7:45 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಕೋಲಾರದಲ್ಲಿ ಕೆಸಿ ವ್ಯಾಲಿ 2ನೇ ಹಂತದ ಯೋಜನೆ ಅನುಷ್ಠಾನ: ಅನುದಾನ ನೀಡಲು ಕೇಂದ್ರ ಸಚಿವರಿಗೆ ವೈಎಎನ್ ಮನವಿ

11/08/2021, 08:24

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಅಂತರ್ಜಲ1200 ಅಡಿಗಳಿಗೆ ಹೋಗಿ ತೀವ್ರ ಸಂಕಷ್ಟ ಅನುಭವಿಸುತ್ತಿರುವ ಕೋಲಾರ ಜಿಲ್ಲೆಯ ಕೆರೆಗಳನ್ನು ತುಂಬಿಸಲು ಕೆಸಿ ವ್ಯಾಲಿ 2ನೇ ಹಂತದ ಯೋಜನೆ ಅನುಷ್ಠಾನಕ್ಕೆ ತಗಲುವ 500 ಕೋಟಿ ರೂ ಅನುದಾನ ಒದಗಿಸುವಂತೆ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ಸಚಿವ ಮಾಧುಸ್ವಾಮಿ ಹಾಗೂ ವಿಧಾನಪರಿಷತ್ ಶಾಸಕ ಡಾ.ವೈ.ಎ.ನಾರಾಯಣಸ್ವಾಮಿ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಸಚಿವ ಮಾಧುಸ್ವಾಮಿ ಅವರೊಂದಿಗೆ ನಿಯೋಗದಲ್ಲಿ ತೆರಳಿದ್ದ ವೈಎಎನ್ ಅವರು , ಕೇಂದ್ರ ಸಚಿವರಿಗೆ ಮನವಿ ಮಾಡಿ , ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ 1200 ಅಡಿಗಳಿಗೆ ದಾಟಿದೆ , ಕೊಳವೆಬಾವಿಗಳಲ್ಲಿ ಸಿಗುವ ನೀರು ಪೈರೈಡ್ ಮಿಶ್ರಿತವಾಗಿದ್ದು , ಜನರ ಬದುಕು ದುಸ್ತರವಾಗಿದೆ ಎಂದು ತಿಳಿಸಿದರು. 

ಈಗಾಗಲೇ ಬೆಂಗಳೂರು ನಗರದ ತ್ಯಾಜ್ಯ ನೀರು ಕೆಸಿ ವ್ಯಾಲಿ ಮೊದಲನೇ ಹಂತದ ಯೋಜನೆ ಮೂಲಕ ಕೋಲಾರ ಜಿಲ್ಲೆಯ ಹಲವಾರು ಕೆರೆಗಳಿಗೆ ತುಂಬಿಸಲಾಗಿದ್ದು , ಇದರಿಂದ ಕೆರೆಗಳಿಗೆ ನೀರು ತುಂಬಿದ ಜಾಗದಲ್ಲಿ ರೈತರ ಕೊಳವೆ ಬಾವಿಗಳಲ್ಲಿ ಅಂತರ್ಜಲ ವೃದ್ಧಿಯಾಗಿದೆ ಎಂದು ಮನವರಿಕೆ ಮಾಡಿಕೊಟ್ಟರು. ಕೆಸಿ ವ್ಯಾಲಿ ಯೋಜನೆಯ ಮೂಲಕ ಜಿಲ್ಲೆಯ ಎಲ್ಲ ಕೆರೆಗಳಿಗೂ ನೀರು ಹರಿಸುವುದರಿಂದ ಅಂತರ್ಜಲ ವೃದ್ಧಿಗೆ ಸಹಕಾರಿಯಾಗಲಿದ್ದು , ಕೃಷಿಯನ್ನೇ ನಂಬಿದ ಜನರ ಬದುಕು ಹಸನಾಗಲಿದೆ ಎಂದು ತಿಳಿಸಿದರು . 

ಕೊಳಚೆ ನೀರನ್ನು ಸಂಸ್ಕರಿಸಿ ಕೋಲಾರಕ್ಕೆ ಹರಿಸಲಾಗುತ್ತಿದ್ದು , 2ನೇ ಹಂತದ ಯೋಜನೆ ಆನು ನಿನಗಂಡರೆ ಮತ್ತಷ್ಟು ಕರಗಳಿಗೆ ನೀರು ಹರಿಸುವುದರಿಂದ ಜಳ ಹಸಿರಾಗಲಿದೆ ಎಂದ ಅವರು , ಈಗಾಗಲೇ ಈ ಸಂಬಂಧ ಯೋಜನೆ ತಯಾರಾಗಿದ್ದು , ಇದಕ್ಕೆ ಅಗತ್ಯ ಅನುದಾನ ಒದಗಿಸುವಂತೆ ಕೋರಿದರು . ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಗಜೇಂದ್ರಸಿಂಗ್ ಷೇಖಾವತ್ , ಅನುದಾನ ಒದಗಿಸುವ ಭರವಸೆ ನೀಡಿದರು . ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ , ಶೋಭಾ ಕರಂದ್ಲಾಜೆ , ಎ.ನಾರಾಯಣಸ್ವಾಮಿ. ಭಗವಂತ್ ಕೂಬಾ ಉಪಸ್ಥಿತರಿದ್ದರು . 

ಇತ್ತೀಚಿನ ಸುದ್ದಿ

ಜಾಹೀರಾತು