11:49 AM Wednesday10 - June 2026
ಬ್ರೇಕಿಂಗ್ ನ್ಯೂಸ್
ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ

ಇತ್ತೀಚಿನ ಸುದ್ದಿ

ಭಂಡಾರಿಬೆಟ್ಟು: 18ರಂದು ಬಂಟ್ವಾಳ ಭಂಡಾರಿ ಸಮಾಜದ ಕ್ರೀಡೋತ್ಸವ

17/02/2024, 03:44

ಬಂಟ್ವಾಳ(reporterkarnataka.com): ಭಂಡಾರಿ ಸಮಾಜ ಸಂಘ ಭಂಡಾರಿ ಮತ್ತು ಯುವ ವೇದಿಕೆ ಹಾಗೂ ಭಂಡಾರಿ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಭಂಡಾರಿ ಸಮಾಜ ಬಾಂಧವರ ಕ್ರೀಡೋತ್ಸವವು 18 ಭಾನುವಾರದಂದು ಬಂಟ್ವಾಳ ಭಂಡಾರಿಬೆಟ್ಟು ಎಸ್. ವಿ. ಎಸ್. ಶಾಲಾ ಮೈದಾನದಲ್ಲಿ ಸಂಘದ ಅಧ್ಯಕ್ಷ ಗೋಪಾಲ ಭಂಡಾರಿ ಪುಣ್ಕೇದಡಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಪತ್ರಕರ್ತ ಕಿರಣ್ ಸರಪಾಡಿ ಕ್ರೀಡೋತ್ಸವವನ್ನು ಉದ್ಘಾಟಿಸಲಿದ್ದಾರೆ. ಸಂಘದ ಗೌರವ ಅಧ್ಯಕ್ಷ ದಿವಾಕರ ಶಂಭೂರು, ಅಮಾಟಡಿ ಗ್ರಾಮ ಪಂಚಾಯತ್ ಸದಸ್ಯ ಬಿ.ಬಾಬು ಭಂಡಾರಿ,ಬಿ.ಎಸ್.ಎನ್.ಎಲ್. ನ ನಿವೃತ್ತ ಅಧೀಕ್ಷಕಿ ಯಶೋಧಾ ಎನ್. ಭಂಡಾರಿ, ಬಾಳ್ತಿಲ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಯಶ್ವಿತಾ ಮಂಜುನಾಥ್, ಬಂಟ್ವಾಳ ಪುರಸಭೆ ಸದ್ಯಸ್ಯೆ ಶಶಿಕಲಾ ಪ್ರಭಾಕರ್ ಭಂಡಾರಿ,ಯುವ ವೇದಿಕೆ ಅಧ್ಯಕ್ಷ ರಮೇಶ್ ಭಂಡಾರಿ ಮೈರನಪಾದೆ,ಭಂಡಾರಿ ಮಹಿಳಾ ವೇದಿಕೆ ಅಧ್ಯಕ್ಷೆ ಜಯಶ್ರೀ ಸುರೇಶ್ ತುಂಬೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಅಂದು ಸಾಯಂಕಾಲ ನಡೆಯುವ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಉಪನ್ಯಾಸಕ ಸುರೇಶ್ ನಂದೊಟ್ಟು, ಪ್ರವೀಣ್ ಕುಮಾರ್ ಪಡೀಲ್ ಮಂಗಳೂರು ಪ್ರತಿಮಾ ಮನೋಹರ್ ಹಿರ್ಣಿ ಸಿವಿಲ್ ಇಂಜಿನಿಯರ್ ರಾಜೇಶ್ ಬಂಟ್ವಾಳ ಆಗಮಿಸಲಿದ್ದಾರೆ ಎಂಬುದಾಗಿ ಸಂಘದ ಕಾರ್ಯದರ್ಶಿ ಜಯರಾಮ್ ಭಂಡಾರಿ ನಿತ್ಯಾನಂದ ನಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು