10:15 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ನಂಜನಗೂಡು: ಗ್ರಾಮೀಣ ಪ್ರದೇಶದ ಮನೆಗಳ ಕದ ತಟ್ಟಿದ ವಿದ್ಯಾರ್ಥಿಗಳು; ಬಡವರ ಮನೆ ಬಾಗಿಲಿಗೆ ಸಂವಿಧಾನ ಪೀಠಿಕೆ

20/02/2024, 19:52

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಜನರ ಮತ ಸೆಳೆಯುವ ಸಲುವಾಗಿ ಇಲ್ಲಸಲ್ಲದ ಸೌಲಭ್ಯಗಳನ್ನು ನಿಮ್ಮ ಮನೆಯ ಬಾಗಿಲಿಗೆ ತಲುಪಿಸುತ್ತೇವೆ ಎಂಬ ಭರವಸೆಯನ್ನು ಮಾತ್ರ ನೀಡುತ್ತಾರೆ . ಆದರೆ ವಸತಿ ಶಾಲೆಯ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದ ಬಡಜನರ ಮನೆ ಬಾಗಿಲು ತಟ್ಟಿ ವಿನೂತನ ಜಾಗೃತಿ ಕಾರ್ಯಕ್ರಮಕ್ಕೆ ಮುಂದಾಗಿರುವುದು ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.


ಹಾಗಾದ್ರೆ ಅದು ಏನು ಅಂತೀರಾ..! ನಂಜನಗೂಡು ತಾಲ್ಲೂಕಿನ ಸಿಂಧುವಳ್ಳಿ ಗ್ರಾಮದ ಬಳಿ ಇರುವ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಂದ ಮನೆ ಮನೆಗೆ ಸಂವಿಧಾನ ಜಾಗೃತಿ ಮತ್ತು ಮನ ಮನಕ್ಕೆ ಅಂಬೇಡ್ಕರ್ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಶಾಲೆಯ ಪ್ರಾಂಶುಪಾಲರಾದ ಎಸ್. ಸಿದ್ದರಾಜು ಹಾಗೂ ಶಿಕ್ಷಕರ ನೇತೃತ್ವದ ತಂಡ ವಿದ್ಯಾರ್ಥಿಗಳ ಜೊತೆಗೂಡಿ ಸಿಂಧುವಳ್ಳಿ ಗ್ರಾಮಕ್ಕೆ ತೆರಳಿ ಎಲ್ಲಾ ವರ್ಗದ ಜನರ ಬಡಾವಣೆಗಳಿಗೆ ಮತ್ತು ಮನೆಯ ಬಾಗಿಲಿಗೆ ತೆರಳಿ ಸಂವಿಧಾನದ ಪೀಠಿಕೆಯನ್ನು ಓದಿಸುವುದರ ಮೂಲಕ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ .
ಮನೆಗಳಿಗೆ ತೆರಳಿ ಮಹಿಳೆಯರು ಮತ್ತು ಮನೆಯ ಯಜಮಾನರುಗಳಿಗೆ ಗ್ರಾಮದ ಮುಖಂಡರುಗಳಿಗೆ ಸಂವಿಧಾನದ ಪೀಠಿಕೆಯನ್ನು ತೋರಿಸಿ ಅವರ ಬಾಯಿಂದ ಓದಿಸುವುದರ ಮೂಲಕ ಪ್ರಬುದ್ಧ ಸಮಾಜ ನಿರ್ಮಾಣಕ್ಕೆ ಮುಂದಾಗಿ ಅನಕ್ಷರತೆಯನ್ನು ತೊಲಗಿಸಿ ಕಡ್ಡಾಯವಾಗಿ ನಿಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಿ, ದೇಶದ ಸತ್ಪ್ರಜೆಗಳನ್ನಾಗಿ ಮಾಡಿ ಎಂಬ ಮಾಹಿತಿಯನ್ನು ನೀಡುವುದರ ಜೊತೆಗೆ ಸಂವಿಧಾನವನ್ನು ಉಳಿಸುವ ಜಾಗೃತಿಯನ್ನು ವಿದ್ಯಾರ್ಥಿಗಳು ಮತ್ತು ವಸತಿ ಶಾಲೆಯ ಶಿಕ್ಷಕರು ಮಾಡುತ್ತಿದ್ದಾರೆ.
ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಕಾರ್ಯವೈಖರಿಗೆ ನಂಜನಗೂಡಿನ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು