1:36 PM Monday15 - June 2026
ಬ್ರೇಕಿಂಗ್ ನ್ಯೂಸ್
ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ…

ಇತ್ತೀಚಿನ ಸುದ್ದಿ

ಲೇಟ್ ಆಗಿ ಸಭೆಗೆ ಎಂಟ್ರಿ ಕೊಟ್ಟ ಅಧಿಕಾರಿಗೆ ಸಚಿವ ಸುನಿಲ್ ಕುಮಾರ್ ಗೇಟ್ ಪಾಸ್ ! : ನಂತರ ನಡೆಯಿತು ಫುಲ್ ಕ್ಲಾಸ್ !!

10/08/2021, 13:09

ಕಾರ್ಕಳ(reporterkarnataka.com): ತಡವಾಗಿ ಸಭೆಗೆ ಆಗಮಿಸಿದ ಅಧಿಕಾರಿಯನ್ನು ನೂತನ ಸಚಿವ ಗೇಟ್ ಔಟ್ ಮಾಡಿದ ಘಟನೆ ಕಾರ್ಕಳದಲ್ಲಿ ನಡೆದಿದೆ. ಸಭೆ ಮುಗಿಯುವ ವರೆಗೆ ಹೊರಗಡೆ ನಿಂತಿದ್ದ ಅಧಿಕಾರಿಗೆ ಸಚಿವರು ನಂತರ ಫುಲ್ ಕ್ಲಾಸ್ ಕೂಡ ತೆಗೆದುಕೊಂಡರು.

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ ಕಾರ್ಕಳ ತಾಲೂಕು ಪಂಚಾಯತ್ ಸಾಮರ್ಥ್ಯ ಸೌಧದಲ್ಲಿ ಸಭೆ ಆರಂಭವಾಗಿತ್ತು. ಜಲಜೀವನ್ ವಿಷನ್ ಯೋಜನೆಗೆ ಸಂಬಂಧಿಸಿದ ಮಾಹಿತಿಯನ್ನು ಸಚಿವರು ಕೇಳಿದರು. ಆದರೆ ಉತ್ತರಿಸಲು ಇಲಾಖೆಗೆ ಸಂಬಂಧಿಸಿದ ಯಾವುದೇ ಅಧಿಕಾರಿಗಳು ಇರಲಿಲ್ಲ. 

ಸಚಿವರು ಸಭೆ ಮುಂದುವರಿಸಿದರು. ತುಂಬಾ ಹೊತ್ತು ಕಳೆದ ಬಳಿಕ ಜಲಮಿಷನ್ ಯೋಜನೆಗೆ ಸಂಬಂಧಿಸಿದ ಅಧಿಕಾರಿ ಸಭೆಗೆ ಎಂಟ್ರಿ ಕೊಟ್ಟರು. ತಕ್ಷಣ ಗರಂ ಆದ ಸಚಿವರು ಅಧಿಕಾರಿಯನ್ನು ಸಭೆಯಿಂದ ಹೊರಗೆ ಕಳುಹಿಸಿದರು. ಸಭೆ ಮುಗಿದು ಸಚಿವರು ಹೊರಗೆ ಹೋಗುವ ವೇಳೆಯೂ ಅಧಿಕಾರಿ ಅಲ್ಲೇ ನಿಂತಿದ್ದರು. ಇದನ್ನು ಗಮನಿಸಿದ ಸುನಿಲ್ ಕುಮಾರ್ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು. 

ಇತ್ತೀಚಿನ ಸುದ್ದಿ

ಜಾಹೀರಾತು