1:43 PM Sunday21 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ನಂಜನಗೂಡು: ಗ್ರಾಮೀಣ ಪ್ರದೇಶದ ಮನೆಗಳ ಕದ ತಟ್ಟಿದ ವಿದ್ಯಾರ್ಥಿಗಳು; ಬಡವರ ಮನೆ ಬಾಗಿಲಿಗೆ ಸಂವಿಧಾನ ಪೀಠಿಕೆ

20/02/2024, 19:52

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಜನರ ಮತ ಸೆಳೆಯುವ ಸಲುವಾಗಿ ಇಲ್ಲಸಲ್ಲದ ಸೌಲಭ್ಯಗಳನ್ನು ನಿಮ್ಮ ಮನೆಯ ಬಾಗಿಲಿಗೆ ತಲುಪಿಸುತ್ತೇವೆ ಎಂಬ ಭರವಸೆಯನ್ನು ಮಾತ್ರ ನೀಡುತ್ತಾರೆ . ಆದರೆ ವಸತಿ ಶಾಲೆಯ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದ ಬಡಜನರ ಮನೆ ಬಾಗಿಲು ತಟ್ಟಿ ವಿನೂತನ ಜಾಗೃತಿ ಕಾರ್ಯಕ್ರಮಕ್ಕೆ ಮುಂದಾಗಿರುವುದು ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.


ಹಾಗಾದ್ರೆ ಅದು ಏನು ಅಂತೀರಾ..! ನಂಜನಗೂಡು ತಾಲ್ಲೂಕಿನ ಸಿಂಧುವಳ್ಳಿ ಗ್ರಾಮದ ಬಳಿ ಇರುವ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಂದ ಮನೆ ಮನೆಗೆ ಸಂವಿಧಾನ ಜಾಗೃತಿ ಮತ್ತು ಮನ ಮನಕ್ಕೆ ಅಂಬೇಡ್ಕರ್ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಶಾಲೆಯ ಪ್ರಾಂಶುಪಾಲರಾದ ಎಸ್. ಸಿದ್ದರಾಜು ಹಾಗೂ ಶಿಕ್ಷಕರ ನೇತೃತ್ವದ ತಂಡ ವಿದ್ಯಾರ್ಥಿಗಳ ಜೊತೆಗೂಡಿ ಸಿಂಧುವಳ್ಳಿ ಗ್ರಾಮಕ್ಕೆ ತೆರಳಿ ಎಲ್ಲಾ ವರ್ಗದ ಜನರ ಬಡಾವಣೆಗಳಿಗೆ ಮತ್ತು ಮನೆಯ ಬಾಗಿಲಿಗೆ ತೆರಳಿ ಸಂವಿಧಾನದ ಪೀಠಿಕೆಯನ್ನು ಓದಿಸುವುದರ ಮೂಲಕ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ .
ಮನೆಗಳಿಗೆ ತೆರಳಿ ಮಹಿಳೆಯರು ಮತ್ತು ಮನೆಯ ಯಜಮಾನರುಗಳಿಗೆ ಗ್ರಾಮದ ಮುಖಂಡರುಗಳಿಗೆ ಸಂವಿಧಾನದ ಪೀಠಿಕೆಯನ್ನು ತೋರಿಸಿ ಅವರ ಬಾಯಿಂದ ಓದಿಸುವುದರ ಮೂಲಕ ಪ್ರಬುದ್ಧ ಸಮಾಜ ನಿರ್ಮಾಣಕ್ಕೆ ಮುಂದಾಗಿ ಅನಕ್ಷರತೆಯನ್ನು ತೊಲಗಿಸಿ ಕಡ್ಡಾಯವಾಗಿ ನಿಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಿ, ದೇಶದ ಸತ್ಪ್ರಜೆಗಳನ್ನಾಗಿ ಮಾಡಿ ಎಂಬ ಮಾಹಿತಿಯನ್ನು ನೀಡುವುದರ ಜೊತೆಗೆ ಸಂವಿಧಾನವನ್ನು ಉಳಿಸುವ ಜಾಗೃತಿಯನ್ನು ವಿದ್ಯಾರ್ಥಿಗಳು ಮತ್ತು ವಸತಿ ಶಾಲೆಯ ಶಿಕ್ಷಕರು ಮಾಡುತ್ತಿದ್ದಾರೆ.
ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಕಾರ್ಯವೈಖರಿಗೆ ನಂಜನಗೂಡಿನ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು