2:18 PM Wednesday8 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಫೀಡರ್ ಗಳಲ್ಲಿ ತುರ್ತು ದುರಸ್ತಿ ಕಾರ್ಯ: ನಾಳೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ; ಎಲ್ಲೆಲ್ಲಿ? ಮುಂದಕ್ಕೆ ಓದಿ ನೋಡಿ

11/08/2021, 08:30

ಮಂಗಳೂರು(reporterkarnataka.com):- ಇದೇ ಆ. 12ರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಕೆಪಿಟಿಸಿಎಲ್ 220/110/11ಕೆವಿ ಬಜಪೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕಟೀಲು, ಪೆರಾರ, ಈಶ್ವರಕಟ್ಟೆ, ಕಳವಾರು, ಪೆರ್ಮುದೆ, ಬಜಪೆ ಟೌನ್, ಸುಂಕದಕಟ್ಟೆ, ವಾಟರ್ ಸಪ್ಲೈ ಫೀಡರ್ ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದ್ದು, ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಪೆರ್ಮುದೆ, ಭಟ್ರಕೆರೆ, ಕಣಿಕಟ್ಟ, ಹುಣ್ಸೆಕಟ್ಟೆ, ತೆಂಕ ಎಕ್ಕಾರು, ಎಕ್ಕಾರು,  ಬಜಪೆ, ಕಿನ್ನಿಪದವು, ಈಶ್ವರ ಕಟ್ಟೆ, ಮುರ, ಶಾಸ್ತಾವು, ಕಿನ್ನಿಕಂಬ್ಳ, ಮೂಡುಪೆರಾರ, ಕೊಳಪಿಲ, ಅರಿಕೆಪದವು, ಶಾಲೆಪದವು, ಕೊಂಪದವು, ಕರಿಕುಮೇರು, ಕಾಪಿಕಾಡು, ನೆಲ್ಲಿಗುಡ್ಡೆ, ಕತ್ತಲ್ ಸಾರ್, ಸೌಹಾರ್ದನಗರ, ಸಿದ್ದಾರ್ಥ ನಗರ, ಜರಿನಗರ, ಅಂಬಿಕಾನಗರ, ಸುಂಕದಕಟ್ಟೆ, ಕಳವಾರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ  ವಿದ್ಯುತ್ ನಿಲುಗಡೆಯಾಗಲಿದೆ.  
ನಂದಿಗುಡ್ಡ: ಆಗಸ್ಟ್ 12ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ 33/11ಕೆವಿ ನಂದಿಗುಡ್ಡ ಉಪಕೇಂದ್ರದಿಂದ ಹೊರಡುವ 11ಕೆವಿ ಮಂಗಳಾದೇವಿ ಫೀಡರ್ ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್.  ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ.
  ಆ ಪ್ರಯುಕ್ತ ಮಂಗಳಾನಗರ, ಸುಭಾಶ್ನಗರ, ಶಿವನಗರ, ಪಾಂಡೇಶ್ವರ, ಎಮ್ಮೆಕೆರೆ, ಹೊಯ್ಗೆಬಜಾರ್, ಗೂಡ್ಸ್ಶೆಡ್, ಮಂಕೀಸ್ಟ್ಯಾಂಡ್, ಮಂಗಳಾದೇವಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ. 
ನೆಹರೂ ಮೈದಾನ: 33/11 ಕೆವಿ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11 ಕೆವಿ ಪಾಂಡೇಶ್ವರ ಫೀಡರ್‍ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್. ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. 
ಆ ಪ್ರಯುಕ್ತ ಆಗಸ್ಟ್ 12ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೆ ಎ.ಬಿ.ಶೆಟ್ಟಿ ಸರ್ಕಲ್, ಭಾರತೀಯ ವಿಶ್ವವಿದ್ಯಾಭವನ, ಎಸ್.ಪಿ.ಆಫೀಸ್, ಪಾಂಡೇಶ್ವರ ರಸ್ತೆ, ಪಾಂಡೇಶ್ವರ ನ್ಯೂ ರಸ್ತೆ, ಅಮೃತ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.   

ಇತ್ತೀಚಿನ ಸುದ್ದಿ

ಜಾಹೀರಾತು