10:08 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸರಕಾರಿ ದಾಖಲೆ ತಿದ್ದಿ ಬೊಕ್ಕಸಕ್ಕೆ ನಷ್ಟ: ಹಿಂದಿನ ಪೌರಾಯುಕ್ತ, ಕಂದಾಯ ಸಿಬ್ಬಂದಿ ವಿರುದ್ಧ 420 ಕೇಸು ದಾಖಲು

18/02/2024, 21:38

*ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಶಾಸಕ ದರ್ಶನ್ ದ್ರುವ ನಾರಾಯಣ್ ನೇತೃತ್ವದಲ್ಲಿ ನಂಜನಗೂಡು ನಗರಸಭೆಗೆ ಸರ್ಜರಿ*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com
ಸರ್ಕಾರಿ ದಾಖಲೆಗಳನ್ನ ತಿದ್ದಿ ಕೆಲವು ಕಡತಗಳನ್ನ ನಾಪತ್ತೆ ಮಾಡಿ ನಿವೇಶನಗಳ ಖಾತೆ ಮಾಡುವ ವೇಳೆ ನಿಯಮಗಳನ್ನು ಗಾಳಿಗೆ ತೂರಿ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ ಇಬ್ಬರು ಅಧಿಕಾರಿಗಳ ವಿರುದ್ದ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ನಗರಸಭೆ ಹಿಂದಿನ ಪೌರಾಯುಕ್ತರಾದ ಎಂ.ರಾಜಣ್ಣ ಹಾಗೂ ವಿಷಯ ನಿರ್ವಾಹಕ ಡಿ.ಎನ್.ನರಸಿಂಹಮೂರ್ತಿ ಮೇಲೆ ಹಾಲಿ ಪೌರಾಯುಕ್ತ ನಂಜುಂಡಸ್ವಾಮಿ ಎಫ್ ಐ ಆರ್. ದಾಖಲಿಸಿದ್ದಾರೆ.
ನಂಜನಗೂಡು ತಾಲೂಕು ದೇಬೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೇವೀರಮ್ಮನಹಳ್ಳಿ ಸರ್ವೆ ನಂ 58,59ರ ವಿಸ್ತೀರ್ಣ 3.16 ಬಿ.ಬಸ್ಸಪ್ಪ ಎಂಬುವರಿಗೆ ಸೇರಿದ್ದು ಕೈಗಾರಿಕಾ ಉದ್ದೇಶಕ್ಕಾಗಿ ಉಪವಿಭಾಗಾಧಿಕಾರಿಗಳು ಅನ್ಯಕ್ರಾಂತ ಮಂಜೂರು ಮಾಡಿದ್ದಾರೆ.
ನಂತರ ವಸತಿ ಬಡಾವಣೆ ನಿರ್ಮಿಸಲು ಸಹ ಬದಲಾವಣೆ ಆದೇಶ ಮಾಡಿದ್ದಾರೆ.
ವಸತಿ ಮನೆ ನಿರ್ಮಿಸಬೇಕಿದ್ದಲ್ಲಿ ಮೈಸೂರು-ನಂಜನಗೂಡು ಯೋಜನಾ ಪ್ರಾಧಿಕಾರದಿಂದ ಅಧಿಕೃತ ಬಡಾವಣೆ ನಕ್ಷೆ ಅನುಮೋದನೆ ಪಡೆಯಬೇಕಿತ್ತು.
ಆದರೆ ಸಕ್ಷಮ ಪ್ರಾಧಿಕಾರದಿಂದ ನಕ್ಷೆ ಸಹ ಅನುಮೋದನೆ ಆಗಿಲ್ಲ.
ಹಿಂದಿನ ಪೌರಾಯುಕ್ತರಾದ ಎಂ.ರಾಜಣ್ಣ ಹಾಗೂ ವಿಷಯ ನಿರ್ವಾಹಕರಾದ ಡಿ.ಎನ್.ನರಸಿಂಹಮೂರ್ತಿ ಸಂಖ್ಯೆ 106ರ ಆಸ್ತಿ ವಹಿಯಲ್ಲಿ ನಿವೇಶನ ಸಂಖ್ಯೆ 1ರಿಂದ 48 ರವರೆಗೆ ವಿವಿದ ಅಸೆಸ್ ಮೆಂಟ್ ಗಳಲ್ಲಿ ವಿವಿದ ಅಳತೆಗಳನ್ನ ನಮೂದಿಸಿ ಗಂಗಮ್ಮ ಎಂಬುವರ ಹೆಸರಿಗೆ ಖಾತೆ ದಾಖಲಿಸಿದ್ದಾರೆ.


ಇವೆಲ್ಲಾ ಪ್ರಕ್ರಿಯೆಗಳನ್ನ ನಡೆಸುವಾಗ ಭಾರಿ ಅಕ್ರಮ ನಡೆಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.ಅಕ್ರಮಗಳ ಬಗ್ಗೆ ಪರಿಶೀಲನೆ ನಡೆಸುವ ವೇಳೆ ಕೆಲವೆಡೆ ಹೆಸರುಗಳನ್ನ ಖಾಲಿ ಬಿಡಲಾಗಿದೆ.ಕೆಲವೆಡೆ ತಿದ್ದಿ ಬರೆದಿದ್ದಾರೆ. ಮತ್ತೆ ಕೆಲವು ಕಡತಗಳೇ ನಾಪತ್ತೆಯಾಗಿದೆ.
ಈ ಹಿನ್ನಲೆ ಮೈಸೂರು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶದಂತೆ ಹಿಂದಿನ ಪೌರಾಯುಕ್ತರಾದ ಎಂ.ರಾಜಣ್ಣ ಹಾಗೂ ವಿಷಯ ನಿರ್ವಾಹಕ ಡಿ.ಎನ್.ನರಸಿಂಹಮೂರ್ತಿ ವಿರುದ್ದ ಹಾಲಿ ಪೌರಾಯುಕ್ತರಾದ ನಂಜುಂಡಸ್ವಾಮಿ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು