12:37 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ನಂಜನಗೂಡು: ಎಸ್ಸೆಸ್ಸೆಲ್ಸಿ ಮಕ್ಕಳಿಗಾಗಿ ಫೇರ್ ವೆಲ್ ಕಾರ್ಯಕ್ರಮ; ನುರಿತ ವಿಷಯ ತಜ್ಞ ಶಿಕ್ಷಕರಿಂದ ಧೈರ್ಯ ತುಂಬುವ ಕೆಲಸ

20/02/2024, 19:16

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡಿನ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲೊಂದಾದ ಶ್ರೀ ನೀಲಕಂಠೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅರುಣೇಶ್ ಹಾಗೂ ಶಿಕ್ಷಣ ಸಂಯೋಜಕ ರಮೇಶ್ ಸೇರಿದಂತೆ ಮತ್ತಿತರ ಗಣ್ಯರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.
ಬಳಿಕ ಶಿಕ್ಷಣ ಸಂಯೋಜಕರಾದ ರಮೇಶ್ ಮಾತನಾಡಿ, ಬುದ್ಧಿವಂತಿಕೆಯಿಂದ ಏನು ಪ್ರಯೋಜನವಿಲ್ಲ. ಶಿಕ್ಷಕರ ಬದ್ಧತೆ ಹಾಗೂ ವಿದ್ಯಾರ್ಥಿಗಳ ಪರಿಶ್ರಮದಿಂದ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ. ಹಾಗಾಗಿ ಉಳಿದ ಕೆಲವೇ ದಿನಗಳಲ್ಲಿ ಬರುವ ಪರೀಕ್ಷೆಯಲ್ಲಿ ತಮ್ಮ ಬುದ್ಧಿವಂತಿಕೆ ಹಾಗೂ ಆಟೊಗಳನ್ನು ಬದಿಗಿಟ್ಟು ಪರಿಶ್ರಮದ ಕಡೆಗೆ ಗಮನ ಕೊಡಿ ಎಂದು ಕಿವಿಮಾತು ಹೇಳಿದರು.


ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಕುಮಾರ್ ಮಾತನಾಡಿ, ಕೆಲವರ ಪರಿಶ್ರಮದಿಂದಾಗೀ 34 ವರ್ಷಗಳಿಂದ ಈ ಶಾಲೆ ಉತ್ತಮವಾಗಿ ಬೆಳೆದು ಬಂದಿದೆ. ಅದರಲ್ಲೂ ಒಂದು ಶಾಲೆ ಬೆಳೆಯಬೇಕಾದರೆ ಅದರಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯ ಎಂದರು.
ಕಳೆದ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಮ್ಮ ಶಾಲೆಯು ಶೇ. 98 ಫಲಿತಾಂಶ ಪಡೆದಿತ್ತು. ಈ ಸಾಲಿನಲ್ಲಿ ನಮ್ಮ ಶಿಕ್ಷಕರ ಪರಿಶ್ರಮದ ಜೊತೆಗೆ ಶಿಕ್ಷಣ ಸಂಯೋಜಕರು ಮತ್ತು ವಿಷಯವಾರು ತಜ್ಞರ ಸಲಹೆ ಯೊಂದಿಗೆ ಶೇಕಡ ನೂರಕ್ಕೆ ನೂರರಷ್ಟು ಫಲಿತಾಂಶ ತಂದೇ ತರುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಇದೇ ಸಂದರ್ಭ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಪೂರಕವಾಗಿ ಎಲ್ಲಾ ವಿಷಯವಾರು ತಜ್ಞ ಶಿಕ್ಷಕರನ್ನು ಕರೆಸಿ ಅವರಿಂದ ಮಕ್ಕಳಿಗೆ ಪರೀಕ್ಷೆಯ ಬಗ್ಗೆ ಮಾಹಿತಿ ಹಾಗೂ ಧೈರ್ಯ ತುಂಬುವಂತಹ ಕೆಲಸ ಮಾಡಲಾಯಿತು ಹಾಗೂ ಎಲ್ಲಾ ವಿಷಯವಾರು ತಜ್ಞ ಶಿಕ್ಷಕರನ್ನು ಶಾಲಾ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಬಳಿಕ ವಿದ್ಯಾರ್ಥಿಗಳು ನಡೆಸಿಕೊಟ್ಟ ಫ್ಯಾಷನ್ ಶೋ ಮತ್ತು ನೃತ್ಯ ಕಾರ್ಯಕ್ರಮಗಳು ನೋಡುಗರ ಮನಸೂರೆಗೊಂಡವು. ಫ್ಯಾಶನ್ ಶೋನಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಈ ಸಂದರ್ಭ ಬಹುಮಾನ ವಿತರಣೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು