4:58 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಲೇಟ್ ಆಗಿ ಸಭೆಗೆ ಎಂಟ್ರಿ ಕೊಟ್ಟ ಅಧಿಕಾರಿಗೆ ಸಚಿವ ಸುನಿಲ್ ಕುಮಾರ್ ಗೇಟ್ ಪಾಸ್ ! : ನಂತರ ನಡೆಯಿತು ಫುಲ್ ಕ್ಲಾಸ್ !!

10/08/2021, 13:09

ಕಾರ್ಕಳ(reporterkarnataka.com): ತಡವಾಗಿ ಸಭೆಗೆ ಆಗಮಿಸಿದ ಅಧಿಕಾರಿಯನ್ನು ನೂತನ ಸಚಿವ ಗೇಟ್ ಔಟ್ ಮಾಡಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಸಭೆ ಮುಗಿಯುವ ವರೆಗೆ ಹೊರಗಡೆ ನಿಂತಿದ್ದ ಅಧಿಕಾರಿಗೆ ಸಚಿವರು ನಂತರ ಫುಲ್ ಕ್ಲಾಸ್ ಕೂಡ ತೆಗೆದುಕೊಂಡರು.

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ ಕಾರ್ಕಳ ತಾಲೂಕು ಪಂಚಾಯತ್ ಸಾಮರ್ಥ್ಯ ಸೌಧದಲ್ಲಿ ಸಭೆ ಆರಂಭವಾಗಿತ್ತು. ಜಲಜೀವನ್ ವಿಷನ್ ಯೋಜನೆಗೆ ಸಂಬಂಧಿಸಿದ ಮಾಹಿತಿಯನ್ನು ಸಚಿವರು ಕೇಳಿದರು. ಆದರೆ ಉತ್ತರಿಸಲು ಇಲಾಖೆಗೆ ಸಂಬಂಧಿಸಿದ ಯಾವುದೇ ಅಧಿಕಾರಿಗಳು ಇರಲಿಲ್ಲ. 

ಸಚಿವರು ಸಭೆ ಮುಂದುವರಿಸಿದರು. ತುಂಬಾ ಹೊತ್ತು ಕಳೆದ ಬಳಿಕ ಜಲಮಿಷನ್ ಯೋಜನೆಗೆ ಸಂಬಂಧಿಸಿದ ಅಧಿಕಾರಿ ಸಭೆಗೆ ಎಂಟ್ರಿ ಕೊಟ್ಟರು. ತಕ್ಷಣ ಗರಂ ಆದ ಸಚಿವರು ಅಧಿಕಾರಿಯನ್ನು ಸಭೆಯಿಂದ ಹೊರಗೆ ಕಳುಹಿಸಿದರು. ಸಭೆ ಮುಗಿದು ಸಚಿವರು ಹೊರಗೆ ಹೋಗುವ ವೇಳೆಯೂ ಅಧಿಕಾರಿ ಅಲ್ಲೇ ನಿಂತಿದ್ದರು. ಇದನ್ನು ಗಮನಿಸಿದ ಸುನಿಲ್ ಕುಮಾರ್ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. 

ಇತ್ತೀಚಿನ ಸುದ್ದಿ

ಜಾಹೀರಾತು