5:35 AM Friday27 - March 2026
ಬ್ರೇಕಿಂಗ್ ನ್ಯೂಸ್
1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌…

ಇತ್ತೀಚಿನ ಸುದ್ದಿ

ವಿಶ್ವ ವಿಖ್ಯಾತ ಕೊಲ್ಲೂರು ದೇಗುಲದ ಹೆಸರಿನಲ್ಲಿ ವಂಚನೆ: ನಕಲಿ ಟ್ರಸ್ಟ್ ಕಾರ್ಯಾಚರಣೆ; ಪೊಲೀಸರಿಗೆ ದೂರು

20/02/2024, 22:29

ಕೊಲ್ಲೂರು(reporterkarnataka.com): ವಿಶ್ವ ವಿಖ್ಯಾತ ಕೊಲ್ಲೂರು ದೇಗುಲದ ಹೆಸರಿನಲ್ಲಿ ವಂಚನೆಯೊಂದು ಬೆಳಕಿಗೆ ಬಂದಿದೆ. ಕೊಲ್ಲೂರು ಮೂಕಾಂಬಿಕೆ ದೇಗುಲದ ಹೆಸರಿನಲ್ಲಿ ನಕಲಿ ಟ್ರಸ್ಟ್‌ ರಚಿಸಿ ಹಣ ಸಂಗ್ರಹಿಸಿದ ಪ್ರಕರಣ ಇದೀಗ ಬೆಳಕಿಗೆ ಬಂದಿದೆ.

ಕೊಲ್ಲೂರು ಡಿವೋಟಿಸ್ ಟ್ರಸ್ಟ್ ಅನ್ನುವ ನಕಲಿ ಲಿಂಕ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕೇರಳ ಮತ್ತು ತಮಿಳುನಾಡಿನ ಮೂಕಾಂಬಿಕೆ ಭಕ್ತರನ್ನು ಟಾರ್ಗೆಟ್ ಮಾಡಿ ಈ ನಕಲಿ ಟ್ರಸ್ಟ್ ನ ಲಿಂಕ್ ಹರಿಯಬಿಡಲಾಗಿದೆ.
ದೇಗುಲಕ್ಕೆ ದೇಣಿಗೆ, ಹರಕೆ ಸಲ್ಲಿಸುವ ಭಕ್ತರು ಇದರಲ್ಲಿ ದುಡ್ಡು ಕಳುಹಿಸಬಹುದು ಎಂದು ನಮೂದಿಸಲಾಗಿದೆ. ಭಕ್ತರೊಬ್ಬರು ಹಣ ಕಳಿಸಿರುವ ಬಗ್ಗೆ ದೇಗುಲಕ್ಕೆ ಇ-ಮೇಲ್ ಮಾಡಿದಾಗ ಈ ಅಕೌಂಟ್‍ಗೂ ದೇವಸ್ಥಾನಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟನೆ ಬಂದಿದೆ. ಈ ಟ್ರಸ್ಟ್ ವಿರುದ್ಧ ಈಗ ಕ್ರಮ ಕೈಗೊಳ್ಳುವಂತೆ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಕೇರಳದಲ್ಲಿ ಈ ಟ್ರಸ್ಟ್ ನೋಂದಣಿಯಾಗಿದೆ ಎನ್ನಲಾಗಿದೆ. ದೇಗುಲದ ಹೆಸರನ್ನು ದುರ್ಬಳಕೆ ಮಾಡಿಕೊಂಡು ಭಕ್ತರನ್ನು ವಂಚಿಸಲಾಗುತ್ತಿದೆ. 2022ರಿಂದ ಈ ಟ್ರಸ್ಟ್ ಹೆಸರಿನಲ್ಲಿ ಭಕ್ತರಿಗೆ ಮೋಸ ಮಾಡುಲಾಗುತ್ತಿದೆ ತಿಳಿದು ಬಂದಿದೆ. ಭಾರೀ ಮೊತ್ತದ ದುಡ್ಡು ಈ ಟ್ರಸ್ಟ್ ಲಪಟಾಯಿಸಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಮುಜರಾಯಿ ಇಲಾಖೆ ಸೂಕ್ತ ತನಿಖೆ ಮಾಡಬೇಕೆಂಬ ಒತ್ತಾಯ ಕೇಳಿಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು