮ್ಮ ಸಾಲು ಸಾಲು ಕುರಿಗಳ ಸರಣಿ ಸಾವಿಗೆ ಕಾರಣವಾಗಿರುವ ಕೆರೆಯ ನೀರನ್ನು ಪರೀಕ್ಷಿಸಿ ಎಚ್ಚೆತ್ತುಕೊಳ್ಳಿ ಎಂದು ಕುರಿಗಾಹಿಗಳು ಸಂದರ್ಭದಲ್ಲಿ ಮನವಿ ಮಾಡಿದ್ದಾರೆ.
ಕೂಡಲೇ ನಂಜನಗೂಡು ತಾಲೂಕು ಆಡಳಿತ ಕೂಗಲೂರು ಕೆರೆಯ ನೀರನ್ನು ಪರೀಕ್ಷಿಸಿದ ಬಳಿಕ ಜನ, ಜಾನುವಾರುಗಳಿಗೆ ಉಪಯೋಗಿಸಲಿ ಎಂಬ ಕರೆಯನ್ನು ನೀಡಿ ಜಾಗೃತಗೊಳಿಸಿ
ಮುಂಬರುವ ಅನಾಹುತಗಳನ್ನು ತಾಲೂಕು ಆಡಳಿತ ತಪ್ಪಿಸಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು