11:51 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕಡೂರು: ಆಫ್ ಮರ್ಡರ್ ಕೇಸಿನಲ್ಲಿ ಜೈಲು ಸೇರಿದ್ದ ಆರೋಪಿ ಯುವಕನ‌ ಕತ್ತು ಸೀಳಿ ಭೀಕರ ಕೊಲೆ

17/02/2024, 13:43

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com
ಆಫ್ ಮರ್ಡರ್ ಕೇಸಿನಲ್ಲಿ ಜೈಲು ಸೇರಿ ಬಿಡುಗಡೆಗೊಂಡಿದ್ದ
ತುಮಕೂರು ಮೂಲದ ಯುವಕನೊಬ್ಬನನ್ನು ಕಾಫಿನಾಡ ಕಡೂರಿನಲ್ಲಿ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಲಾಗಿದೆ.
ದರ್ಶನ್ (21) ಮೃತ ದುರ್ದೈವಿ.
ಕಡೂರು ತಾಲೂಕಿನ ಹುಲಿಗೊಂದಿ ಹೊಸೂರು ಬಳಿ ದುಷ್ಕರ್ಮಿಗಳು
ಯುವಕನ ಕತ್ತು ಸೀಳಿ ಬರ್ಬರವಾಗಿ ಕೊಲೆಗೈದಿದ್ದಾರೆ.

ದರ್ಶನ್ ಅವರು ತುಮಕೂರು ಜಿಲ್ಲೆ ಮಧುಗಿರಿ ಮೂಲದವರು.
ಬೆಂಗಳೂರಿನಲ್ಲಿ ಡ್ರೈವರ್ ಕೆಲಸ ಮಾಡುತ್ತಿದ್ದ. ಆಫ್ ಮರ್ಡರ್ ಕೇಸಿನಲ್ಲಿ ಜೈಲು ಸೇರಿದ್ದ.
ಜಾಮೀನು ಸಿಕ್ಕ ಬಳಿಕ ಇಬ್ಬರು ಸ್ನೇಹಿತರ ಜೊತೆ ಕಡೂರಿಗೆ ಬಂದಿದ್ದ ಎನ್ನಲಾಗಿದೆ.
ಕಡೂರಿನ ಮಾಡಾಳು ಗ್ರಾಮದ ತಾತನ ಮನೆಯಲ್ಲಿ ಇದ್ದನು
ವಾರದ ಹಿಂದೆ ಬೆಂಗಳೂರಿಗೆ ವಾಪಸ್ ಹೋಗಿದ್ದ. ನಿನ್ನೆ ರಾತ್ರಿ ಕಾರಿನಲ್ಲಿ ಬಂದ ಸ್ನೇಹಿತರ ಜೊತೆ ಹೋಗಿದ್ದ. ತಾತನಿಗೆ ಫ್ರೆಂಡ್ಸ್ ಬಂದಿದ್ದಾರೆ, ಹೊಲದ ಶೆಡ್ ನಲ್ಲಿ ಮಲಗುತ್ತೇನೆ ಎಂದು ಹೇಳಿ ಹೋಗಿದ್ದ. ದರ್ಶನ್ ಕಾರಿನಲ್ಲಿ ಹೋಗಿದ್ದನ್ನ ದರ್ಶನ್ ತಾತ ಕೂಡ ನೋಡಿದ್ದರು.
ರಾತ್ರಿ ಹೊಲಕ್ಕೆ ಹೋಗಿ ನೋಡಿದಾಗ ಶೆಡ್ ನಲ್ಲಿ ದರ್ಶನ್ ಇರಲಿಲ್ಲ. ಸ್ನೇಹಿತರ ಜೊತೆ ಎಲ್ಲೋ ಹೋಗಿರಬಹುದು ಎಂದು ತಾತ ಮನೆಗೆ ಬಂದಿದ್ದರು.ಬೆಳಗ್ಗೆ ಮಾಡಾಳು ಗ್ರಾಮದ ತುಸು ದೂರದಲ್ಲಿ ದರ್ಶನ್ ಮೃತದೇಹ ಪತ್ತೆಯಾಗಿದೆ. ಯಾವ ವಿಚಾರಕ್ಕೆ, ಯಾರು ಕೊಲೆಗೈದಿದ್ದಾರೆ ಅನ್ನೋದು ನಿಗೂಢವಾಗಿದೆ. ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು