2:05 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಪಾಂಡೇಶ್ವರ: ಪತಂಜಲಿ ಯೋಗ ಪ್ರತಿಷ್ಠಾನದ ವತಿಯಿಂದ ಸಾಮೂಹಿಕ ಸೂರ್ಯ ನಮಸ್ಕಾರ

20/02/2024, 20:02

ಮಂಗಳೂರು(reporterkarnataka.com): ಶ್ರೀ ಪತಂಜಲಿ ಯೋಗ ಪ್ರತಿಷ್ಠಾನದ ವತಿಯಿಂದ ಪಾಂಡೇಶ್ವರ ದ. ಕ. ಜಿಪಂ ಪ್ರೌಡ ಶಾಲೆ, ಮಕ್ಕಳಿಗೆ ಸಾಮೂಹಿಕ ಸೂರ್ಯನಮಸ್ಕಾರ ಕಾರ್ಯಕ್ರಮ ನಡೆಸಿದರು.
ಅಧ್ಯಕ್ಷತೆಯನ್ನು ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯ ಲತಿಫ್ ವಹಿಸಿದ್ದರು. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಎಸ್ ಡಿಎಂಸಿ ಅಧ್ಯಕ್ಷೆ ಬೃಂದಾ, ಗಾಯತ್ರಿ ಅತಿಥಿಯಾಗಿದ್ದರು. ಉದ್ಯಮಿ ಮುನೀರ್ ಉಪಸ್ಥಿತರಿದ್ದರು.
ಪ್ರತಿಷ್ಠಾನದ ಜತೆ ಕಾರ್ಯದರ್ಶಿ ಪ್ರಭಾ, ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್, ಶಿಕ್ಷಕ ಅಶೋಕ ಪೂಜಾರಿ ಅವರು ಭಾಗವಹಿಸಿದ್ದರು.

ಮುಖ್ಯ ಅತಿಥಿ ಶ್ರೀನಿವಾಸ ನಾಯಕ್ ಇಂದಾಜೆ ಹಾಗೂ ಪ್ರಭಾ ಅವರು ಸೂರ್ಯನಮಸ್ಕಾರ ಮತ್ತು ಯೋಗದ ಮಹತ್ವ ಮತ್ತು ರಥಸಪ್ತಮಿಯ ವಿಶೇಷತೆಯನ್ನು ತಿಳಿಸಿದರು.
ಸುಮಾರು 50 ಮಕ್ಕಳು ಸ್ವಯಂಪ್ರೇರಿತರಾಗಿ ಮಕ್ಕಳು 60 ಸೂರ್ಯ ನಮಸ್ಕಾರ ಮಾಡಿ ಆಯೋಜಕರನ್ನು ಅಚ್ಚರಿಗೊಳಗಾಗಿಸಿದರು.
ರಮಾ ಲಕ್ಷ್ಮಿನಾರಾಯಣ ಶಾಖೆಯ ಶಿಕ್ಷಕ ಪ್ರೇಮನಾಥ ಸುವರ್ಣ, ವಸಂತ ಶೆಟ್ಟಿ ಮಾರಿಗುಡಿ ಶಾಖೆಯ ಶಿಕ್ಷಕಿ ಹರಿಣಿ ಮತ್ತು ಮೂರೂ ಶಾಖೆಗಳ ಬಂಧುಗಳು ಭಾಗವಹಿಸಿದ್ದರು.
ಶಿಕ್ಷಕಿ ವೀಣಾ ಪ್ರಾರ್ಥನೆ ಮಾಡಿದರು. ಶಿಕ್ಷಕಿ ಸಾವಿತ್ರಿ ವಂದನಾರ್ಪಣೆಗೈದರು. ಶಿಕ್ಷಕಿ ತೇಜಶ್ರೀ ನಿರೂಪಣೆ ಮಾಡಿದರು. ಮುಖ್ಯೋಪಾಧ್ಯಾಯಿನಿ ಶಾಲಿನಿ ಅವರು ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು